Homeಕರ್ನಾಟಕವಿಸ್ಟ್ರಾನ್‌ ಬಿಕ್ಕಟ್ಟು: ಆಡಳಿತ ಮಂಡಳಿ, ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ ಜಗದೀಶ್‌ ಶೆಟ್ಟರ್‌

ವಿಸ್ಟ್ರಾನ್‌ ಬಿಕ್ಕಟ್ಟು: ಆಡಳಿತ ಮಂಡಳಿ, ಕಾರ್ಮಿಕರೊಂದಿಗೆ ಚರ್ಚೆ ನಡೆಸಿದ ಜಗದೀಶ್‌ ಶೆಟ್ಟರ್‌

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿ. 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದರು

- Advertisement -
- Advertisement -

’ಹಿಂಸಾಚಾರದಂತಹ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುತ್ತದೆ. ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ‌ ವಿಸ್ಟ್ರಾನ್‌ ಉದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದರು.

ಈ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ  ವಿಸ್ಟ್ರಾನ್‌ ಕಂಪನಿಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಕಾರ್ಮಿಕರ ಈಗಿನ ಸ್ಥಿತಿಗತಿಯ ಬಗ್ಗೆ ವಿಚಾರಿಸಿದರು.

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಯಾವುದೇ ಸಮಸ್ಯೆಗೂ ಪರಿಹಾರ ದೊರಕುವುದಿಲ್ಲ. ಅಂದು ನಡೆದ ಘಟನೆಯಿಂದಾಗಿ ಕಾರ್ಖಾನೆ ಮುಚ್ಚಬೇಕಾಯಿತು. ಅಲ್ಲದೆ, ಸಾವಿರಾರು ಕಾರ್ಮಿಕರು ಹಲವಾರು ಅನವಶ್ಯಕ ಗೊಂದಲಕ್ಕೀಡಾಗಬೇಕಾಯಿತು. ಆದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾದಲ್ಲಿ ನಿಮ್ಮ ಮೇಲಾಧಿಕಾರಿಗಳಿಗೆ ಮೊದಲು ತಿಳಿಸಬೇಕು. ಅಲ್ಲಿಯೂ ಪರಿಹಾರ ದೊರಕದೇ ಇದ್ದ ಸಂದರ್ಭದಲ್ಲಿ ಸರಕಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ ನೀಡಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗೌರವ್‌ ಗುಪ್ತಾ ಮಾತನಾಡಿ, ಸಮಸ್ಯೆ ಉದ್ಭವವಾಗುವ ಸಮಯದಲ್ಲಿ ಮಾತ್ರ ಅಧಿಕಾರಿಗಳು ಭೇಟಿ ನೀಡುವ ಪರಿಪಾಠವನ್ನು ಬಿಡಬೇಕು. ಆಗಾಗ್ಗೆ ಕೈಗಾರಿಕೆಗಳಿಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳು ಹಾಗೂ ಆಗಬೇಕಾದ ಕಾರ್ಯಗಳ ಬಗ್ಗೆ ಸಲಹೆ ನೀಡಬೇಕು ಮತ್ತು ಕಾರ್ಮಿಕರ ಸಂಕಷ್ಟಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.

ತೈವಾನ್ ಮೂಲದ ಆಪಲ್ ಐಫೋನ್ ತಯಾರಿಕಾ ಕಂಪೆನಿಯಾದ ’ವಿಸ್ಟ್ರಾನ್’ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ AICCTU ಕಾರ್ಮಿಕ ಸಂಘಟನೆಯು ಸತ್ಯಶೋಧನೆ ನಡೆಸಿತ್ತು.

ಡಿಸೆಂಬರ್ 12 ರ ಘಟನೆ ಕಂಪನಿಯಲ್ಲಿ ಅನುಸರಿಸಲಾಗಿರುವ ಶೋಷಕ ನೀತಿಗಳ ಪರಿಣಾಮವಾಗಿದ್ದು, ಎಲ್ಲ ಕಾರ್ಮಿಕ ಕಾನೂನು ನಿಯಮಗಳನ್ನೂ ಉಲ್ಲಂಘಿಸಿ, ಬಡ ಕಾರ್ಮಿಕರ ಮೂಲ ವೇತನವನ್ನೂ ಪಾವತಿ ಮಾಡದೆ ಇರುವುದರಿಂದ ನೊಂದ ಶೋಷಿತ ಕಾರ್ಮಿಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಕಾರ್ಮಿಕರು ಅಸಹಾಯಕ ಪರಿಸ್ಥಿತಿಗೆ ದೂಡಲ್ಪಟ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡುವುದು, ಕಾರ್ಮಿಕರನ್ನು ಬಂಧಿಸುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡುತ್ತದೆ. ರಾಜ್ಯ ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕಿದೆ. ಹಾಗಾಗಿ ರಾಜ್ಯ ಸರ್ಕಾರವು ಕಾರ್ಮಿಕರ ವಿರುದ್ಧ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂಪಡೆಯಬೇಕು” ಎಂದು AICCTU ಒತ್ತಾಯಿಸಿತ್ತು.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...