Homeಮುಖಪುಟಅರುಣಾಚಲ ವಿಧಾನಸಭಾ ಚುನಾವಣೆ: ಮೂರನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

ಅರುಣಾಚಲ ವಿಧಾನಸಭಾ ಚುನಾವಣೆ: ಮೂರನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

- Advertisement -
- Advertisement -

ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, 46 ಸ್ಥಾನಗಳೊಂದಿಗೆ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದುಕೊಂಡಿದೆ. ಈ ಮೂಲಕ ಬಿಜೆಪಿ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ.

60 ವಿಧಾನಸಭಾ ಕ್ಷೇತ್ರಗಳ ಅರುಣಾಚಲ ವಿಧಾನಸಭೆಗೆ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತದಾನ ನಡೆದಿದೆ. 46 ಸ್ಥಾನಗಳೊಂದಿಗೆ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದುಕೊಂಡಿದೆ. ಎನ್‌ಪಿಪಿ ಐದು ಸ್ಥಾನಗಳನ್ನು ಮತ್ತು ಎನ್‌ಸಿಪಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ  ಇತರರು ಐದು ಸ್ಥಾನಗಳಲ್ಲಿ ಗೆಲುವನ್ನು ಕಂಡುಕೊಂಡಿದ್ದಾರೆ.

ಏಪ್ರಿಲ್ 19ರಂದು ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಅರುಣಾಚಲ ವಿಧಾನಸಭಾ ಚುನಾವಣೆಗೆ ಏಕಕಾಲದಲ್ಲಿ ಮತದಾನ ನಡೆದಿದ್ದವು. ಅರುಣಾಚಲ ಪ್ರದೇಶದಲ್ಲಿ ಈ ಬಾರಿ 54.57% ಮತದಾನ ಬಿಜೆಪಿಗೆ ಬಿದ್ದಿದೆ, ಇದು 2019ಕ್ಕೆ ಹೋಲಿಕೆ ಮಾಡಿದರೆ ಬಿಜೆಪಿಯ ಮತ ಹಂಚಿಕೆಯಲ್ಲಿ ಹೆಚ್ಚಳವನ್ನು ತೋರಿಸುತ್ತದೆ. ಇನ್ನು ಕಾಂಗ್ರೆಸ್‌ನ ಮತ ಹಂಚಿಕೆ ಕಡಿಮೆಯಾಗಿದ್ದು, ಅರುಣಾಚಲದಲ್ಲಿ ಕಾಂಗ್ರೆಸ್‌ 5.56% ಮತವನ್ನು ಪಡೆದುಕೊಂಡಿದೆ. ಎನ್‌ಪಿಇಪಿ 16.11% ಮತವನ್ನು ಪಡೆದುಕೊಂಡಿದೆ. ಎನ್‌ಸಿಪಿಗೆ 10.43%    ಮತ್ತು ಇತರರು 5.6% ಮತವನ್ನು ಪಡೆದುಕೊಂಡಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಅರುಣಾಚಲದಲ್ಲಿ ಬಿಜೆಪಿಯು 60ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್‌ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು. ಯಾವುದೇ ಪಕ್ಷ ಬಹುಮತ ಸಾಬೀತು ಮಾಡಲು ಅರುಣಾಚಲ ಪ್ರದೇಶದಲ್ಲಿ 31 ಸ್ಥಾನಗಳ ಅಗತ್ಯವಿರುತ್ತದೆ. ಮುಖ್ಯಮಂತ್ರಿ ಪೇಮಾ ಖಂಡು ಹಾಗೂ ಉಪ ಮುಖ್ಯಮಂತ್ರಿ ಚೌನಾ ಮೈನ್ ತಮ್ಮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಪಕ್ಷ ಜಯಭೇರಿ ಬಾರಿಸಿದ ಬಳಿಕ ಅಲ್ಲಿನ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಅರುಣಾಚಲ ಪ್ರದೇಶ, ಈ ಅದ್ಭುತ ರಾಜ್ಯದ ಜನರು ಅಭಿವೃದ್ಧಿಯ ರಾಜಕೀಯಕ್ಕೆ ನಿಸ್ಸಂದಿಗ್ಧವಾದ ಜನಾದೇಶವನ್ನು ನೀಡಿದ್ದಾರೆ. ಬಿಜೆಪಿ ಬಗ್ಗೆ ಮತ್ತೊಮ್ಮೆ ತಮ್ಮ ನಂಬಿಕೆಯನ್ನು ಇಟ್ಟಿದ್ದಕ್ಕೆ ನನ್ನ ಕೃತಜ್ಞತೆಗಳು. ನಮ್ಮ ಪಕ್ಷವು ರಾಜ್ಯದಲ್ಲಿ ಇನ್ನೂ ಹೆಚ್ಚಿನ ಚೈತನ್ಯದಿಂದ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇಲ್ಲಿಯವರೆಗೆ ವಿಧಾನಸಭೆಯ 31 ಸ್ಥಾನಗಳಲ್ಲಿ ಆಡಳಿತ ಪಕ್ಷ 26 ಸ್ಥಾನಗಳನ್ನು ಗೆದ್ದಿದೆ. ಉಳಿದ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗೆಲುವಿಗಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮುಖ್ಯಮಂತ್ರಿ ತಮಾಂಗ್ ಧನ್ಯವಾದ ತಿಳಿಸಿದ್ದಾರೆ.

ಇದನ್ನು ಓದಿ: ಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...