Homeಕರ್ನಾಟಕಮದ್ಯ & ತಂಬಾಕಿನೊಂದಿಗೆ 'ಮಾಂಸಾಹಾರ'ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ - ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

- Advertisement -
- Advertisement -

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯದ ಮುದ್ದೆ– ಸೊಪ್ಪಿನ ಸಾಂಬಾರ್‌ ಹಾಗೂ ಉತ್ತರ ಕರ್ನಾಟಕದ ಜೋಳದ ರೊಟ್ಟಿ– ಎಣ್ಣೆಗಾಯಿ ಪಲ್ಯದ ಊಟ ಉಣಬಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಮದ್ಯ & ತಂಬಾಕಿನೊಂದಿಗೆ

ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಕೆಲವು ಸೂಚನೆ ನೀಡಿದೆ. ಇದರಲ್ಲಿ ಸೂಚನೆಗಳ ಪಟ್ಟಿಯಲ್ಲಿ 4 ನೆ ಸೂಚನೆ ಮಾಂಸಹಾರವನ್ನು ಸಾಹಿತ್ಯ ಪರಿಷತ್ ನಿಷೇಧಿಸಿದ್ದಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಿದೆ. ಇದು ಕನ್ನಡನಾಡಿನ 80% ಮಾಂಸಾಹಾರಿಗಳ ನಿಷೇಧ ಮತ್ತು ಅವರನ್ನು ಕೆಟ್ಟದಾಗಿ ನೋಡುವ ಮನುವಾದಿ ರಾಜಕೀಯವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯ & ತಂಬಾಕಿನೊಂದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮಾಂಸಾಹಾರಕ್ಕೆ ಹೆಸರುವಾಸಿಯಾದ ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮಾಂಸಾಹಾರವನ್ನು ಕೂಡಾ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಚಲುವರಾಯ ಸ್ವಾಮಿ ಅವರಿಗೆ ಸಂಘಟನೆಗಳು ಆಗ್ರಹ ವ್ಯಕ್ತಪಡಿಸಿದೆ.

ಮಂಡ್ಯದವರೇ ಆಗಿರುವ ಪ್ರಾಧ್ಯಾಪಕ ನಾಗೇಗೌಡ ಕೀಲಾರ ಅವರು, “ಎನ್‌ ಚಲುವರಾಯಸ್ವಾಮಿ ಅವರೇ, ನಿಮ್ಮ ಮನೆಗೆ ನೆಂಟರು ಬಂದರೆ ಬಾಡೂಟ ಹಾಕದೇ ಕಳಿಸಲ್ಲ ತಾನೇ. ನೀವು ಚುನಾವಣೆಯಲ್ಲಿ ಗೆದ್ದಗಾಲೆಲ್ಲ ನಿಮ್ಮ ಬೆಂಬಲಿಗರಿಗೆ ಬಾಡೂಟ ಹಾಕಿಸುತ್ತಿರಿ ತಾನೇ. ಹಂಗೇ ಸಾಹಿತ್ಯ ಸಮ್ಮೇಳನದಲ್ಲೂ ಬಾಡೂಟ ಹಾಕಿಸಬೇಕು. ಮಂಡ್ಯ ಅಂದರೆ ಬಾಡು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ನಜ್ಮಾ ನಜೀರ್ ಅವರು, “ಮಂಡ್ಯ ಅಂದ್ರೇನೆ ಮಾಂಸ ಕಲಾ. ನಾವ್ ಮಂಡ್ಯ ಮೈಸೂರೋರು ದೇವ್ರುಗು ಕುರಿ ಹೊಡಿಯೋರು” ಎಂದು ಹೇಳಿದ್ದಾರೆ.

ಸಂತೋಷ್ ಎಚ್‌.ಎಮ್‌. ಅವರು, ನಾವು ಮಂಡ್ಯದ ಜನ ಬಾಡೂಟಕ್ಕೆ ಹೆಚ್ಚು ಪ್ರಸಿದ್ಧ. ಅದು ಬೇಡ, ಇದು ಬೇಡ ಎಲ್ಲಾ ಯಾಕೆ…? ಎಲ್ಲವೂ ಇರಲಿ.. ತಿನ್ನೊದು ಅವರ್ ಅವರ್ ಇಷ್ಟಕ್ಕೆ ಬಿಟ್ಟದ್ದು” ಎಂದು ಹೇಳಿದ್ದಾರೆ.

ಪತ್ರಕರ್ತ ಸಂತೋಷ್ ಜಿ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ – ಸಸ್ಯಾಹಾರ ಎರಡೂ ಇರಲಿ ಎಂಬುವುದು ಸಚಿವರಿಗೆ ಮನವಿ. 86 ವರ್ಷದಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರಿಗಳಿಗೆ ವಂಚಿಸಿಕೊಂಡೆ ಬರುತ್ತಿದೆ. ಈ ಬಾರಿ ಮಾಂಸಹಾರ ಜಾರಿ ಆಗಲಿ. ಮಾಂಸಹಾರಿಗಳ ಆಹಾರದ ಹಕ್ಕಿನ ಘನತೆಯನ್ನು ಎತ್ತಿಹಿಡಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...