Homeಕರ್ನಾಟಕಮದ್ಯ & ತಂಬಾಕಿನೊಂದಿಗೆ 'ಮಾಂಸಾಹಾರ'ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ - ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

- Advertisement -
- Advertisement -

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯದ ಮುದ್ದೆ– ಸೊಪ್ಪಿನ ಸಾಂಬಾರ್‌ ಹಾಗೂ ಉತ್ತರ ಕರ್ನಾಟಕದ ಜೋಳದ ರೊಟ್ಟಿ– ಎಣ್ಣೆಗಾಯಿ ಪಲ್ಯದ ಊಟ ಉಣಬಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಮದ್ಯ & ತಂಬಾಕಿನೊಂದಿಗೆ

ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಕೆಲವು ಸೂಚನೆ ನೀಡಿದೆ. ಇದರಲ್ಲಿ ಸೂಚನೆಗಳ ಪಟ್ಟಿಯಲ್ಲಿ 4 ನೆ ಸೂಚನೆ ಮಾಂಸಹಾರವನ್ನು ಸಾಹಿತ್ಯ ಪರಿಷತ್ ನಿಷೇಧಿಸಿದ್ದಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಿದೆ. ಇದು ಕನ್ನಡನಾಡಿನ 80% ಮಾಂಸಾಹಾರಿಗಳ ನಿಷೇಧ ಮತ್ತು ಅವರನ್ನು ಕೆಟ್ಟದಾಗಿ ನೋಡುವ ಮನುವಾದಿ ರಾಜಕೀಯವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯ & ತಂಬಾಕಿನೊಂದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮಾಂಸಾಹಾರಕ್ಕೆ ಹೆಸರುವಾಸಿಯಾದ ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮಾಂಸಾಹಾರವನ್ನು ಕೂಡಾ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಚಲುವರಾಯ ಸ್ವಾಮಿ ಅವರಿಗೆ ಸಂಘಟನೆಗಳು ಆಗ್ರಹ ವ್ಯಕ್ತಪಡಿಸಿದೆ.

ಮಂಡ್ಯದವರೇ ಆಗಿರುವ ಪ್ರಾಧ್ಯಾಪಕ ನಾಗೇಗೌಡ ಕೀಲಾರ ಅವರು, “ಎನ್‌ ಚಲುವರಾಯಸ್ವಾಮಿ ಅವರೇ, ನಿಮ್ಮ ಮನೆಗೆ ನೆಂಟರು ಬಂದರೆ ಬಾಡೂಟ ಹಾಕದೇ ಕಳಿಸಲ್ಲ ತಾನೇ. ನೀವು ಚುನಾವಣೆಯಲ್ಲಿ ಗೆದ್ದಗಾಲೆಲ್ಲ ನಿಮ್ಮ ಬೆಂಬಲಿಗರಿಗೆ ಬಾಡೂಟ ಹಾಕಿಸುತ್ತಿರಿ ತಾನೇ. ಹಂಗೇ ಸಾಹಿತ್ಯ ಸಮ್ಮೇಳನದಲ್ಲೂ ಬಾಡೂಟ ಹಾಕಿಸಬೇಕು. ಮಂಡ್ಯ ಅಂದರೆ ಬಾಡು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ನಜ್ಮಾ ನಜೀರ್ ಅವರು, “ಮಂಡ್ಯ ಅಂದ್ರೇನೆ ಮಾಂಸ ಕಲಾ. ನಾವ್ ಮಂಡ್ಯ ಮೈಸೂರೋರು ದೇವ್ರುಗು ಕುರಿ ಹೊಡಿಯೋರು” ಎಂದು ಹೇಳಿದ್ದಾರೆ.

ಸಂತೋಷ್ ಎಚ್‌.ಎಮ್‌. ಅವರು, ನಾವು ಮಂಡ್ಯದ ಜನ ಬಾಡೂಟಕ್ಕೆ ಹೆಚ್ಚು ಪ್ರಸಿದ್ಧ. ಅದು ಬೇಡ, ಇದು ಬೇಡ ಎಲ್ಲಾ ಯಾಕೆ…? ಎಲ್ಲವೂ ಇರಲಿ.. ತಿನ್ನೊದು ಅವರ್ ಅವರ್ ಇಷ್ಟಕ್ಕೆ ಬಿಟ್ಟದ್ದು” ಎಂದು ಹೇಳಿದ್ದಾರೆ.

ಪತ್ರಕರ್ತ ಸಂತೋಷ್ ಜಿ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ – ಸಸ್ಯಾಹಾರ ಎರಡೂ ಇರಲಿ ಎಂಬುವುದು ಸಚಿವರಿಗೆ ಮನವಿ. 86 ವರ್ಷದಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರಿಗಳಿಗೆ ವಂಚಿಸಿಕೊಂಡೆ ಬರುತ್ತಿದೆ. ಈ ಬಾರಿ ಮಾಂಸಹಾರ ಜಾರಿ ಆಗಲಿ. ಮಾಂಸಹಾರಿಗಳ ಆಹಾರದ ಹಕ್ಕಿನ ಘನತೆಯನ್ನು ಎತ್ತಿಹಿಡಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...