Homeಕರ್ನಾಟಕಮದ್ಯ & ತಂಬಾಕಿನೊಂದಿಗೆ 'ಮಾಂಸಾಹಾರ'ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ - ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

- Advertisement -
- Advertisement -

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಆಗಮಿಸುವವರಿಗೆ ಮಂಡ್ಯದ ಮುದ್ದೆ– ಸೊಪ್ಪಿನ ಸಾಂಬಾರ್‌ ಹಾಗೂ ಉತ್ತರ ಕರ್ನಾಟಕದ ಜೋಳದ ರೊಟ್ಟಿ– ಎಣ್ಣೆಗಾಯಿ ಪಲ್ಯದ ಊಟ ಉಣಬಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಮದ್ಯ & ತಂಬಾಕಿನೊಂದಿಗೆ

ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಕೆಲವು ಸೂಚನೆ ನೀಡಿದೆ. ಇದರಲ್ಲಿ ಸೂಚನೆಗಳ ಪಟ್ಟಿಯಲ್ಲಿ 4 ನೆ ಸೂಚನೆ ಮಾಂಸಹಾರವನ್ನು ಸಾಹಿತ್ಯ ಪರಿಷತ್ ನಿಷೇಧಿಸಿದ್ದಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಿದೆ. ಇದು ಕನ್ನಡನಾಡಿನ 80% ಮಾಂಸಾಹಾರಿಗಳ ನಿಷೇಧ ಮತ್ತು ಅವರನ್ನು ಕೆಟ್ಟದಾಗಿ ನೋಡುವ ಮನುವಾದಿ ರಾಜಕೀಯವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯ & ತಂಬಾಕಿನೊಂದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ ಮಾಂಸಾಹಾರಕ್ಕೆ ಹೆಸರುವಾಸಿಯಾದ ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಮಾಂಸಾಹಾರವನ್ನು ಕೂಡಾ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ಸಚಿವ ಚಲುವರಾಯ ಸ್ವಾಮಿ ಅವರಿಗೆ ಸಂಘಟನೆಗಳು ಆಗ್ರಹ ವ್ಯಕ್ತಪಡಿಸಿದೆ.

ಮಂಡ್ಯದವರೇ ಆಗಿರುವ ಪ್ರಾಧ್ಯಾಪಕ ನಾಗೇಗೌಡ ಕೀಲಾರ ಅವರು, “ಎನ್‌ ಚಲುವರಾಯಸ್ವಾಮಿ ಅವರೇ, ನಿಮ್ಮ ಮನೆಗೆ ನೆಂಟರು ಬಂದರೆ ಬಾಡೂಟ ಹಾಕದೇ ಕಳಿಸಲ್ಲ ತಾನೇ. ನೀವು ಚುನಾವಣೆಯಲ್ಲಿ ಗೆದ್ದಗಾಲೆಲ್ಲ ನಿಮ್ಮ ಬೆಂಬಲಿಗರಿಗೆ ಬಾಡೂಟ ಹಾಕಿಸುತ್ತಿರಿ ತಾನೇ. ಹಂಗೇ ಸಾಹಿತ್ಯ ಸಮ್ಮೇಳನದಲ್ಲೂ ಬಾಡೂಟ ಹಾಕಿಸಬೇಕು. ಮಂಡ್ಯ ಅಂದರೆ ಬಾಡು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ನಜ್ಮಾ ನಜೀರ್ ಅವರು, “ಮಂಡ್ಯ ಅಂದ್ರೇನೆ ಮಾಂಸ ಕಲಾ. ನಾವ್ ಮಂಡ್ಯ ಮೈಸೂರೋರು ದೇವ್ರುಗು ಕುರಿ ಹೊಡಿಯೋರು” ಎಂದು ಹೇಳಿದ್ದಾರೆ.

ಸಂತೋಷ್ ಎಚ್‌.ಎಮ್‌. ಅವರು, ನಾವು ಮಂಡ್ಯದ ಜನ ಬಾಡೂಟಕ್ಕೆ ಹೆಚ್ಚು ಪ್ರಸಿದ್ಧ. ಅದು ಬೇಡ, ಇದು ಬೇಡ ಎಲ್ಲಾ ಯಾಕೆ…? ಎಲ್ಲವೂ ಇರಲಿ.. ತಿನ್ನೊದು ಅವರ್ ಅವರ್ ಇಷ್ಟಕ್ಕೆ ಬಿಟ್ಟದ್ದು” ಎಂದು ಹೇಳಿದ್ದಾರೆ.

ಪತ್ರಕರ್ತ ಸಂತೋಷ್ ಜಿ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ – ಸಸ್ಯಾಹಾರ ಎರಡೂ ಇರಲಿ ಎಂಬುವುದು ಸಚಿವರಿಗೆ ಮನವಿ. 86 ವರ್ಷದಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರಿಗಳಿಗೆ ವಂಚಿಸಿಕೊಂಡೆ ಬರುತ್ತಿದೆ. ಈ ಬಾರಿ ಮಾಂಸಹಾರ ಜಾರಿ ಆಗಲಿ. ಮಾಂಸಹಾರಿಗಳ ಆಹಾರದ ಹಕ್ಕಿನ ಘನತೆಯನ್ನು ಎತ್ತಿಹಿಡಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

’ಜಾತಿ ಮತ್ತು ಲಿಂಗತ್ವ’ ಪುಸ್ತಕದಿಂದ ಆಯ್ದ ಭಾಗ; ರಾಜಕೀಯವಾಗಿ ಜಾತಿಯನ್ನು ಅರ್ಥಮಾಡಿಕೊಳ್ಳುವುದು: ಆಧುನಿಕತೆಯ ವಿಮೋಚನಾತ್ಮಕ ಅರ್ಥಗಳನ್ನು ರೂಪಿಸುವುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...