Homeಮುಖಪುಟದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ “ಬಿಜೆಪಿ ಗೂಂಡಾಗಳಿಂದ ಹಲ್ಲೆಯಾಗಿದೆ” ಎಂದು ಅವರು ಗುರುವಾರ ಆಪ್ ಆರೋಪಿಸಿದೆ.

ಕೇಜ್ರಿವಾಲ್ ಸರ್ಕಾರದಿಂದ ಬಾಕಿ ಪಾವತಿಸುವಂತೆ ಒತ್ತಾಯಿಸಿ ಅನಿರ್ದಿಷ್ಟ ಧರಣಿ ನಡೆಸುತ್ತಿರುವ ಮೇಯರ್ ಮತ್ತು ಪಕ್ಷದ ಆಡಳಿತದ ಪುರಸಭೆಯ ಮುಖಂಡರನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಈ ಹಿಂದೆ ಸಿಸೋಡಿಯಾ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಪ್ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ‌ಆಪ್ ನಾಯಕಿ ಅತಿಶಿ, ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ನಿವಾಸಕ್ಕೆ ಬಿಜೆಪಿ ಗೂಂಡಾಗಳು ಪ್ರವೇಶಿಸುವುದನ್ನು ಪೊಲೀಸರು ತಡೆಯಲಿಲ್ಲ ಮತ್ತು ಮನೆಯ ಸುತ್ತಲಿನ ಬ್ಯಾರಿಕೇಡ್‌ಗಳನ್ನು ಸಹ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದರು.

“ಬಿಜೆಪಿ ಗೂಂಡಾಗಳು ಉಪಮುಖ್ಯಮಂತ್ರಿಗಳು ಮನೆಯಲ್ಲಿ ಇಲ್ಲದ್ದಿದ್ದಾಗ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ರಾಜಕೀಯ ನಾಯಕರ ಮೇಲೆ ಹಲ್ಲೆಯಾಗುವುದನ್ನು ನೊಡಿದ್ದೇವೆ. ಆದರೆ, ಮನೆಗೆ ನುಗ್ಗಿ ಮನೆಯವರ ಮೇಲೆ ಹಲ್ಲೆ ಮಾಡುವ ಇಂತಹ ಕೃತ್ಯ ರಾಜಕೀಯ ಇತಿಹಾಸದಲ್ಲಿ ಎಂದು ನಡೆದಿರುವುದಿಲ್ಲ. ಇಂತಹ ಕೃತ್ಯದಲ್ಲಿ ದೆಹಲಿ ಪೊಲೀಸರು ಬಿಜೆಪಿ ಗೂಂಡಾಗಳಿಗೆ ಸಹಾಯ ಮಾಡಿದ್ದಾರೆ” ಎಂದು ಅತಿಶಿ ಹೇಳಿದ್ದಾರೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಘಟನೆ ಕುರಿತು ಟ್ವೀಟ್ ಮಾಡಿರುವ ಮನೀಶ್ ಸಿಸೋಡಿಯಾ, “ಇಂದು, ನನ್ನ ಅನುಪಸ್ಥಿತಿಯಲ್ಲಿ, ಬಿಜೆಪಿ ಗೂಂಡಾಗಳು ನನ್ನ ಮನೆಯ ಬಾಗಿಲುಗಳನ್ನು ಭೇದಿಸಿ ಒಳಗೆ ಪ್ರವೇಶಿಸಿ ನನ್ನ ಹೆಂಡತಿಯ ಮಕ್ಕಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ’ ಎಂದು ತಿಳಿಸಿದ್ದಾರೆ.

“ಅಮಿತ್‌ ಶಾ ಅವರೇ, ನೀವು  ದೆಹಲಿಯಲ್ಲಿ ರಾಜಕೀಯದಲ್ಲಿ ಸೋತಿದಕ್ಕಾಗಿ, ನೀವು ನಮ್ಮನ್ನು ಈ ರೀತಿ ನಿಭಾಯಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆಯ ಮೇಲೆ ನಡೆದ ವ್ಯವಸ್ಥಿತ, ಸಂಘಟಿತ ಮತ್ತು ಹಿಂಸಾತ್ಮಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ಮನೆಯಿಂದ ದೂರದಲ್ಲಿರುವಾಗ ಗೂಂಡಾಗಳು ಪೊಲೀಸರ ಉಪಸ್ಥಿತಿಯಲ್ಲಿ ಅವರ ಮನೆಗೆ ಪ್ರವೇಶಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಏಕೆ ಹತಾಶೆಗೆ ಒಳಗಾಗುತ್ತಿದೆ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

“ದೆಹಲಿಯ ರಾಜಕೀಯ ಇತಿಹಾಸದಲ್ಲಿ ಇದು ಕಪ್ಪು ದಿನವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ತಮ್ಮ ಪಕ್ಷದ ಗೂಂಡಾಗಳನ್ನು ಮತ್ತು ದೆಹಲಿ ಪೊಲೀಸರನ್ನು ಬಳಸಿಕೊಂಡು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಮೇಲೆ ಹಲ್ಲೆ ಮಾಡಿದ್ದಾರೆ” ಎಂದಿದ್ದಾರೆ.

ಆಪ್ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ಉಪಾಧ್ಯಕ್ಷ ಅಶೋಕ್ ಗೋಯೆಲ್ ದೇವರಾಹಾ  “ಎಎಪಿ ನಾಯಕರು ಬಿಜೆಪಿ ಮೇಯರ್‌ಗಳು ಮತ್ತು ಇತರ ನಿಗಮದ ಮುಖಂಡರನ್ನು ಕೊಲ್ಲುವ ಪಿತೂರಿಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...