Homeಮುಖಪುಟಬುಡಕಟ್ಟು ಮಹಿಳೆಯ ಮೃತದೇಹ ಬೈಕ್‌ನಲ್ಲಿ ಸಾಗಾಟ

ಬುಡಕಟ್ಟು ಮಹಿಳೆಯ ಮೃತದೇಹ ಬೈಕ್‌ನಲ್ಲಿ ಸಾಗಾಟ

- Advertisement -
- Advertisement -

ಆಂಧ್ರಪ್ರದೇಶದ ಬುಡಕಟ್ಟು ಸಮುದಾಯ ವಾಸವಿರುವ ಪ್ರದೇಶದಲ್ಲಿ ಸಾರಿಗೆ ಸೌಲಭ್ಯ ಮತ್ತು ರಸ್ತೆ ಸಂಪರ್ಕದ ಕೊರತೆಯಿಂದಾಗಿ ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವರು ತನ್ನ ಪತ್ನಿಯ ಮೃತದೇಹವನ್ನು ಆಸ್ಪತ್ರೆಯಿಂದ ದ್ವಿಚಕ್ರ ವಾಹನದಲ್ಲಿ ಸಾಗಿಸಿದ ಹೃದಯವಿದ್ರಾಹಕ ಘಟನೆ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಮಂಡಲ ಗಂಗುಲು ಅವರ ಪತ್ನಿ ಗಣಮ್ಮ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಚಿಟ್ಟೆಂಪಾಡು ಗ್ರಾಮಕ್ಕೆ ಶವವನ್ನು ಸಾಗಿಸಲು ಸರಿಯಾದ ಆಂಬ್ಯುಲೆನ್ಸ್‌ ವ್ಯವಸ್ಥೆ ಮತ್ತು ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಗಂಗುಲು ಎಂಬವರು ತನ್ನ ಪತ್ನಿ ಗಣಮ್ಮ ಅವರ ಶವವನ್ನು ಬೈಕ್‌ನಲ್ಲಿ ಸಾಗಿಸಿದ್ದಾರೆ.

ಕೆಲವು ದಿನಗಳ ಹಿಂದೆ ಗಂಗಮ್ಮ ಮತ್ತು ಅವರ ಮಗ ಅನಾರೋಗ್ಯಕ್ಕೆ ತುತ್ತಾಗಿದ್ದರು. ರಸ್ತೆ ಹದಗೆಟ್ಟ ಕಾರಣ ಗಂಗುಲು ಪತ್ನಿ-ಮಗನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದ ಕಾರಣ, ಅವರು ತಾತ್ಕಾಲಿಕ ಸ್ಟ್ರೆಚರ್‌ನಲ್ಲಿ ಅವರನ್ನು ಐದು ಕಿಲೋಮೀಟರ್‌ಗಳವರೆಗೆ ಸಾಗಿಸಿದ್ದರು. ವಿಶಾಖಪಟ್ಟಣಕ್ಕೆ ಸ್ಥಳಾಂತರಿಸುವಾಗ ಮಗು ಜನವರಿ 7ರಂದು ಸಾವನ್ನಪ್ಪಿತ್ತು. ಆತನ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಗಂಗಮ್ಮ ಅವರನ್ನು ಜನವರಿ 5ರಂದು ಶೃಂಗವರಪುಕೋಟಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ  ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಮನೆಗೆ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ ಮತ್ತು ರಸ್ತೆ ವ್ಯವಸ್ಥೆ ಇರಲಿಲ್ಲ. ದಿಕ್ಕುತೋಚದೆ ಗಂಗುಲು ತನ್ನ ಸ್ನೇಹಿತನ ಸಹಾಯದಿಂದ ಆಸ್ಪತ್ರೆಯಿಂದ ದ್ವಿಚಕ್ರ ವಾಹನದಲ್ಲಿ ಪತ್ನಿಯ ಮೃತದೇಹವನ್ನು ಸಾಗಿಸಿದ್ದಾನೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯದರ್ಶಿ ಎನ್ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ಆಂಧ್ರಪ್ರದೇಶದ ಜಗನ್‌ ಮೋಹನ್‌ ಸರಕಾರವನ್ನು ಟೀಕಿಸಿದ್ದು, ವೈಎಸ್‌ಆರ್‌ಸಿಪಿ ಸರ್ಕಾರವು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ವಿಫಲವಾಗಿದೆ ಮತ್ತು ಚಿಟ್ಟೆಂಪಾಡುವಿಗೆ ತಕ್ಷಣ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...