Homeಎಚ್.ಎಸ್.ದೊರೆಸ್ವಾಮಿಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? - ಎಚ್‌.ಎಸ್ ದೊರೆಸ್ವಾಮಿ

ಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? – ಎಚ್‌.ಎಸ್ ದೊರೆಸ್ವಾಮಿ

ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು.

- Advertisement -
- Advertisement -

144ನೇ ಸೆಕ್ಷನ್ ಪ್ರಕಾರ 5 ಜನ ಒಟ್ಟಿಗೆ ಕೂಡುವುದು ನ್ಯಾಯಬಾಹಿರ. ಇತ್ತೀಚೆಗೆ ಭಾರತದ ಅನೇಕ ರಾಜ್ಯಗಳಲ್ಲಿ ಈ ಸೆಕ್ಷನ್ ಅನ್ನು ಜಾರಿಗೊಳಿಸಲಾಯಿತು. ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸಭೆಗಳು ನಡೆದ ಕಡೆಗಳಲ್ಲೆಲ್ಲಾ 144ನೇ ಸೆಕ್ಷನ್ ವಿಧಿಸಲಾಯಿತು. ಚೆನ್ನೈನಲ್ಲಿ ಪ್ರತಿಭಟನಾ ಸಭೆ ತಡೆಗಟ್ಟುವುದಕ್ಕೆ 144ನೇ ಸೆಕ್ಷನ್ ಜಾರಿ ಮಾಡಿದಾಗ ಚಳವಳಿ ಸಂಘಟಕರು ಮದ್ರಾಸ್ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದರು. ಅಲ್ಲಿಯ ನ್ಯಾಯಾಧೀಶರಾದ ನ್ಯಾ. ವೈದ್ಯನಾಥನ್ ಮತ್ತು ನ್ಯಾ. ಪಿ.ಟಿ.ಆಶಾ ಅವರಿದ್ದ ನ್ಯಾಯಪೀಠ ನಡುರಾತ್ರಿಯಲ್ಲಿ ತೀರ್ಪಿತ್ತು, ‘ಸಾರ್ವಜನಿಕ ಭದ್ರತೆಯನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂಬುದು ನಿಜವಾದರೂ, ಸಾರ್ವಜನಿಕರು ಸರ್ಕಾರದ ಧೋರಣೆಯನ್ನು ಪ್ರತಿಭಟಿಸಿ ವಿರೋಧ ವ್ಯಕ್ತಪಡಿಸುವುದೂ ಅವರ ಹಕ್ಕು’ ಎಂದಿತು.

ಸರ್ಕಾರದ ವಿರುದ್ಧವಾಗಿ ಪ್ರತಿಪಕ್ಷಗಳ ಪ್ರತಿಭಟನೆ ಮಾಡುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ ಶಾಂತಿ ಕದಡುವ ಕೆಲಸಕ್ಕೆ ಹೋರಾಟಗಾರರು ಕೈಹಾಕಬಾರದು ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿತು. ಅವರು ತೀರ್ಪನ್ನು ನೀಡುವಾಗ ಕೆಲವು ಪ್ರಮುಖ ವಿಚಾರಗಳ ಕುರಿತು ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ್ದಾರೆ.

ಸ್ವಾತಂತ್ರ್ಯ ಎಲ್ಲಾ ಜನರ ಹಕ್ಕು. ಸಿಎಎ ಮತ್ತು ಎನ್‍ಪಿಎ ವಿರುದ್ಧವಾಗಿ ಧ್ವನಿ ಎತ್ತುವವರ ವಾದದಲ್ಲಿ ಒಂದು ತರ್ಕ ಇದೆ. ಎನ್‍ಆರ್‍ಸಿ ಮತ್ತು ಸಿಎಎ ಎರಡಕ್ಕೂ ಸಂಬಂಧ ಇದೆ, ಅವನ್ನು ಪ್ರತ್ಯೇಕಿಸಲಾಗದು ಎಂದು ಗೃಹಮಂತ್ರಿಗಳು ಹೇಳಿದ್ದಾರೆ. ಆದ್ದರಿಂದ ಇವೆರಡರ ಹಿಂದೆ ಜನರನ್ನು ಮತೀಯವಾಗಿ ಒಡೆಯುವ ಭಯಾನಕ ಅಜೆಂಡಾವೊಂದಿದೆ ಎಂಬುದು ನಿರ್ವಿವಾದ. ಬಹುತ್ವ, ಪ್ರಜಾಪ್ರಭುತ್ವದ ಒಂದು virtue. ನಮ್ಮ ರಾಜ್ಯಾಂಗ ಜಾತ್ಯತೀತ ಭವಿಷ್ಯವನ್ನು ನಮ್ಮ ಜನತೆಗೆ ದಯಪಾಲಿಸಿದೆ. ಪಾರ್ಲಿಮೆಂಟ್, ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಭಾರತೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ಸಿದ್ಧಪಡಿಸಿದೆ ಎಂಬುದು ನಿಜ. ಸರ್ವೋಚ್ಚ ನ್ಯಾಯಾಲಯ ಈ ಕಾಯ್ದೆ ನ್ಯಾಯಯುತ ಅಥವಾ ನ್ಯಾಯಬಾಹಿರ ಎಂದು ತೀರ್ಪು ನೀಡಬಹುದು. ಆದರೆ ರಾಜ್ಯ ರೂಪಿಸುವ ಕಾನೂನು ಅಥವಾ ನ್ಯಾಯಾಲಯ ನೀಡುವ ತೀರ್ಪು ಜನತೆಯ ಹೋರಾಟದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಮೊದಲ ತತ್ವ ನಾಗರಿಕನಿಗಿರುವ ಪ್ರತಿಭಟಿಸುವ ಹಕ್ಕು. ಸರ್ಕಾರ ಮಾಡಿದ ಕೆಟ್ಟ ಕಾಯ್ದೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವುದೇ ಪ್ರಜಾಪ್ರಭುತ್ವದ ಮೂಲಭೂತ ಸಿದ್ಧಾಂತ.

ಆಡಳಿತ ನಡೆಸುವವರು ಹಿಂಸೆಯನ್ನು ಯಾವುದೇ ರೂಪದಲ್ಲೂ ಆಚರಣೆಗೆ ತಂದರೂ, ಅದು ತಪ್ಪು. ಚಳವಳಿಗಾರರು ಹಿಂಸೆಯನ್ನು ಆಚರಣೆಗೆ ತಂದರೂ ತಪ್ಪು. ಈ ಬಗೆಯ ಹಿಂಸೆಯನ್ನು ಖಂಡಿಸಲೇಬೇಕು. ಸಿಎಎ ಕಾಯ್ದೆ ವಿರೋಧಿಸಿ ನಡೆದ ಅನೇಕ ಪ್ರತಿಭಟನೆಗಳ ಸಂದರ್ಭಗಳಲ್ಲಿ ಆಡಳಿತಗಾರರು ಈ ಬಗೆಯ ತಪ್ಪು ಮಾಡಿದ್ದಾರೆ. ಇತರೆ ಕೆಲವು ಸಂದರ್ಭಗಳಲ್ಲಿ ಹೋರಾಟಗಾರರು ಕೂಡಾ ಈ ತಪ್ಪು ಎಸಗಿದ್ದಾರೆ. ಇಬ್ಬರೂ ಹಿಂಸೆಗೆ ಎಡೆಮಾಡಿದ್ದಾರೆ.

ಅನೇಕ ರಾಜ್ಯಗಳಲ್ಲಿ 144ನೇ ಸೆಕ್ಷನ್ ಅನ್ನು ಜಾರಿಗೆ ತರಲಾಯಿತು. ಅದನ್ನು ಪ್ರತಿಭಟನಾಕಾರರ ಮೇಲೆ ಪ್ರಯೋಗಿಸಲಾಯಿತು. 144ನೇ ಸೆಕ್ಷನ್ ಚಳವಳಿಗಾರರನ್ನು ಸರಿದಾರಿಗೆ ತರುವ ಕಾನೂನೇ ಹೊರತು, ಅದು ಸೈನಿಕರ ಅಧಿಕಾರ ಚಲಾಯಿಸುವಂತಿಲ್ಲ. ಸಾರ್ವಜನಿಕರನ್ನು ಹತೋಟಿ ಮಾಡುವುದೇ ಬೇರೆ ವಿಚಾರ. ಸಾರ್ವಜನಿಕ ಹೋರಾಟವನ್ನು ಹತ್ತಿಕ್ಕುವುದೇ ಬೇರೆ ವಿಚಾರ. 144ನೇ ಸೆಕ್ಷನ್ ಇರುವುದು ಸಾರ್ವಜನಿಕರನ್ನು ಹತೋಟಿಯಲ್ಲಿಟ್ಟುಕೊಳ್ಳುವುದಕ್ಕೆ, ಮಿಲಿಟರಿ ಶಕ್ತಿ ಬಳಕೆಗಲ್ಲ; ನಿಜವಾದ ಅಪಾಯ ಕಾಣಿಸಿಕೊಂಡರೂ ಕನಿಷ್ಠ ಬಲಪ್ರಯೋಗ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕೆ.

ಸರ್ಕಾರದ ಶಾಸನಕ್ಕೆ ವಿರೋಧ ವ್ಯಕ್ತಪಡಿಸುವವರಿಗೆ ಕೆಲವು ರಕ್ಷಣೆಗಳಿವೆ. 144ನೇ ಸೆಕ್ಷನ್ ಹಾಕಬೇಕಾದರೆ ಅದಕ್ಕೆ ತಕ್ಷಣದ ಬೆಳವಣಿಗೆಗಳೇ ಕಾರಣವಾಗಿರಬೇಕು. ಕೂಡಲೇ ಕ್ರಮಕೈಗೊಳ್ಳದಿದ್ದರೆ ಕೈಮೀರಿಹೋಗುವ ಘಟನೆಗಳು ನಡೆಯಬಹುದಾದ ಸೂಚನೆಗಳಿದ್ದಾಗ 144ನೇ ಸೆಕ್ಷನ್ ಜಾರಿಗೊಳಿಸಬಹುದು. ಹಾಗಿಲ್ಲದೆ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ 144ನೇ ಸೆಕ್ಷನ್ ಅನ್ನು ಅಕಾರಣವಾಗಿ ಜಾರಿಗೊಳಿಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ರಾಜ್ಯಾಂಗದಲ್ಲಿ ಖಾಸಗಿತನ ಮತ್ತು ಪ್ರಜೆಯ ಘನತೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಸನ್ನಿವೇಶ ಕೈಮೀರುವ ಸಂದರ್ಭದಲ್ಲಿ ಮಾತ್ರ ಪೊಲೀಸರು ಅದನ್ನು ಹತ್ತಿಕ್ಕಲು ಸೂಕ್ತ ಕ್ರಮಕೈಗೊಳ್ಳಬಹುದು. ಹಾಗೆಂದು ಪೊಲೀಸರಿಗೆ ಕಟ್ಟುಪಾಡಿಲ್ಲದ ಸ್ವಾತಂತ್ರ್ಯವಿದೆಯೆಂದು ಭಾವಿಸಬಾರದು. ಶಾಂತಿಯು ಪ್ರತಿಭಟನೆ ನಡೆಸುವುದು ಮತ್ತು ಸಾರ್ವಜನಿಕ ಸಭೆ ನಡೆಸುವುದು ರಾಜ್ಯಾಂಗ ನಮಗಿತ್ತಿರುವ ಅಧಿಕಾರ.

ಥೋರೊ ಅವರು ಪೌರರು ಸರ್ಕಾರದ ವಿರುದ್ಧ ಕಾನೂನು ಮುರಿಯುವ ಆಂದೋಲನವನ್ನು ನಡೆಸಿದ ಮೊದಲಿಗರು. ಮಹಾತ್ಮಾ ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್, ನಾಗರಿಕ ಕಾನೂನು ಉಲ್ಲಂಘನೆಯ ಚಳುವಳಿ ಕ್ರಿಮಿನಲ್ ರೂಪ ತಾಳಬಾರದೆಂದು ಪ್ರತಿಪಾದಿಸಿದರು. ಕಾನೂನು ಉಲ್ಲಂಘನೆ ಚಳವಳಿ ಶಾಂತಿಯುತವಾಗಿರಬೇಕು, ಅಹಿಂಸಕವಾಗಿರಬೇಕು ಎಂಬುದು ಅವರ ನಿಲುವು. ಪ್ರಜೆಯ ರಾಷ್ಟ್ರಭಕ್ತಿಯ ಧ್ಯೋತಕವೆಂದರೆ ದೇಶದ ರಾಜ್ಯಾಂಗದ ಆಶಯಗಳಿಗೆ ವಿರುದ್ಧವಾಗಿರುವ ಕಾನೂನುಗಳನ್ನು ಉಲ್ಲಂಘಿಸುವುದು. ಒತ್ತಾಯಪೂರ್ವಕವಾಗಿ ಜನತೆಯನ್ನು ಹಣ್ಣು ಮಾಡಲು ಪ್ರಯತ್ನಿಸುವ ಸರ್ಕಾರ ತಮ್ಮ ಬಗೆಗೆ ವಿರೋಧ ವ್ಯಕ್ತಪಡಿಸುವವರನ್ನು ಕ್ರಮೇಣ ಮುಗಿಸಿಯೇ ಬಿಡಬಹುದು. ತಾನು ಮಾಡಿದ ಕಾನೂನನ್ನು ಒತ್ತಾಯಪೂರ್ವಕವಾಗಿ ಒಪ್ಪಿಕೊಳ್ಳಲೇಬೇಕೆಂದು ಸರ್ಕಾರ ಪಟ್ಟು ಹಿಡಿದರೆ ಅದು ಸಂಘರ್ಷದಲ್ಲಿ ಪರ್ಯವಸನವಾಗಬಹುದು.

ಮಂಗಳೂರಿನಲ್ಲಿ ನಡೆದ ಪೊಲೀಸರ ದುರ್ವರ್ತನೆ ಅಕ್ಷಮ್ಯ. ಪೊಲೀಸರು ಗುಂಡು ಹಾರಿಸುವುದಕ್ಕೆ ಒಂದು ನಿಯಮ ಇದೆ. ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು. ಅಲ್ಲಿಯ ಸಂದರ್ಭದಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಕೇಳಿದನಂತೆ, “ಇನ್ನೂ ಯಾರನ್ನೂ ಶೂಟ್ ಮಾಡಿ ಕೊಂದಿಲ್ಲವೇ?” ಎಂದು. ಇಂತಹ ಬರ್ಬರ ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದಾರೆ ಎನ್ನುವುದೇ ದುರಂತ!

ಪೊಲೀಸರು ಗುಂಡು ಹಾರಿಸುವುದು ಅನಿವಾರ್ಯವಾದ ಸಂದರ್ಭದಲ್ಲಿ ಅವರು ವ್ಯಕ್ತಿಯ ನಡುವಿನ ಕೆಳಭಾಗಕ್ಕೆ, ಅಂದರೆ ಕಾಲುಗಳಿಗೆ, ಮಾತ್ರ ಶೂಟ್ ಮಾಡಬೇಕು. ಮಂಗಳೂರಿನ ಗಲಭೆಯ ಸಂದರ್ಭದಲ್ಲಿ ಪೊಲೀಸರು ಎದೆಗೆ ಗುಂಡು ಹೊಡೆದಿದ್ದಾರೆ. ಇನ್ನೊಬ್ಬರ ಮುಖಕ್ಕೆ ಹೊಡೆಯಲು ಗುರಿಯಿಟ್ಟ ಗುಂಡು ತಲೆಯ ಮೇಲೆ ಹಾರಿಹೋಯಿತಂತೆ. ಇವೆಲ್ಲವೂ ಸ್ಪಷ್ಟವಾಗಿ ಆಡಳಿತ ನಡೆಸುತ್ತಿರುವವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ದ್ಯೋತಕವಾಗಿವೆ.

ಅಧಿಕಾರ ಅಪಬಳಕೆ ಮತ್ತು ಬಲಪ್ರಯೋಗದ ಮೂಲಕ ಜನರ ದನಿಯನ್ನು ಹತ್ತಿಕ್ಕಬಹುದು ಎಂಬ ಅಪಕ್ವ ಆಲೋಚನೆ ತುಂಬಿಕೊಂಡವರು ನಮ್ಮ ಆಡಳಿತಗಾರರಾಗಿರುವುದು ನಿಜಕ್ಕೂ ನಮ್ಮ ದೌರ್ಭಾಗ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...