Homeಎಚ್.ಎಸ್.ದೊರೆಸ್ವಾಮಿಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? - ಎಚ್‌.ಎಸ್ ದೊರೆಸ್ವಾಮಿ

ಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? – ಎಚ್‌.ಎಸ್ ದೊರೆಸ್ವಾಮಿ

ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು.

- Advertisement -
- Advertisement -

144ನೇ ಸೆಕ್ಷನ್ ಪ್ರಕಾರ 5 ಜನ ಒಟ್ಟಿಗೆ ಕೂಡುವುದು ನ್ಯಾಯಬಾಹಿರ. ಇತ್ತೀಚೆಗೆ ಭಾರತದ ಅನೇಕ ರಾಜ್ಯಗಳಲ್ಲಿ ಈ ಸೆಕ್ಷನ್ ಅನ್ನು ಜಾರಿಗೊಳಿಸಲಾಯಿತು. ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸಭೆಗಳು ನಡೆದ ಕಡೆಗಳಲ್ಲೆಲ್ಲಾ 144ನೇ ಸೆಕ್ಷನ್ ವಿಧಿಸಲಾಯಿತು. ಚೆನ್ನೈನಲ್ಲಿ ಪ್ರತಿಭಟನಾ ಸಭೆ ತಡೆಗಟ್ಟುವುದಕ್ಕೆ 144ನೇ ಸೆಕ್ಷನ್ ಜಾರಿ ಮಾಡಿದಾಗ ಚಳವಳಿ ಸಂಘಟಕರು ಮದ್ರಾಸ್ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದರು. ಅಲ್ಲಿಯ ನ್ಯಾಯಾಧೀಶರಾದ ನ್ಯಾ. ವೈದ್ಯನಾಥನ್ ಮತ್ತು ನ್ಯಾ. ಪಿ.ಟಿ.ಆಶಾ ಅವರಿದ್ದ ನ್ಯಾಯಪೀಠ ನಡುರಾತ್ರಿಯಲ್ಲಿ ತೀರ್ಪಿತ್ತು, ‘ಸಾರ್ವಜನಿಕ ಭದ್ರತೆಯನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂಬುದು ನಿಜವಾದರೂ, ಸಾರ್ವಜನಿಕರು ಸರ್ಕಾರದ ಧೋರಣೆಯನ್ನು ಪ್ರತಿಭಟಿಸಿ ವಿರೋಧ ವ್ಯಕ್ತಪಡಿಸುವುದೂ ಅವರ ಹಕ್ಕು’ ಎಂದಿತು.

ಸರ್ಕಾರದ ವಿರುದ್ಧವಾಗಿ ಪ್ರತಿಪಕ್ಷಗಳ ಪ್ರತಿಭಟನೆ ಮಾಡುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ ಶಾಂತಿ ಕದಡುವ ಕೆಲಸಕ್ಕೆ ಹೋರಾಟಗಾರರು ಕೈಹಾಕಬಾರದು ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿತು. ಅವರು ತೀರ್ಪನ್ನು ನೀಡುವಾಗ ಕೆಲವು ಪ್ರಮುಖ ವಿಚಾರಗಳ ಕುರಿತು ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ್ದಾರೆ.

ಸ್ವಾತಂತ್ರ್ಯ ಎಲ್ಲಾ ಜನರ ಹಕ್ಕು. ಸಿಎಎ ಮತ್ತು ಎನ್‍ಪಿಎ ವಿರುದ್ಧವಾಗಿ ಧ್ವನಿ ಎತ್ತುವವರ ವಾದದಲ್ಲಿ ಒಂದು ತರ್ಕ ಇದೆ. ಎನ್‍ಆರ್‍ಸಿ ಮತ್ತು ಸಿಎಎ ಎರಡಕ್ಕೂ ಸಂಬಂಧ ಇದೆ, ಅವನ್ನು ಪ್ರತ್ಯೇಕಿಸಲಾಗದು ಎಂದು ಗೃಹಮಂತ್ರಿಗಳು ಹೇಳಿದ್ದಾರೆ. ಆದ್ದರಿಂದ ಇವೆರಡರ ಹಿಂದೆ ಜನರನ್ನು ಮತೀಯವಾಗಿ ಒಡೆಯುವ ಭಯಾನಕ ಅಜೆಂಡಾವೊಂದಿದೆ ಎಂಬುದು ನಿರ್ವಿವಾದ. ಬಹುತ್ವ, ಪ್ರಜಾಪ್ರಭುತ್ವದ ಒಂದು virtue. ನಮ್ಮ ರಾಜ್ಯಾಂಗ ಜಾತ್ಯತೀತ ಭವಿಷ್ಯವನ್ನು ನಮ್ಮ ಜನತೆಗೆ ದಯಪಾಲಿಸಿದೆ. ಪಾರ್ಲಿಮೆಂಟ್, ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಭಾರತೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ಸಿದ್ಧಪಡಿಸಿದೆ ಎಂಬುದು ನಿಜ. ಸರ್ವೋಚ್ಚ ನ್ಯಾಯಾಲಯ ಈ ಕಾಯ್ದೆ ನ್ಯಾಯಯುತ ಅಥವಾ ನ್ಯಾಯಬಾಹಿರ ಎಂದು ತೀರ್ಪು ನೀಡಬಹುದು. ಆದರೆ ರಾಜ್ಯ ರೂಪಿಸುವ ಕಾನೂನು ಅಥವಾ ನ್ಯಾಯಾಲಯ ನೀಡುವ ತೀರ್ಪು ಜನತೆಯ ಹೋರಾಟದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಮೊದಲ ತತ್ವ ನಾಗರಿಕನಿಗಿರುವ ಪ್ರತಿಭಟಿಸುವ ಹಕ್ಕು. ಸರ್ಕಾರ ಮಾಡಿದ ಕೆಟ್ಟ ಕಾಯ್ದೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವುದೇ ಪ್ರಜಾಪ್ರಭುತ್ವದ ಮೂಲಭೂತ ಸಿದ್ಧಾಂತ.

ಆಡಳಿತ ನಡೆಸುವವರು ಹಿಂಸೆಯನ್ನು ಯಾವುದೇ ರೂಪದಲ್ಲೂ ಆಚರಣೆಗೆ ತಂದರೂ, ಅದು ತಪ್ಪು. ಚಳವಳಿಗಾರರು ಹಿಂಸೆಯನ್ನು ಆಚರಣೆಗೆ ತಂದರೂ ತಪ್ಪು. ಈ ಬಗೆಯ ಹಿಂಸೆಯನ್ನು ಖಂಡಿಸಲೇಬೇಕು. ಸಿಎಎ ಕಾಯ್ದೆ ವಿರೋಧಿಸಿ ನಡೆದ ಅನೇಕ ಪ್ರತಿಭಟನೆಗಳ ಸಂದರ್ಭಗಳಲ್ಲಿ ಆಡಳಿತಗಾರರು ಈ ಬಗೆಯ ತಪ್ಪು ಮಾಡಿದ್ದಾರೆ. ಇತರೆ ಕೆಲವು ಸಂದರ್ಭಗಳಲ್ಲಿ ಹೋರಾಟಗಾರರು ಕೂಡಾ ಈ ತಪ್ಪು ಎಸಗಿದ್ದಾರೆ. ಇಬ್ಬರೂ ಹಿಂಸೆಗೆ ಎಡೆಮಾಡಿದ್ದಾರೆ.

ಅನೇಕ ರಾಜ್ಯಗಳಲ್ಲಿ 144ನೇ ಸೆಕ್ಷನ್ ಅನ್ನು ಜಾರಿಗೆ ತರಲಾಯಿತು. ಅದನ್ನು ಪ್ರತಿಭಟನಾಕಾರರ ಮೇಲೆ ಪ್ರಯೋಗಿಸಲಾಯಿತು. 144ನೇ ಸೆಕ್ಷನ್ ಚಳವಳಿಗಾರರನ್ನು ಸರಿದಾರಿಗೆ ತರುವ ಕಾನೂನೇ ಹೊರತು, ಅದು ಸೈನಿಕರ ಅಧಿಕಾರ ಚಲಾಯಿಸುವಂತಿಲ್ಲ. ಸಾರ್ವಜನಿಕರನ್ನು ಹತೋಟಿ ಮಾಡುವುದೇ ಬೇರೆ ವಿಚಾರ. ಸಾರ್ವಜನಿಕ ಹೋರಾಟವನ್ನು ಹತ್ತಿಕ್ಕುವುದೇ ಬೇರೆ ವಿಚಾರ. 144ನೇ ಸೆಕ್ಷನ್ ಇರುವುದು ಸಾರ್ವಜನಿಕರನ್ನು ಹತೋಟಿಯಲ್ಲಿಟ್ಟುಕೊಳ್ಳುವುದಕ್ಕೆ, ಮಿಲಿಟರಿ ಶಕ್ತಿ ಬಳಕೆಗಲ್ಲ; ನಿಜವಾದ ಅಪಾಯ ಕಾಣಿಸಿಕೊಂಡರೂ ಕನಿಷ್ಠ ಬಲಪ್ರಯೋಗ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕೆ.

ಸರ್ಕಾರದ ಶಾಸನಕ್ಕೆ ವಿರೋಧ ವ್ಯಕ್ತಪಡಿಸುವವರಿಗೆ ಕೆಲವು ರಕ್ಷಣೆಗಳಿವೆ. 144ನೇ ಸೆಕ್ಷನ್ ಹಾಕಬೇಕಾದರೆ ಅದಕ್ಕೆ ತಕ್ಷಣದ ಬೆಳವಣಿಗೆಗಳೇ ಕಾರಣವಾಗಿರಬೇಕು. ಕೂಡಲೇ ಕ್ರಮಕೈಗೊಳ್ಳದಿದ್ದರೆ ಕೈಮೀರಿಹೋಗುವ ಘಟನೆಗಳು ನಡೆಯಬಹುದಾದ ಸೂಚನೆಗಳಿದ್ದಾಗ 144ನೇ ಸೆಕ್ಷನ್ ಜಾರಿಗೊಳಿಸಬಹುದು. ಹಾಗಿಲ್ಲದೆ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ 144ನೇ ಸೆಕ್ಷನ್ ಅನ್ನು ಅಕಾರಣವಾಗಿ ಜಾರಿಗೊಳಿಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ರಾಜ್ಯಾಂಗದಲ್ಲಿ ಖಾಸಗಿತನ ಮತ್ತು ಪ್ರಜೆಯ ಘನತೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಸನ್ನಿವೇಶ ಕೈಮೀರುವ ಸಂದರ್ಭದಲ್ಲಿ ಮಾತ್ರ ಪೊಲೀಸರು ಅದನ್ನು ಹತ್ತಿಕ್ಕಲು ಸೂಕ್ತ ಕ್ರಮಕೈಗೊಳ್ಳಬಹುದು. ಹಾಗೆಂದು ಪೊಲೀಸರಿಗೆ ಕಟ್ಟುಪಾಡಿಲ್ಲದ ಸ್ವಾತಂತ್ರ್ಯವಿದೆಯೆಂದು ಭಾವಿಸಬಾರದು. ಶಾಂತಿಯು ಪ್ರತಿಭಟನೆ ನಡೆಸುವುದು ಮತ್ತು ಸಾರ್ವಜನಿಕ ಸಭೆ ನಡೆಸುವುದು ರಾಜ್ಯಾಂಗ ನಮಗಿತ್ತಿರುವ ಅಧಿಕಾರ.

ಥೋರೊ ಅವರು ಪೌರರು ಸರ್ಕಾರದ ವಿರುದ್ಧ ಕಾನೂನು ಮುರಿಯುವ ಆಂದೋಲನವನ್ನು ನಡೆಸಿದ ಮೊದಲಿಗರು. ಮಹಾತ್ಮಾ ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್, ನಾಗರಿಕ ಕಾನೂನು ಉಲ್ಲಂಘನೆಯ ಚಳುವಳಿ ಕ್ರಿಮಿನಲ್ ರೂಪ ತಾಳಬಾರದೆಂದು ಪ್ರತಿಪಾದಿಸಿದರು. ಕಾನೂನು ಉಲ್ಲಂಘನೆ ಚಳವಳಿ ಶಾಂತಿಯುತವಾಗಿರಬೇಕು, ಅಹಿಂಸಕವಾಗಿರಬೇಕು ಎಂಬುದು ಅವರ ನಿಲುವು. ಪ್ರಜೆಯ ರಾಷ್ಟ್ರಭಕ್ತಿಯ ಧ್ಯೋತಕವೆಂದರೆ ದೇಶದ ರಾಜ್ಯಾಂಗದ ಆಶಯಗಳಿಗೆ ವಿರುದ್ಧವಾಗಿರುವ ಕಾನೂನುಗಳನ್ನು ಉಲ್ಲಂಘಿಸುವುದು. ಒತ್ತಾಯಪೂರ್ವಕವಾಗಿ ಜನತೆಯನ್ನು ಹಣ್ಣು ಮಾಡಲು ಪ್ರಯತ್ನಿಸುವ ಸರ್ಕಾರ ತಮ್ಮ ಬಗೆಗೆ ವಿರೋಧ ವ್ಯಕ್ತಪಡಿಸುವವರನ್ನು ಕ್ರಮೇಣ ಮುಗಿಸಿಯೇ ಬಿಡಬಹುದು. ತಾನು ಮಾಡಿದ ಕಾನೂನನ್ನು ಒತ್ತಾಯಪೂರ್ವಕವಾಗಿ ಒಪ್ಪಿಕೊಳ್ಳಲೇಬೇಕೆಂದು ಸರ್ಕಾರ ಪಟ್ಟು ಹಿಡಿದರೆ ಅದು ಸಂಘರ್ಷದಲ್ಲಿ ಪರ್ಯವಸನವಾಗಬಹುದು.

ಮಂಗಳೂರಿನಲ್ಲಿ ನಡೆದ ಪೊಲೀಸರ ದುರ್ವರ್ತನೆ ಅಕ್ಷಮ್ಯ. ಪೊಲೀಸರು ಗುಂಡು ಹಾರಿಸುವುದಕ್ಕೆ ಒಂದು ನಿಯಮ ಇದೆ. ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು. ಅಲ್ಲಿಯ ಸಂದರ್ಭದಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಕೇಳಿದನಂತೆ, “ಇನ್ನೂ ಯಾರನ್ನೂ ಶೂಟ್ ಮಾಡಿ ಕೊಂದಿಲ್ಲವೇ?” ಎಂದು. ಇಂತಹ ಬರ್ಬರ ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದಾರೆ ಎನ್ನುವುದೇ ದುರಂತ!

ಪೊಲೀಸರು ಗುಂಡು ಹಾರಿಸುವುದು ಅನಿವಾರ್ಯವಾದ ಸಂದರ್ಭದಲ್ಲಿ ಅವರು ವ್ಯಕ್ತಿಯ ನಡುವಿನ ಕೆಳಭಾಗಕ್ಕೆ, ಅಂದರೆ ಕಾಲುಗಳಿಗೆ, ಮಾತ್ರ ಶೂಟ್ ಮಾಡಬೇಕು. ಮಂಗಳೂರಿನ ಗಲಭೆಯ ಸಂದರ್ಭದಲ್ಲಿ ಪೊಲೀಸರು ಎದೆಗೆ ಗುಂಡು ಹೊಡೆದಿದ್ದಾರೆ. ಇನ್ನೊಬ್ಬರ ಮುಖಕ್ಕೆ ಹೊಡೆಯಲು ಗುರಿಯಿಟ್ಟ ಗುಂಡು ತಲೆಯ ಮೇಲೆ ಹಾರಿಹೋಯಿತಂತೆ. ಇವೆಲ್ಲವೂ ಸ್ಪಷ್ಟವಾಗಿ ಆಡಳಿತ ನಡೆಸುತ್ತಿರುವವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ದ್ಯೋತಕವಾಗಿವೆ.

ಅಧಿಕಾರ ಅಪಬಳಕೆ ಮತ್ತು ಬಲಪ್ರಯೋಗದ ಮೂಲಕ ಜನರ ದನಿಯನ್ನು ಹತ್ತಿಕ್ಕಬಹುದು ಎಂಬ ಅಪಕ್ವ ಆಲೋಚನೆ ತುಂಬಿಕೊಂಡವರು ನಮ್ಮ ಆಡಳಿತಗಾರರಾಗಿರುವುದು ನಿಜಕ್ಕೂ ನಮ್ಮ ದೌರ್ಭಾಗ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....