Homeಎಚ್.ಎಸ್.ದೊರೆಸ್ವಾಮಿಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? - ಎಚ್‌.ಎಸ್ ದೊರೆಸ್ವಾಮಿ

ಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? – ಎಚ್‌.ಎಸ್ ದೊರೆಸ್ವಾಮಿ

ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು.

- Advertisement -
- Advertisement -

144ನೇ ಸೆಕ್ಷನ್ ಪ್ರಕಾರ 5 ಜನ ಒಟ್ಟಿಗೆ ಕೂಡುವುದು ನ್ಯಾಯಬಾಹಿರ. ಇತ್ತೀಚೆಗೆ ಭಾರತದ ಅನೇಕ ರಾಜ್ಯಗಳಲ್ಲಿ ಈ ಸೆಕ್ಷನ್ ಅನ್ನು ಜಾರಿಗೊಳಿಸಲಾಯಿತು. ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸಭೆಗಳು ನಡೆದ ಕಡೆಗಳಲ್ಲೆಲ್ಲಾ 144ನೇ ಸೆಕ್ಷನ್ ವಿಧಿಸಲಾಯಿತು. ಚೆನ್ನೈನಲ್ಲಿ ಪ್ರತಿಭಟನಾ ಸಭೆ ತಡೆಗಟ್ಟುವುದಕ್ಕೆ 144ನೇ ಸೆಕ್ಷನ್ ಜಾರಿ ಮಾಡಿದಾಗ ಚಳವಳಿ ಸಂಘಟಕರು ಮದ್ರಾಸ್ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದರು. ಅಲ್ಲಿಯ ನ್ಯಾಯಾಧೀಶರಾದ ನ್ಯಾ. ವೈದ್ಯನಾಥನ್ ಮತ್ತು ನ್ಯಾ. ಪಿ.ಟಿ.ಆಶಾ ಅವರಿದ್ದ ನ್ಯಾಯಪೀಠ ನಡುರಾತ್ರಿಯಲ್ಲಿ ತೀರ್ಪಿತ್ತು, ‘ಸಾರ್ವಜನಿಕ ಭದ್ರತೆಯನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂಬುದು ನಿಜವಾದರೂ, ಸಾರ್ವಜನಿಕರು ಸರ್ಕಾರದ ಧೋರಣೆಯನ್ನು ಪ್ರತಿಭಟಿಸಿ ವಿರೋಧ ವ್ಯಕ್ತಪಡಿಸುವುದೂ ಅವರ ಹಕ್ಕು’ ಎಂದಿತು.

ಸರ್ಕಾರದ ವಿರುದ್ಧವಾಗಿ ಪ್ರತಿಪಕ್ಷಗಳ ಪ್ರತಿಭಟನೆ ಮಾಡುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ ಶಾಂತಿ ಕದಡುವ ಕೆಲಸಕ್ಕೆ ಹೋರಾಟಗಾರರು ಕೈಹಾಕಬಾರದು ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿತು. ಅವರು ತೀರ್ಪನ್ನು ನೀಡುವಾಗ ಕೆಲವು ಪ್ರಮುಖ ವಿಚಾರಗಳ ಕುರಿತು ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ್ದಾರೆ.

ಸ್ವಾತಂತ್ರ್ಯ ಎಲ್ಲಾ ಜನರ ಹಕ್ಕು. ಸಿಎಎ ಮತ್ತು ಎನ್‍ಪಿಎ ವಿರುದ್ಧವಾಗಿ ಧ್ವನಿ ಎತ್ತುವವರ ವಾದದಲ್ಲಿ ಒಂದು ತರ್ಕ ಇದೆ. ಎನ್‍ಆರ್‍ಸಿ ಮತ್ತು ಸಿಎಎ ಎರಡಕ್ಕೂ ಸಂಬಂಧ ಇದೆ, ಅವನ್ನು ಪ್ರತ್ಯೇಕಿಸಲಾಗದು ಎಂದು ಗೃಹಮಂತ್ರಿಗಳು ಹೇಳಿದ್ದಾರೆ. ಆದ್ದರಿಂದ ಇವೆರಡರ ಹಿಂದೆ ಜನರನ್ನು ಮತೀಯವಾಗಿ ಒಡೆಯುವ ಭಯಾನಕ ಅಜೆಂಡಾವೊಂದಿದೆ ಎಂಬುದು ನಿರ್ವಿವಾದ. ಬಹುತ್ವ, ಪ್ರಜಾಪ್ರಭುತ್ವದ ಒಂದು virtue. ನಮ್ಮ ರಾಜ್ಯಾಂಗ ಜಾತ್ಯತೀತ ಭವಿಷ್ಯವನ್ನು ನಮ್ಮ ಜನತೆಗೆ ದಯಪಾಲಿಸಿದೆ. ಪಾರ್ಲಿಮೆಂಟ್, ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಭಾರತೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ಸಿದ್ಧಪಡಿಸಿದೆ ಎಂಬುದು ನಿಜ. ಸರ್ವೋಚ್ಚ ನ್ಯಾಯಾಲಯ ಈ ಕಾಯ್ದೆ ನ್ಯಾಯಯುತ ಅಥವಾ ನ್ಯಾಯಬಾಹಿರ ಎಂದು ತೀರ್ಪು ನೀಡಬಹುದು. ಆದರೆ ರಾಜ್ಯ ರೂಪಿಸುವ ಕಾನೂನು ಅಥವಾ ನ್ಯಾಯಾಲಯ ನೀಡುವ ತೀರ್ಪು ಜನತೆಯ ಹೋರಾಟದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಮೊದಲ ತತ್ವ ನಾಗರಿಕನಿಗಿರುವ ಪ್ರತಿಭಟಿಸುವ ಹಕ್ಕು. ಸರ್ಕಾರ ಮಾಡಿದ ಕೆಟ್ಟ ಕಾಯ್ದೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವುದೇ ಪ್ರಜಾಪ್ರಭುತ್ವದ ಮೂಲಭೂತ ಸಿದ್ಧಾಂತ.

ಆಡಳಿತ ನಡೆಸುವವರು ಹಿಂಸೆಯನ್ನು ಯಾವುದೇ ರೂಪದಲ್ಲೂ ಆಚರಣೆಗೆ ತಂದರೂ, ಅದು ತಪ್ಪು. ಚಳವಳಿಗಾರರು ಹಿಂಸೆಯನ್ನು ಆಚರಣೆಗೆ ತಂದರೂ ತಪ್ಪು. ಈ ಬಗೆಯ ಹಿಂಸೆಯನ್ನು ಖಂಡಿಸಲೇಬೇಕು. ಸಿಎಎ ಕಾಯ್ದೆ ವಿರೋಧಿಸಿ ನಡೆದ ಅನೇಕ ಪ್ರತಿಭಟನೆಗಳ ಸಂದರ್ಭಗಳಲ್ಲಿ ಆಡಳಿತಗಾರರು ಈ ಬಗೆಯ ತಪ್ಪು ಮಾಡಿದ್ದಾರೆ. ಇತರೆ ಕೆಲವು ಸಂದರ್ಭಗಳಲ್ಲಿ ಹೋರಾಟಗಾರರು ಕೂಡಾ ಈ ತಪ್ಪು ಎಸಗಿದ್ದಾರೆ. ಇಬ್ಬರೂ ಹಿಂಸೆಗೆ ಎಡೆಮಾಡಿದ್ದಾರೆ.

ಅನೇಕ ರಾಜ್ಯಗಳಲ್ಲಿ 144ನೇ ಸೆಕ್ಷನ್ ಅನ್ನು ಜಾರಿಗೆ ತರಲಾಯಿತು. ಅದನ್ನು ಪ್ರತಿಭಟನಾಕಾರರ ಮೇಲೆ ಪ್ರಯೋಗಿಸಲಾಯಿತು. 144ನೇ ಸೆಕ್ಷನ್ ಚಳವಳಿಗಾರರನ್ನು ಸರಿದಾರಿಗೆ ತರುವ ಕಾನೂನೇ ಹೊರತು, ಅದು ಸೈನಿಕರ ಅಧಿಕಾರ ಚಲಾಯಿಸುವಂತಿಲ್ಲ. ಸಾರ್ವಜನಿಕರನ್ನು ಹತೋಟಿ ಮಾಡುವುದೇ ಬೇರೆ ವಿಚಾರ. ಸಾರ್ವಜನಿಕ ಹೋರಾಟವನ್ನು ಹತ್ತಿಕ್ಕುವುದೇ ಬೇರೆ ವಿಚಾರ. 144ನೇ ಸೆಕ್ಷನ್ ಇರುವುದು ಸಾರ್ವಜನಿಕರನ್ನು ಹತೋಟಿಯಲ್ಲಿಟ್ಟುಕೊಳ್ಳುವುದಕ್ಕೆ, ಮಿಲಿಟರಿ ಶಕ್ತಿ ಬಳಕೆಗಲ್ಲ; ನಿಜವಾದ ಅಪಾಯ ಕಾಣಿಸಿಕೊಂಡರೂ ಕನಿಷ್ಠ ಬಲಪ್ರಯೋಗ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕೆ.

ಸರ್ಕಾರದ ಶಾಸನಕ್ಕೆ ವಿರೋಧ ವ್ಯಕ್ತಪಡಿಸುವವರಿಗೆ ಕೆಲವು ರಕ್ಷಣೆಗಳಿವೆ. 144ನೇ ಸೆಕ್ಷನ್ ಹಾಕಬೇಕಾದರೆ ಅದಕ್ಕೆ ತಕ್ಷಣದ ಬೆಳವಣಿಗೆಗಳೇ ಕಾರಣವಾಗಿರಬೇಕು. ಕೂಡಲೇ ಕ್ರಮಕೈಗೊಳ್ಳದಿದ್ದರೆ ಕೈಮೀರಿಹೋಗುವ ಘಟನೆಗಳು ನಡೆಯಬಹುದಾದ ಸೂಚನೆಗಳಿದ್ದಾಗ 144ನೇ ಸೆಕ್ಷನ್ ಜಾರಿಗೊಳಿಸಬಹುದು. ಹಾಗಿಲ್ಲದೆ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ 144ನೇ ಸೆಕ್ಷನ್ ಅನ್ನು ಅಕಾರಣವಾಗಿ ಜಾರಿಗೊಳಿಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ರಾಜ್ಯಾಂಗದಲ್ಲಿ ಖಾಸಗಿತನ ಮತ್ತು ಪ್ರಜೆಯ ಘನತೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಸನ್ನಿವೇಶ ಕೈಮೀರುವ ಸಂದರ್ಭದಲ್ಲಿ ಮಾತ್ರ ಪೊಲೀಸರು ಅದನ್ನು ಹತ್ತಿಕ್ಕಲು ಸೂಕ್ತ ಕ್ರಮಕೈಗೊಳ್ಳಬಹುದು. ಹಾಗೆಂದು ಪೊಲೀಸರಿಗೆ ಕಟ್ಟುಪಾಡಿಲ್ಲದ ಸ್ವಾತಂತ್ರ್ಯವಿದೆಯೆಂದು ಭಾವಿಸಬಾರದು. ಶಾಂತಿಯು ಪ್ರತಿಭಟನೆ ನಡೆಸುವುದು ಮತ್ತು ಸಾರ್ವಜನಿಕ ಸಭೆ ನಡೆಸುವುದು ರಾಜ್ಯಾಂಗ ನಮಗಿತ್ತಿರುವ ಅಧಿಕಾರ.

ಥೋರೊ ಅವರು ಪೌರರು ಸರ್ಕಾರದ ವಿರುದ್ಧ ಕಾನೂನು ಮುರಿಯುವ ಆಂದೋಲನವನ್ನು ನಡೆಸಿದ ಮೊದಲಿಗರು. ಮಹಾತ್ಮಾ ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್, ನಾಗರಿಕ ಕಾನೂನು ಉಲ್ಲಂಘನೆಯ ಚಳುವಳಿ ಕ್ರಿಮಿನಲ್ ರೂಪ ತಾಳಬಾರದೆಂದು ಪ್ರತಿಪಾದಿಸಿದರು. ಕಾನೂನು ಉಲ್ಲಂಘನೆ ಚಳವಳಿ ಶಾಂತಿಯುತವಾಗಿರಬೇಕು, ಅಹಿಂಸಕವಾಗಿರಬೇಕು ಎಂಬುದು ಅವರ ನಿಲುವು. ಪ್ರಜೆಯ ರಾಷ್ಟ್ರಭಕ್ತಿಯ ಧ್ಯೋತಕವೆಂದರೆ ದೇಶದ ರಾಜ್ಯಾಂಗದ ಆಶಯಗಳಿಗೆ ವಿರುದ್ಧವಾಗಿರುವ ಕಾನೂನುಗಳನ್ನು ಉಲ್ಲಂಘಿಸುವುದು. ಒತ್ತಾಯಪೂರ್ವಕವಾಗಿ ಜನತೆಯನ್ನು ಹಣ್ಣು ಮಾಡಲು ಪ್ರಯತ್ನಿಸುವ ಸರ್ಕಾರ ತಮ್ಮ ಬಗೆಗೆ ವಿರೋಧ ವ್ಯಕ್ತಪಡಿಸುವವರನ್ನು ಕ್ರಮೇಣ ಮುಗಿಸಿಯೇ ಬಿಡಬಹುದು. ತಾನು ಮಾಡಿದ ಕಾನೂನನ್ನು ಒತ್ತಾಯಪೂರ್ವಕವಾಗಿ ಒಪ್ಪಿಕೊಳ್ಳಲೇಬೇಕೆಂದು ಸರ್ಕಾರ ಪಟ್ಟು ಹಿಡಿದರೆ ಅದು ಸಂಘರ್ಷದಲ್ಲಿ ಪರ್ಯವಸನವಾಗಬಹುದು.

ಮಂಗಳೂರಿನಲ್ಲಿ ನಡೆದ ಪೊಲೀಸರ ದುರ್ವರ್ತನೆ ಅಕ್ಷಮ್ಯ. ಪೊಲೀಸರು ಗುಂಡು ಹಾರಿಸುವುದಕ್ಕೆ ಒಂದು ನಿಯಮ ಇದೆ. ಪರಿಸ್ಥಿತಿ ಕೈಮೀರಿಹೋಗುವ ಸಂದರ್ಭದಲ್ಲಿ ಪೊಲೀಸರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಅವರು ಕೊಲೆಗಡುಕರಂತೆ ನಡೆದುಕೊಳ್ಳಬಾರದು. ಅಲ್ಲಿಯ ಸಂದರ್ಭದಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಕೇಳಿದನಂತೆ, “ಇನ್ನೂ ಯಾರನ್ನೂ ಶೂಟ್ ಮಾಡಿ ಕೊಂದಿಲ್ಲವೇ?” ಎಂದು. ಇಂತಹ ಬರ್ಬರ ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದಾರೆ ಎನ್ನುವುದೇ ದುರಂತ!

ಪೊಲೀಸರು ಗುಂಡು ಹಾರಿಸುವುದು ಅನಿವಾರ್ಯವಾದ ಸಂದರ್ಭದಲ್ಲಿ ಅವರು ವ್ಯಕ್ತಿಯ ನಡುವಿನ ಕೆಳಭಾಗಕ್ಕೆ, ಅಂದರೆ ಕಾಲುಗಳಿಗೆ, ಮಾತ್ರ ಶೂಟ್ ಮಾಡಬೇಕು. ಮಂಗಳೂರಿನ ಗಲಭೆಯ ಸಂದರ್ಭದಲ್ಲಿ ಪೊಲೀಸರು ಎದೆಗೆ ಗುಂಡು ಹೊಡೆದಿದ್ದಾರೆ. ಇನ್ನೊಬ್ಬರ ಮುಖಕ್ಕೆ ಹೊಡೆಯಲು ಗುರಿಯಿಟ್ಟ ಗುಂಡು ತಲೆಯ ಮೇಲೆ ಹಾರಿಹೋಯಿತಂತೆ. ಇವೆಲ್ಲವೂ ಸ್ಪಷ್ಟವಾಗಿ ಆಡಳಿತ ನಡೆಸುತ್ತಿರುವವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ದ್ಯೋತಕವಾಗಿವೆ.

ಅಧಿಕಾರ ಅಪಬಳಕೆ ಮತ್ತು ಬಲಪ್ರಯೋಗದ ಮೂಲಕ ಜನರ ದನಿಯನ್ನು ಹತ್ತಿಕ್ಕಬಹುದು ಎಂಬ ಅಪಕ್ವ ಆಲೋಚನೆ ತುಂಬಿಕೊಂಡವರು ನಮ್ಮ ಆಡಳಿತಗಾರರಾಗಿರುವುದು ನಿಜಕ್ಕೂ ನಮ್ಮ ದೌರ್ಭಾಗ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...