Homeಕರ್ನಾಟಕಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ

‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶವನ್ನು ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್, ನೈಸ್ ಭೂ ಸಂತ್ರಸ್ತ ರೈತ ಹನುಮಂತಪ್ಪ ಅವರು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಚಾಮರಸಮಾಲೀ ಪಾಟೀಲ್ ಅವರು, “ಚುನಾವಣೆ ಪೂರ್ವದಲ್ಲಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತುಬಿಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

View this post on Instagram

 

A post shared by Naanu Gauri (@naanu_gauri)

“ಸಿದ್ದರಾಮಯ್ಯ ಕೂಡಾ ಈ ಹಿಂದೆ ಬಿಜೆಪಿಯ ಬೊಮ್ಮಾಯಿ ಸರ್ಕಾರದ ವಿರುದ್ಧದ ನಮ್ಮ ಹೋರಾಟಗಳಿಗೆ ಬಂದು ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರೈತ ವಿರೋಧಿ ನೀತಿಯನ್ನು ವಾಪಾಸು ಪಡೆಯುತ್ತೇವೆ ಎಂದಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇನ್ನೂ ವಾಪಾಸು ಪಡೆದಿಲ್ಲ. ಜಾನುವಾರು ಕಾಯ್ದೆ, ವಿದ್ಯುತ್ ಕಾಯ್ದೆಯ ವಿರುದ್ಧ ಮಾತನಾಡಿದ್ದರು. ಆದರೆ ಅವರಿನ್ನೂ ಅದನ್ನು ಮಾಡಿಲ್ಲ” ಎಂದು ಹೇಳಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು, ಈ ಬಗ್ಗೆ ನಾವು ಅವರಿಗೆ ಲಿಖಿತ ಮನವಿ ಕೂಡಾ ಮಾಡಿದ್ದೇವೆ. ಆದರೆ ಅವರು ಏನೂ ಕ್ರಮ ಕೈಗೊಂಡಿಲ್ಲ. ಅವರು ಬಿಜೆಪಿ ಸಿಎಂ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದರು. ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ.” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಷ್ಟೇ ಭ್ರಷ್ಟಾಚಾರ ಕರ್ನಾಟಕದಲ್ಲಿ ಬೆಳೆಯುತ್ತಿದೆ. ರಾಜ್ಯದ ಹಲವು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದೆ. ಅನುದಾನ ನೀಡಲ್ಲ ಎಂದು ಕೇಂದ್ರದ ವಿರುದ್ಧ ಹೋರಾಡಿ ಮೂರು ಸಾವಿರ ಅನುದಾನ ಬಿಡುಗಡೆ ಆಯಿತು. ಆದರೆ ಅದನ್ನು ರಾಜ್ಯ ಸರ್ಕಾರ ಅದನ್ನು ಸರಿಯಾಗಿ ರೈತರಿಗೆ ಹಂಚಿಲ್ಲ” ಎಂದು ಹೇಳಿದರು.

ಜನವರಿಯಲ್ಲಿ ಕಟಾವಾದ ಜೋಳಕ್ಕೆ ಎಪ್ರಿಲ್‌ನಲ್ಲಿ ಖರೀದಿ ಕೇಂದ್ರ ತೆರೆದಿದೆ. ಈಗ ನುಸಿ ಬಂದಿದೆ ಎಂದು ಸಬೂಬು ಹೇಳುತ್ತಿದ್ದಾರೆ.‌ಇದಕ್ಕೆ ಕಾರಣ ಯಾರು? ತಡವಾಗಿ ಖರೀದಿ ಕೇಂದ್ರ ತೆರೆದಿದ್ದು ರೈತರ ತಪ್ಪೆ? ಎಂದು ಕೇಳಿದ ಅವರು, “ತುಂಗಾ ಭದ್ರಾ ಗೇಟ್ ಹಾಳಾಗಿದೆ, ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಯಾವುದೇ ಒಂದು ಗೇಟ್ ಅನ್ನೂ ಬಿಚ್ಚಿಲ್ಲ” ಎಂದು ಹೇಳಿದರು.

“ಈ ಸರ್ಕಾರ ರೈತರಿಗೆ ಹಲವಾರು ಭರವಸೆ ನೀಡಿದರೂ ಈವರೆಗೆ ಯಾವುದೇ ಭರವಸೆ ಈಡೇರಿಲ್ಲ. ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಿದ್ದು ನಿಜವೇ ಆದರೂ, ಅದರ ಅರ್ಥ ಕಾಂಗ್ರೆಸ್ ಬೆಂಬಲಿಸಿ ಎಂದಲ್ಲ. ಸಂಘಟಿತ ಹೋರಾಟ ಬಹಳ ಅಗತ್ಯ. ರೈತರು, ದಲಿತರು ಅಲ್ಪಸಂಖ್ಯಾತರು, ಮಹಿಳೆಯರು ಈ ನೀತಿಗೆಟ್ಟ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕು” ಎಂದು ಅವರು ಹೇಳಿದರು. ಕಾಂಗ್ರೆಸ್ ಯಾವ ಮುಖ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...