Homeಕರ್ನಾಟಕಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ

‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶವನ್ನು ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್, ನೈಸ್ ಭೂ ಸಂತ್ರಸ್ತ ರೈತ ಹನುಮಂತಪ್ಪ ಅವರು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಚಾಮರಸಮಾಲೀ ಪಾಟೀಲ್ ಅವರು, “ಚುನಾವಣೆ ಪೂರ್ವದಲ್ಲಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತುಬಿಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

View this post on Instagram

 

A post shared by Naanu Gauri (@naanu_gauri)

“ಸಿದ್ದರಾಮಯ್ಯ ಕೂಡಾ ಈ ಹಿಂದೆ ಬಿಜೆಪಿಯ ಬೊಮ್ಮಾಯಿ ಸರ್ಕಾರದ ವಿರುದ್ಧದ ನಮ್ಮ ಹೋರಾಟಗಳಿಗೆ ಬಂದು ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರೈತ ವಿರೋಧಿ ನೀತಿಯನ್ನು ವಾಪಾಸು ಪಡೆಯುತ್ತೇವೆ ಎಂದಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇನ್ನೂ ವಾಪಾಸು ಪಡೆದಿಲ್ಲ. ಜಾನುವಾರು ಕಾಯ್ದೆ, ವಿದ್ಯುತ್ ಕಾಯ್ದೆಯ ವಿರುದ್ಧ ಮಾತನಾಡಿದ್ದರು. ಆದರೆ ಅವರಿನ್ನೂ ಅದನ್ನು ಮಾಡಿಲ್ಲ” ಎಂದು ಹೇಳಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು, ಈ ಬಗ್ಗೆ ನಾವು ಅವರಿಗೆ ಲಿಖಿತ ಮನವಿ ಕೂಡಾ ಮಾಡಿದ್ದೇವೆ. ಆದರೆ ಅವರು ಏನೂ ಕ್ರಮ ಕೈಗೊಂಡಿಲ್ಲ. ಅವರು ಬಿಜೆಪಿ ಸಿಎಂ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದರು. ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ.” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಷ್ಟೇ ಭ್ರಷ್ಟಾಚಾರ ಕರ್ನಾಟಕದಲ್ಲಿ ಬೆಳೆಯುತ್ತಿದೆ. ರಾಜ್ಯದ ಹಲವು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದೆ. ಅನುದಾನ ನೀಡಲ್ಲ ಎಂದು ಕೇಂದ್ರದ ವಿರುದ್ಧ ಹೋರಾಡಿ ಮೂರು ಸಾವಿರ ಅನುದಾನ ಬಿಡುಗಡೆ ಆಯಿತು. ಆದರೆ ಅದನ್ನು ರಾಜ್ಯ ಸರ್ಕಾರ ಅದನ್ನು ಸರಿಯಾಗಿ ರೈತರಿಗೆ ಹಂಚಿಲ್ಲ” ಎಂದು ಹೇಳಿದರು.

ಜನವರಿಯಲ್ಲಿ ಕಟಾವಾದ ಜೋಳಕ್ಕೆ ಎಪ್ರಿಲ್‌ನಲ್ಲಿ ಖರೀದಿ ಕೇಂದ್ರ ತೆರೆದಿದೆ. ಈಗ ನುಸಿ ಬಂದಿದೆ ಎಂದು ಸಬೂಬು ಹೇಳುತ್ತಿದ್ದಾರೆ.‌ಇದಕ್ಕೆ ಕಾರಣ ಯಾರು? ತಡವಾಗಿ ಖರೀದಿ ಕೇಂದ್ರ ತೆರೆದಿದ್ದು ರೈತರ ತಪ್ಪೆ? ಎಂದು ಕೇಳಿದ ಅವರು, “ತುಂಗಾ ಭದ್ರಾ ಗೇಟ್ ಹಾಳಾಗಿದೆ, ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಯಾವುದೇ ಒಂದು ಗೇಟ್ ಅನ್ನೂ ಬಿಚ್ಚಿಲ್ಲ” ಎಂದು ಹೇಳಿದರು.

“ಈ ಸರ್ಕಾರ ರೈತರಿಗೆ ಹಲವಾರು ಭರವಸೆ ನೀಡಿದರೂ ಈವರೆಗೆ ಯಾವುದೇ ಭರವಸೆ ಈಡೇರಿಲ್ಲ. ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಿದ್ದು ನಿಜವೇ ಆದರೂ, ಅದರ ಅರ್ಥ ಕಾಂಗ್ರೆಸ್ ಬೆಂಬಲಿಸಿ ಎಂದಲ್ಲ. ಸಂಘಟಿತ ಹೋರಾಟ ಬಹಳ ಅಗತ್ಯ. ರೈತರು, ದಲಿತರು ಅಲ್ಪಸಂಖ್ಯಾತರು, ಮಹಿಳೆಯರು ಈ ನೀತಿಗೆಟ್ಟ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕು” ಎಂದು ಅವರು ಹೇಳಿದರು. ಕಾಂಗ್ರೆಸ್ ಯಾವ ಮುಖ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...