Homeಕರ್ನಾಟಕಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ

‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶವನ್ನು ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್, ನೈಸ್ ಭೂ ಸಂತ್ರಸ್ತ ರೈತ ಹನುಮಂತಪ್ಪ ಅವರು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಚಾಮರಸಮಾಲೀ ಪಾಟೀಲ್ ಅವರು, “ಚುನಾವಣೆ ಪೂರ್ವದಲ್ಲಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತುಬಿಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

View this post on Instagram

 

A post shared by Naanu Gauri (@naanu_gauri)

“ಸಿದ್ದರಾಮಯ್ಯ ಕೂಡಾ ಈ ಹಿಂದೆ ಬಿಜೆಪಿಯ ಬೊಮ್ಮಾಯಿ ಸರ್ಕಾರದ ವಿರುದ್ಧದ ನಮ್ಮ ಹೋರಾಟಗಳಿಗೆ ಬಂದು ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರೈತ ವಿರೋಧಿ ನೀತಿಯನ್ನು ವಾಪಾಸು ಪಡೆಯುತ್ತೇವೆ ಎಂದಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇನ್ನೂ ವಾಪಾಸು ಪಡೆದಿಲ್ಲ. ಜಾನುವಾರು ಕಾಯ್ದೆ, ವಿದ್ಯುತ್ ಕಾಯ್ದೆಯ ವಿರುದ್ಧ ಮಾತನಾಡಿದ್ದರು. ಆದರೆ ಅವರಿನ್ನೂ ಅದನ್ನು ಮಾಡಿಲ್ಲ” ಎಂದು ಹೇಳಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು, ಈ ಬಗ್ಗೆ ನಾವು ಅವರಿಗೆ ಲಿಖಿತ ಮನವಿ ಕೂಡಾ ಮಾಡಿದ್ದೇವೆ. ಆದರೆ ಅವರು ಏನೂ ಕ್ರಮ ಕೈಗೊಂಡಿಲ್ಲ. ಅವರು ಬಿಜೆಪಿ ಸಿಎಂ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದರು. ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ.” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಷ್ಟೇ ಭ್ರಷ್ಟಾಚಾರ ಕರ್ನಾಟಕದಲ್ಲಿ ಬೆಳೆಯುತ್ತಿದೆ. ರಾಜ್ಯದ ಹಲವು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದೆ. ಅನುದಾನ ನೀಡಲ್ಲ ಎಂದು ಕೇಂದ್ರದ ವಿರುದ್ಧ ಹೋರಾಡಿ ಮೂರು ಸಾವಿರ ಅನುದಾನ ಬಿಡುಗಡೆ ಆಯಿತು. ಆದರೆ ಅದನ್ನು ರಾಜ್ಯ ಸರ್ಕಾರ ಅದನ್ನು ಸರಿಯಾಗಿ ರೈತರಿಗೆ ಹಂಚಿಲ್ಲ” ಎಂದು ಹೇಳಿದರು.

ಜನವರಿಯಲ್ಲಿ ಕಟಾವಾದ ಜೋಳಕ್ಕೆ ಎಪ್ರಿಲ್‌ನಲ್ಲಿ ಖರೀದಿ ಕೇಂದ್ರ ತೆರೆದಿದೆ. ಈಗ ನುಸಿ ಬಂದಿದೆ ಎಂದು ಸಬೂಬು ಹೇಳುತ್ತಿದ್ದಾರೆ.‌ಇದಕ್ಕೆ ಕಾರಣ ಯಾರು? ತಡವಾಗಿ ಖರೀದಿ ಕೇಂದ್ರ ತೆರೆದಿದ್ದು ರೈತರ ತಪ್ಪೆ? ಎಂದು ಕೇಳಿದ ಅವರು, “ತುಂಗಾ ಭದ್ರಾ ಗೇಟ್ ಹಾಳಾಗಿದೆ, ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಯಾವುದೇ ಒಂದು ಗೇಟ್ ಅನ್ನೂ ಬಿಚ್ಚಿಲ್ಲ” ಎಂದು ಹೇಳಿದರು.

“ಈ ಸರ್ಕಾರ ರೈತರಿಗೆ ಹಲವಾರು ಭರವಸೆ ನೀಡಿದರೂ ಈವರೆಗೆ ಯಾವುದೇ ಭರವಸೆ ಈಡೇರಿಲ್ಲ. ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಿದ್ದು ನಿಜವೇ ಆದರೂ, ಅದರ ಅರ್ಥ ಕಾಂಗ್ರೆಸ್ ಬೆಂಬಲಿಸಿ ಎಂದಲ್ಲ. ಸಂಘಟಿತ ಹೋರಾಟ ಬಹಳ ಅಗತ್ಯ. ರೈತರು, ದಲಿತರು ಅಲ್ಪಸಂಖ್ಯಾತರು, ಮಹಿಳೆಯರು ಈ ನೀತಿಗೆಟ್ಟ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕು” ಎಂದು ಅವರು ಹೇಳಿದರು. ಕಾಂಗ್ರೆಸ್ ಯಾವ ಮುಖ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...