Homeಕರ್ನಾಟಕಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ

‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶವನ್ನು ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್, ನೈಸ್ ಭೂ ಸಂತ್ರಸ್ತ ರೈತ ಹನುಮಂತಪ್ಪ ಅವರು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಚಾಮರಸಮಾಲೀ ಪಾಟೀಲ್ ಅವರು, “ಚುನಾವಣೆ ಪೂರ್ವದಲ್ಲಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತುಬಿಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

View this post on Instagram

 

A post shared by Naanu Gauri (@naanu_gauri)

“ಸಿದ್ದರಾಮಯ್ಯ ಕೂಡಾ ಈ ಹಿಂದೆ ಬಿಜೆಪಿಯ ಬೊಮ್ಮಾಯಿ ಸರ್ಕಾರದ ವಿರುದ್ಧದ ನಮ್ಮ ಹೋರಾಟಗಳಿಗೆ ಬಂದು ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರೈತ ವಿರೋಧಿ ನೀತಿಯನ್ನು ವಾಪಾಸು ಪಡೆಯುತ್ತೇವೆ ಎಂದಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇನ್ನೂ ವಾಪಾಸು ಪಡೆದಿಲ್ಲ. ಜಾನುವಾರು ಕಾಯ್ದೆ, ವಿದ್ಯುತ್ ಕಾಯ್ದೆಯ ವಿರುದ್ಧ ಮಾತನಾಡಿದ್ದರು. ಆದರೆ ಅವರಿನ್ನೂ ಅದನ್ನು ಮಾಡಿಲ್ಲ” ಎಂದು ಹೇಳಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು, ಈ ಬಗ್ಗೆ ನಾವು ಅವರಿಗೆ ಲಿಖಿತ ಮನವಿ ಕೂಡಾ ಮಾಡಿದ್ದೇವೆ. ಆದರೆ ಅವರು ಏನೂ ಕ್ರಮ ಕೈಗೊಂಡಿಲ್ಲ. ಅವರು ಬಿಜೆಪಿ ಸಿಎಂ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದರು. ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ.” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಷ್ಟೇ ಭ್ರಷ್ಟಾಚಾರ ಕರ್ನಾಟಕದಲ್ಲಿ ಬೆಳೆಯುತ್ತಿದೆ. ರಾಜ್ಯದ ಹಲವು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದೆ. ಅನುದಾನ ನೀಡಲ್ಲ ಎಂದು ಕೇಂದ್ರದ ವಿರುದ್ಧ ಹೋರಾಡಿ ಮೂರು ಸಾವಿರ ಅನುದಾನ ಬಿಡುಗಡೆ ಆಯಿತು. ಆದರೆ ಅದನ್ನು ರಾಜ್ಯ ಸರ್ಕಾರ ಅದನ್ನು ಸರಿಯಾಗಿ ರೈತರಿಗೆ ಹಂಚಿಲ್ಲ” ಎಂದು ಹೇಳಿದರು.

ಜನವರಿಯಲ್ಲಿ ಕಟಾವಾದ ಜೋಳಕ್ಕೆ ಎಪ್ರಿಲ್‌ನಲ್ಲಿ ಖರೀದಿ ಕೇಂದ್ರ ತೆರೆದಿದೆ. ಈಗ ನುಸಿ ಬಂದಿದೆ ಎಂದು ಸಬೂಬು ಹೇಳುತ್ತಿದ್ದಾರೆ.‌ಇದಕ್ಕೆ ಕಾರಣ ಯಾರು? ತಡವಾಗಿ ಖರೀದಿ ಕೇಂದ್ರ ತೆರೆದಿದ್ದು ರೈತರ ತಪ್ಪೆ? ಎಂದು ಕೇಳಿದ ಅವರು, “ತುಂಗಾ ಭದ್ರಾ ಗೇಟ್ ಹಾಳಾಗಿದೆ, ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಯಾವುದೇ ಒಂದು ಗೇಟ್ ಅನ್ನೂ ಬಿಚ್ಚಿಲ್ಲ” ಎಂದು ಹೇಳಿದರು.

“ಈ ಸರ್ಕಾರ ರೈತರಿಗೆ ಹಲವಾರು ಭರವಸೆ ನೀಡಿದರೂ ಈವರೆಗೆ ಯಾವುದೇ ಭರವಸೆ ಈಡೇರಿಲ್ಲ. ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಿದ್ದು ನಿಜವೇ ಆದರೂ, ಅದರ ಅರ್ಥ ಕಾಂಗ್ರೆಸ್ ಬೆಂಬಲಿಸಿ ಎಂದಲ್ಲ. ಸಂಘಟಿತ ಹೋರಾಟ ಬಹಳ ಅಗತ್ಯ. ರೈತರು, ದಲಿತರು ಅಲ್ಪಸಂಖ್ಯಾತರು, ಮಹಿಳೆಯರು ಈ ನೀತಿಗೆಟ್ಟ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕು” ಎಂದು ಅವರು ಹೇಳಿದರು. ಕಾಂಗ್ರೆಸ್ ಯಾವ ಮುಖ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...