Homeಕರ್ನಾಟಕಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಈ ಹಿಂದೆ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದ್ದರು, ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಮಂಗಳವಾರ ಪ್ರಶ್ನಿಸಿದ್ದಾರೆ. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಯಾವ ಮುಖ

‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶವನ್ನು ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್, ನೈಸ್ ಭೂ ಸಂತ್ರಸ್ತ ರೈತ ಹನುಮಂತಪ್ಪ ಅವರು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಚಾಮರಸಮಾಲೀ ಪಾಟೀಲ್ ಅವರು, “ಚುನಾವಣೆ ಪೂರ್ವದಲ್ಲಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತುಬಿಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

View this post on Instagram

 

A post shared by Naanu Gauri (@naanu_gauri)

“ಸಿದ್ದರಾಮಯ್ಯ ಕೂಡಾ ಈ ಹಿಂದೆ ಬಿಜೆಪಿಯ ಬೊಮ್ಮಾಯಿ ಸರ್ಕಾರದ ವಿರುದ್ಧದ ನಮ್ಮ ಹೋರಾಟಗಳಿಗೆ ಬಂದು ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರೈತ ವಿರೋಧಿ ನೀತಿಯನ್ನು ವಾಪಾಸು ಪಡೆಯುತ್ತೇವೆ ಎಂದಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇನ್ನೂ ವಾಪಾಸು ಪಡೆದಿಲ್ಲ. ಜಾನುವಾರು ಕಾಯ್ದೆ, ವಿದ್ಯುತ್ ಕಾಯ್ದೆಯ ವಿರುದ್ಧ ಮಾತನಾಡಿದ್ದರು. ಆದರೆ ಅವರಿನ್ನೂ ಅದನ್ನು ಮಾಡಿಲ್ಲ” ಎಂದು ಹೇಳಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು, ಈ ಬಗ್ಗೆ ನಾವು ಅವರಿಗೆ ಲಿಖಿತ ಮನವಿ ಕೂಡಾ ಮಾಡಿದ್ದೇವೆ. ಆದರೆ ಅವರು ಏನೂ ಕ್ರಮ ಕೈಗೊಂಡಿಲ್ಲ. ಅವರು ಬಿಜೆಪಿ ಸಿಎಂ ಬೊಮ್ಮಾಯಿ ವಿರುದ್ಧ ಪೇ ಸಿಎಂ ಚಳವಳಿ ಮಾಡಿದರು. ಆದರೆ ಈಗಲೂ ಭ್ರಷ್ಟಾಚಾರ ನಿಂತಿಲ್ಲ. ಹಾಗಾದರೆ ಇವರು ಯಾವ ಮುಖ ಇಟ್ಟುಕೊಂಡು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ.” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿಯಷ್ಟೇ ಭ್ರಷ್ಟಾಚಾರ ಕರ್ನಾಟಕದಲ್ಲಿ ಬೆಳೆಯುತ್ತಿದೆ. ರಾಜ್ಯದ ಹಲವು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದೆ. ಅನುದಾನ ನೀಡಲ್ಲ ಎಂದು ಕೇಂದ್ರದ ವಿರುದ್ಧ ಹೋರಾಡಿ ಮೂರು ಸಾವಿರ ಅನುದಾನ ಬಿಡುಗಡೆ ಆಯಿತು. ಆದರೆ ಅದನ್ನು ರಾಜ್ಯ ಸರ್ಕಾರ ಅದನ್ನು ಸರಿಯಾಗಿ ರೈತರಿಗೆ ಹಂಚಿಲ್ಲ” ಎಂದು ಹೇಳಿದರು.

ಜನವರಿಯಲ್ಲಿ ಕಟಾವಾದ ಜೋಳಕ್ಕೆ ಎಪ್ರಿಲ್‌ನಲ್ಲಿ ಖರೀದಿ ಕೇಂದ್ರ ತೆರೆದಿದೆ. ಈಗ ನುಸಿ ಬಂದಿದೆ ಎಂದು ಸಬೂಬು ಹೇಳುತ್ತಿದ್ದಾರೆ.‌ಇದಕ್ಕೆ ಕಾರಣ ಯಾರು? ತಡವಾಗಿ ಖರೀದಿ ಕೇಂದ್ರ ತೆರೆದಿದ್ದು ರೈತರ ತಪ್ಪೆ? ಎಂದು ಕೇಳಿದ ಅವರು, “ತುಂಗಾ ಭದ್ರಾ ಗೇಟ್ ಹಾಳಾಗಿದೆ, ಅದನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದರು, ಆದರೆ ಇದುವರೆಗೂ ಯಾವುದೇ ಒಂದು ಗೇಟ್ ಅನ್ನೂ ಬಿಚ್ಚಿಲ್ಲ” ಎಂದು ಹೇಳಿದರು.

“ಈ ಸರ್ಕಾರ ರೈತರಿಗೆ ಹಲವಾರು ಭರವಸೆ ನೀಡಿದರೂ ಈವರೆಗೆ ಯಾವುದೇ ಭರವಸೆ ಈಡೇರಿಲ್ಲ. ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಿದ್ದು ನಿಜವೇ ಆದರೂ, ಅದರ ಅರ್ಥ ಕಾಂಗ್ರೆಸ್ ಬೆಂಬಲಿಸಿ ಎಂದಲ್ಲ. ಸಂಘಟಿತ ಹೋರಾಟ ಬಹಳ ಅಗತ್ಯ. ರೈತರು, ದಲಿತರು ಅಲ್ಪಸಂಖ್ಯಾತರು, ಮಹಿಳೆಯರು ಈ ನೀತಿಗೆಟ್ಟ ಸರ್ಕಾರದ ವಿರುದ್ಧ ಸೆಟೆದು ನಿಲ್ಲಬೇಕು” ಎಂದು ಅವರು ಹೇಳಿದರು. ಕಾಂಗ್ರೆಸ್ ಯಾವ ಮುಖ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

‘ಇಂದಿರಾ ಸೌರ ಗಿರಿ ಜಲ ವಿಕಾಸಂ ಯೋಜನೆ’ಗೆ ತೆಲಂಗಾಣ ಮುಖ್ಯಮಂತ್ರಿಯಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...