Homeಮುಖಪುಟಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್...

ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

2003 ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆಲವು ಜನಪರ ಘೋಷಣೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಜನಪರ ಘೋಷಣೆಗೆ ಮಾರಕವಾಗಿ ಸ್ಪಂದಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಪಚಂಡ ಬಹುಮದೊಂದಿಗೆ ಗೆಲ್ಲಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ದಿನವೇ ಅನುಷ್ಠಾನಗೊಳಿಸಲು ಸೂಕ್ತ ಆದೇಶವನ್ನು ಹೊರಡಿಸಲಾಗಿದೆ. ಗ್ಯಾರೆಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ನ್ನು ಉಚಿತವಾಗಿ ನೀಡುವುದು. ಆದರೆ ಈ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯಾತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ವಿದ್ಯುತ್‌ ನಿಗಮಗಳಲ್ಲಿ ಏಪ್ರಿಲ್ 2023 ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್‌ ದರವನ್ನು ಹೆಣ್ಣಿಸಲಾಗಿದೆ. ಇದು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಹೆಚ್ಚಾಗಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್‌ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ಬೆಲೆ ಏರಿಸಲು ನಿಗಮಗಳು 30.11.2022 ರಲ್ಲಿ ಮಂಡಳಿಗಳಿಗೆ ಪ್ರಸ್ತಾವನೆಯನ್ನು ನಿಲ್ಲಿಸಿದ್ದು, ಬೆಲೆ ಏರಿಸಿ ಆದೇಶವನ್ನು ಮೇ 2023 ಅಲ್ಲಿ ಏಪ್ರಿಲ್‌ 2003 ಅಂದ ಪೂರ್ವಾನ್ವಯವಾಗುವಂತೆ ನೀಡಲಾಗಿದೆ. ಆದರೆ ಜನ ಸಾಮಾನ್ಯರು ಬೆಲೆಯನ್ನು ಪ್ರಸ್ತುತ ಸರ್ಕಾರ ಹೆಚ್ಚಿಸಿರುವುದಾಗಿ ತಿಳಿದುಕೊಂಡಿದ್ದಾರೆ. ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಲು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತನ್ವೀರ್ ಸೇಠ್ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...