Homeಮುಖಪುಟಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್...

ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

2003 ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆಲವು ಜನಪರ ಘೋಷಣೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಜನಪರ ಘೋಷಣೆಗೆ ಮಾರಕವಾಗಿ ಸ್ಪಂದಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಪಚಂಡ ಬಹುಮದೊಂದಿಗೆ ಗೆಲ್ಲಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ದಿನವೇ ಅನುಷ್ಠಾನಗೊಳಿಸಲು ಸೂಕ್ತ ಆದೇಶವನ್ನು ಹೊರಡಿಸಲಾಗಿದೆ. ಗ್ಯಾರೆಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ನ್ನು ಉಚಿತವಾಗಿ ನೀಡುವುದು. ಆದರೆ ಈ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯಾತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ವಿದ್ಯುತ್‌ ನಿಗಮಗಳಲ್ಲಿ ಏಪ್ರಿಲ್ 2023 ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್‌ ದರವನ್ನು ಹೆಣ್ಣಿಸಲಾಗಿದೆ. ಇದು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಹೆಚ್ಚಾಗಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್‌ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ಬೆಲೆ ಏರಿಸಲು ನಿಗಮಗಳು 30.11.2022 ರಲ್ಲಿ ಮಂಡಳಿಗಳಿಗೆ ಪ್ರಸ್ತಾವನೆಯನ್ನು ನಿಲ್ಲಿಸಿದ್ದು, ಬೆಲೆ ಏರಿಸಿ ಆದೇಶವನ್ನು ಮೇ 2023 ಅಲ್ಲಿ ಏಪ್ರಿಲ್‌ 2003 ಅಂದ ಪೂರ್ವಾನ್ವಯವಾಗುವಂತೆ ನೀಡಲಾಗಿದೆ. ಆದರೆ ಜನ ಸಾಮಾನ್ಯರು ಬೆಲೆಯನ್ನು ಪ್ರಸ್ತುತ ಸರ್ಕಾರ ಹೆಚ್ಚಿಸಿರುವುದಾಗಿ ತಿಳಿದುಕೊಂಡಿದ್ದಾರೆ. ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಲು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತನ್ವೀರ್ ಸೇಠ್ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...