HomeUncategorizedಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

- Advertisement -
- Advertisement -

ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರ್ಕಾರ ಇದೀಗ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚಲು ಆದೇಶ ನೀಡಿದೆ. ಈ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿರುವ ಅವರು, “ಭದ್ರಾವತಿಯಲ್ಲಿರುವ ವಿಐಎಸ್ಎಲ್ ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ. 1996 ರಲ್ಲಿ ನಾನು ಪ್ರಧಾನ ಮಂತ್ರಿಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ ಘಟಕಗಳನ್ನು ಉಳಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಜ.22ರಂದು ದೇವೆಗೌಡರು, ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ “ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ, ತನ್ನದೇಯಾದ ಇತಿಹಾಸ ಹೊಂದಿರುವ ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಮುಚ್ಚುವ ಬದಲು ಪುನಶ್ಚೇತನಗೊಳಿಸಲು ಉಕ್ಕು ಸಚಿವಾಲಯ ಹಾಗೂ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಒತ್ತಾಯಿಸಿದ್ದಾರೆ.

“ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಅದನ್ನು ದೂರದೃಷ್ಟಿಯುಳ್ಳ ಇಂಜಿನಿಯರ್ ಮತ್ತು ಭಾರತರತ್ನ ಎಂ ವಿಶ್ವೇಶ್ವರಯ್ಯ ಅವರು 1918ರಲ್ಲಿ ಸ್ಥಾಪಿಸಿದ್ದರು. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇದನ್ನು ಭಾರತೀಯ ಉಕ್ಕು ಪ್ರಾಧಿಕಾರದ ವ್ಯಾಪ್ತಿಗೆ ತಂದು ₹650 ಕೋಟಿ ವೆಚ್ಚದಲ್ಲಿ ಕಾರ್ಖಾನೆಯನ್ನು ಆಧುನೀಕರಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಅದು ಸಾಕಾರಗೊಳ್ಳಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“2016ರಲ್ಲಿ ನೀತಿ ಆಯೋಗವು ಹೂಡಿಕೆ ಹಿಂತೆಗೆತಕ್ಕೆ ಶಿಫಾರಸು ಮಾಡಿದರೂ ಫಲಕಾರಿಯಾಗಲಿಲ್ಲ. ನಂತರ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತಾದರೂ ಯಾವುದೇ ಖಾಸಗಿ ಹೂಡಿಕೆದಾರರು ಕಾರ್ಖಾನೆ ಕೊಳ್ಳಲು ಒಲವು ತೋರಲಿಲ್ಲ. ಹಾಗಾಗಿ ಕಾರ್ಖಾನೆ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 20,000 ಕುಟುಂಬಗಳ ಬದುಕು ಕಾರ್ಖಾನೆಯನ್ನೇ ಅವಲಂಬಿಸಿರುವುದರಿಂದ ಅದನ್ನು ಮುಚ್ಚುವ ನಿರ್ಧಾರ ಸರಿಯಲ್ಲ. ಕಾರ್ಮಿಕರ ಜೀವನ ಅತಂತ್ರವಾಗುವುದರಿಂದ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಅತ್ಯುತ್ತಮ ಗುಣಮಟ್ಟದ ಉಕ್ಕು ತಯಾರಿಸುವ ಸಾಮರ್ಥ್ಯವನ್ನು ವಿಐಎಸ್‌ಎಲ್‌ ಹೊಂದಿದ್ದು, ಹಿಂದೆ ಅಣುಶಕ್ತಿ ಕೇಂದ್ರಗಳು, ರೈಲ್ವೆ ಇಲಾಖೆ, ಆಟೋಮೊಬೈಲ್‌ ಕ್ಷೇತ್ರಕ್ಕೆ ಗುಣಮಟ್ಟದ ಉಕ್ಕಿನ ಉತ್ಪನ್ನಗಳನ್ನು ಒದಗಿಸಿದೆ. ಈಗ ಆತ್ಮನಿರ್ಭರ ಭಾರತ ಯೋಜನೆ ಭಾಗವಾಗಿ ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್‌ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಹಾಕಾರಿಯಾಗಲಿದೆ. ಹೀಗಾಗಿ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವ ಕೈ ಬಿಡಬೇಕು, ಬದಲಿಗೆ ಅದನ್ನು ಪುನಶ್ಚೇತನಗೊಳಿಸಲು ಮುಂದಾಗಬೇಕು” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....