HomeUncategorizedಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

- Advertisement -
- Advertisement -

ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರ್ಕಾರ ಇದೀಗ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚಲು ಆದೇಶ ನೀಡಿದೆ. ಈ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿರುವ ಅವರು, “ಭದ್ರಾವತಿಯಲ್ಲಿರುವ ವಿಐಎಸ್ಎಲ್ ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ. 1996 ರಲ್ಲಿ ನಾನು ಪ್ರಧಾನ ಮಂತ್ರಿಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ ಘಟಕಗಳನ್ನು ಉಳಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಜ.22ರಂದು ದೇವೆಗೌಡರು, ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ “ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ, ತನ್ನದೇಯಾದ ಇತಿಹಾಸ ಹೊಂದಿರುವ ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಮುಚ್ಚುವ ಬದಲು ಪುನಶ್ಚೇತನಗೊಳಿಸಲು ಉಕ್ಕು ಸಚಿವಾಲಯ ಹಾಗೂ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಒತ್ತಾಯಿಸಿದ್ದಾರೆ.

“ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಅದನ್ನು ದೂರದೃಷ್ಟಿಯುಳ್ಳ ಇಂಜಿನಿಯರ್ ಮತ್ತು ಭಾರತರತ್ನ ಎಂ ವಿಶ್ವೇಶ್ವರಯ್ಯ ಅವರು 1918ರಲ್ಲಿ ಸ್ಥಾಪಿಸಿದ್ದರು. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇದನ್ನು ಭಾರತೀಯ ಉಕ್ಕು ಪ್ರಾಧಿಕಾರದ ವ್ಯಾಪ್ತಿಗೆ ತಂದು ₹650 ಕೋಟಿ ವೆಚ್ಚದಲ್ಲಿ ಕಾರ್ಖಾನೆಯನ್ನು ಆಧುನೀಕರಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಅದು ಸಾಕಾರಗೊಳ್ಳಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“2016ರಲ್ಲಿ ನೀತಿ ಆಯೋಗವು ಹೂಡಿಕೆ ಹಿಂತೆಗೆತಕ್ಕೆ ಶಿಫಾರಸು ಮಾಡಿದರೂ ಫಲಕಾರಿಯಾಗಲಿಲ್ಲ. ನಂತರ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತಾದರೂ ಯಾವುದೇ ಖಾಸಗಿ ಹೂಡಿಕೆದಾರರು ಕಾರ್ಖಾನೆ ಕೊಳ್ಳಲು ಒಲವು ತೋರಲಿಲ್ಲ. ಹಾಗಾಗಿ ಕಾರ್ಖಾನೆ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 20,000 ಕುಟುಂಬಗಳ ಬದುಕು ಕಾರ್ಖಾನೆಯನ್ನೇ ಅವಲಂಬಿಸಿರುವುದರಿಂದ ಅದನ್ನು ಮುಚ್ಚುವ ನಿರ್ಧಾರ ಸರಿಯಲ್ಲ. ಕಾರ್ಮಿಕರ ಜೀವನ ಅತಂತ್ರವಾಗುವುದರಿಂದ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಅತ್ಯುತ್ತಮ ಗುಣಮಟ್ಟದ ಉಕ್ಕು ತಯಾರಿಸುವ ಸಾಮರ್ಥ್ಯವನ್ನು ವಿಐಎಸ್‌ಎಲ್‌ ಹೊಂದಿದ್ದು, ಹಿಂದೆ ಅಣುಶಕ್ತಿ ಕೇಂದ್ರಗಳು, ರೈಲ್ವೆ ಇಲಾಖೆ, ಆಟೋಮೊಬೈಲ್‌ ಕ್ಷೇತ್ರಕ್ಕೆ ಗುಣಮಟ್ಟದ ಉಕ್ಕಿನ ಉತ್ಪನ್ನಗಳನ್ನು ಒದಗಿಸಿದೆ. ಈಗ ಆತ್ಮನಿರ್ಭರ ಭಾರತ ಯೋಜನೆ ಭಾಗವಾಗಿ ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್‌ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಹಾಕಾರಿಯಾಗಲಿದೆ. ಹೀಗಾಗಿ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವ ಕೈ ಬಿಡಬೇಕು, ಬದಲಿಗೆ ಅದನ್ನು ಪುನಶ್ಚೇತನಗೊಳಿಸಲು ಮುಂದಾಗಬೇಕು” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...