HomeUncategorizedಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

- Advertisement -
- Advertisement -

ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರ್ಕಾರ ಇದೀಗ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚಲು ಆದೇಶ ನೀಡಿದೆ. ಈ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿರುವ ಅವರು, “ಭದ್ರಾವತಿಯಲ್ಲಿರುವ ವಿಐಎಸ್ಎಲ್ ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ. 1996 ರಲ್ಲಿ ನಾನು ಪ್ರಧಾನ ಮಂತ್ರಿಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ ಘಟಕಗಳನ್ನು ಉಳಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಜ.22ರಂದು ದೇವೆಗೌಡರು, ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ “ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ, ತನ್ನದೇಯಾದ ಇತಿಹಾಸ ಹೊಂದಿರುವ ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಮುಚ್ಚುವ ಬದಲು ಪುನಶ್ಚೇತನಗೊಳಿಸಲು ಉಕ್ಕು ಸಚಿವಾಲಯ ಹಾಗೂ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಒತ್ತಾಯಿಸಿದ್ದಾರೆ.

“ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಅದನ್ನು ದೂರದೃಷ್ಟಿಯುಳ್ಳ ಇಂಜಿನಿಯರ್ ಮತ್ತು ಭಾರತರತ್ನ ಎಂ ವಿಶ್ವೇಶ್ವರಯ್ಯ ಅವರು 1918ರಲ್ಲಿ ಸ್ಥಾಪಿಸಿದ್ದರು. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇದನ್ನು ಭಾರತೀಯ ಉಕ್ಕು ಪ್ರಾಧಿಕಾರದ ವ್ಯಾಪ್ತಿಗೆ ತಂದು ₹650 ಕೋಟಿ ವೆಚ್ಚದಲ್ಲಿ ಕಾರ್ಖಾನೆಯನ್ನು ಆಧುನೀಕರಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಅದು ಸಾಕಾರಗೊಳ್ಳಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“2016ರಲ್ಲಿ ನೀತಿ ಆಯೋಗವು ಹೂಡಿಕೆ ಹಿಂತೆಗೆತಕ್ಕೆ ಶಿಫಾರಸು ಮಾಡಿದರೂ ಫಲಕಾರಿಯಾಗಲಿಲ್ಲ. ನಂತರ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತಾದರೂ ಯಾವುದೇ ಖಾಸಗಿ ಹೂಡಿಕೆದಾರರು ಕಾರ್ಖಾನೆ ಕೊಳ್ಳಲು ಒಲವು ತೋರಲಿಲ್ಲ. ಹಾಗಾಗಿ ಕಾರ್ಖಾನೆ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 20,000 ಕುಟುಂಬಗಳ ಬದುಕು ಕಾರ್ಖಾನೆಯನ್ನೇ ಅವಲಂಬಿಸಿರುವುದರಿಂದ ಅದನ್ನು ಮುಚ್ಚುವ ನಿರ್ಧಾರ ಸರಿಯಲ್ಲ. ಕಾರ್ಮಿಕರ ಜೀವನ ಅತಂತ್ರವಾಗುವುದರಿಂದ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಅತ್ಯುತ್ತಮ ಗುಣಮಟ್ಟದ ಉಕ್ಕು ತಯಾರಿಸುವ ಸಾಮರ್ಥ್ಯವನ್ನು ವಿಐಎಸ್‌ಎಲ್‌ ಹೊಂದಿದ್ದು, ಹಿಂದೆ ಅಣುಶಕ್ತಿ ಕೇಂದ್ರಗಳು, ರೈಲ್ವೆ ಇಲಾಖೆ, ಆಟೋಮೊಬೈಲ್‌ ಕ್ಷೇತ್ರಕ್ಕೆ ಗುಣಮಟ್ಟದ ಉಕ್ಕಿನ ಉತ್ಪನ್ನಗಳನ್ನು ಒದಗಿಸಿದೆ. ಈಗ ಆತ್ಮನಿರ್ಭರ ಭಾರತ ಯೋಜನೆ ಭಾಗವಾಗಿ ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್‌ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಹಾಕಾರಿಯಾಗಲಿದೆ. ಹೀಗಾಗಿ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವ ಕೈ ಬಿಡಬೇಕು, ಬದಲಿಗೆ ಅದನ್ನು ಪುನಶ್ಚೇತನಗೊಳಿಸಲು ಮುಂದಾಗಬೇಕು” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...