HomeUncategorizedಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

- Advertisement -
- Advertisement -

ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರ್ಕಾರ ಇದೀಗ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚಲು ಆದೇಶ ನೀಡಿದೆ. ಈ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿರುವ ಅವರು, “ಭದ್ರಾವತಿಯಲ್ಲಿರುವ ವಿಐಎಸ್ಎಲ್ ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ. 1996 ರಲ್ಲಿ ನಾನು ಪ್ರಧಾನ ಮಂತ್ರಿಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ ಘಟಕಗಳನ್ನು ಉಳಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಜ.22ರಂದು ದೇವೆಗೌಡರು, ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ “ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ, ತನ್ನದೇಯಾದ ಇತಿಹಾಸ ಹೊಂದಿರುವ ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಮುಚ್ಚುವ ಬದಲು ಪುನಶ್ಚೇತನಗೊಳಿಸಲು ಉಕ್ಕು ಸಚಿವಾಲಯ ಹಾಗೂ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಒತ್ತಾಯಿಸಿದ್ದಾರೆ.

“ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಅದನ್ನು ದೂರದೃಷ್ಟಿಯುಳ್ಳ ಇಂಜಿನಿಯರ್ ಮತ್ತು ಭಾರತರತ್ನ ಎಂ ವಿಶ್ವೇಶ್ವರಯ್ಯ ಅವರು 1918ರಲ್ಲಿ ಸ್ಥಾಪಿಸಿದ್ದರು. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇದನ್ನು ಭಾರತೀಯ ಉಕ್ಕು ಪ್ರಾಧಿಕಾರದ ವ್ಯಾಪ್ತಿಗೆ ತಂದು ₹650 ಕೋಟಿ ವೆಚ್ಚದಲ್ಲಿ ಕಾರ್ಖಾನೆಯನ್ನು ಆಧುನೀಕರಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಅದು ಸಾಕಾರಗೊಳ್ಳಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“2016ರಲ್ಲಿ ನೀತಿ ಆಯೋಗವು ಹೂಡಿಕೆ ಹಿಂತೆಗೆತಕ್ಕೆ ಶಿಫಾರಸು ಮಾಡಿದರೂ ಫಲಕಾರಿಯಾಗಲಿಲ್ಲ. ನಂತರ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತಾದರೂ ಯಾವುದೇ ಖಾಸಗಿ ಹೂಡಿಕೆದಾರರು ಕಾರ್ಖಾನೆ ಕೊಳ್ಳಲು ಒಲವು ತೋರಲಿಲ್ಲ. ಹಾಗಾಗಿ ಕಾರ್ಖಾನೆ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 20,000 ಕುಟುಂಬಗಳ ಬದುಕು ಕಾರ್ಖಾನೆಯನ್ನೇ ಅವಲಂಬಿಸಿರುವುದರಿಂದ ಅದನ್ನು ಮುಚ್ಚುವ ನಿರ್ಧಾರ ಸರಿಯಲ್ಲ. ಕಾರ್ಮಿಕರ ಜೀವನ ಅತಂತ್ರವಾಗುವುದರಿಂದ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಅತ್ಯುತ್ತಮ ಗುಣಮಟ್ಟದ ಉಕ್ಕು ತಯಾರಿಸುವ ಸಾಮರ್ಥ್ಯವನ್ನು ವಿಐಎಸ್‌ಎಲ್‌ ಹೊಂದಿದ್ದು, ಹಿಂದೆ ಅಣುಶಕ್ತಿ ಕೇಂದ್ರಗಳು, ರೈಲ್ವೆ ಇಲಾಖೆ, ಆಟೋಮೊಬೈಲ್‌ ಕ್ಷೇತ್ರಕ್ಕೆ ಗುಣಮಟ್ಟದ ಉಕ್ಕಿನ ಉತ್ಪನ್ನಗಳನ್ನು ಒದಗಿಸಿದೆ. ಈಗ ಆತ್ಮನಿರ್ಭರ ಭಾರತ ಯೋಜನೆ ಭಾಗವಾಗಿ ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್‌ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಹಾಕಾರಿಯಾಗಲಿದೆ. ಹೀಗಾಗಿ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವ ಕೈ ಬಿಡಬೇಕು, ಬದಲಿಗೆ ಅದನ್ನು ಪುನಶ್ಚೇತನಗೊಳಿಸಲು ಮುಂದಾಗಬೇಕು” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...