ಕೇರಳದ ಪ್ರಸ್ತುತ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 11,731 ಕೋಟಿ ರೂ.ಗಳ ಸಾಲವನ್ನು ಪಡೆಯಲು ಕೇರಳಕ್ಕೆ ಅವಕಾಶ ನೀಡುವ ಬಗ್ಗೆ ಪರಿಗಣಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧದ ಪ್ರಕರಣವನ್ನು ಸುಪ್ರೀಂಕೋರ್ಟ್ನಿಂದ ಹಿಂಪಡೆದರೆ ಮಾತ್ರ ಈ ಬಗ್ಗೆ ಗಮನಹರಿಸಲಾಗುವುದು ಎಂದು ಕೇಂದ್ರ ಸರಕಾರ ಹೇಳಿದೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.
ಲೈವ್ ಲಾ ವರದಿಯ ಪ್ರಕಾರ, ಕೇರಳ ಸರ್ಕಾರವು ಸೋಮವಾರ, ಫೆಬ್ರವರಿ 19ರಂದು ಸುಪ್ರೀಂಕೋರ್ಟ್ಗೆ ರಾಜ್ಯದ ಪರಿಸ್ಥಿತಿ ಬಗ್ಗೆ ಗಮನಕ್ಕೆ ತಂದಿದೆ. ಕೇಂದ್ರ ಸರಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದು, ರಾಜ್ಯವು ಸುಮಾರು 17,000 ಕೋಟಿ ರೂ.ಕೇಂದ್ರದಿಂದ ಅನುದಾನ ಪಡೆಯಯಲು ಅರ್ಹವಾಗಿದೆ ಎಂದು ಹೇಳಿಕೊಂಡಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ, ಕೇರಳ ಸರ್ಕಾರವು, ರಾಜ್ಯಕ್ಕೆ ಹೆಚ್ಚುವರಿ ಸಾಲ ಮಿತಿಗೊಳಿಸುವ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು. ಕೇಂದ್ರ ಸರ್ಕಾರದ ಕ್ರಮವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ರಾಜ್ಯದ ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಕೇರಳಕ್ಕೆ 47,762.58 ಕೋಟಿ ರೂ.ಗಳ ಸಾಲದ ಮಿತಿಯನ್ನು ನಿಗದಿಪಡಿಸಿದೆ. ಈ ಪೈಕಿ 29,136.71 ಕೋಟಿ ರೂ.ಗಳನ್ನು ಮುಕ್ತ ಮಾರುಕಟ್ಟೆ ಸಾಲ ಮತ್ತು ಉಳಿದವು ಇತರ ಮೂಲಗಳಿಂದ ಪಡೆದಿದೆ. ಲೈವ್ ಕಾನೂನಿನ ಪ್ರಕಾರ, ಹಣಕಾಸಿನ ಜವಾಬ್ದಾರಿಗಳನ್ನು ಪೂರೈಸಲು ಹೆಚ್ಚುವರಿ 26,000 ಕೋಟಿ ರೂ. ಸಾಲವನ್ನು ಅನುಮತಿಸಲು ರಾಜ್ಯವು ಕೇಂದ್ರ ಸರಕಾರಕ್ಕೆ ವಿನಂತಿಸಿತ್ತು.
ಈ ಬಗ್ಗೆ ಕೇರಳ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರತಿನಿಧಿಗಳು ಫೆಬ್ರವರಿ 15ರಂದು ಚರ್ಚಿಸಲು ಸಭೆ ನಡೆಸಿದ್ದಾರೆ. ಕೇರಳ ಸರ್ಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಪ್ರಕಾರ, ಚರ್ಚೆ ಯಶಸ್ವಿಯಾಗಲಿಲ್ಲ. ಅವರು ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ.
ಫೆಬ್ರುವರಿ 8ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳ ಸರ್ಕಾರವು ದಕ್ಷಿಣದ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹೇರಿರುವ ಆರ್ಥಿಕ ನಿರ್ಬಂಧಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಗಿತ್ತು. ಕೇಂದ್ರ ಸರಕಾರವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಪ್ರತಿಭಟನೆಗೆ ಹಲವು ರಾಜಕೀಯ ಪಕ್ಷಗಳು ಬೆಂಬಲವನ್ನು ವ್ಯಕ್ತಪಡಿಸಿದ್ದವು.
ಇದನ್ನು ಓದಿ: ಸಿಖ್ ಪೊಲೀಸ್ ಅಧಿಕಾರಿಗೆ “ಖಲಿಸ್ತಾನಿ” ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ