Homeಮುಖಪುಟ‘ಗುಜರಾತಿಗಳ ಕುರಿತು ಹೇಳಿಕೆ ಹಿಂತೆಗೆದುಕೊಳ್ಳಿ…’; ತೇಜಸ್ವಿ ಯಾದವ್‌ಗೆ ಸುಪ್ರೀಂ ಸೂಚನೆ

‘ಗುಜರಾತಿಗಳ ಕುರಿತು ಹೇಳಿಕೆ ಹಿಂತೆಗೆದುಕೊಳ್ಳಿ…’; ತೇಜಸ್ವಿ ಯಾದವ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

“ಗುಜರಾತಿಗಳು ಮಾತ್ರ ದರೋಡೆಕೋರರಾಗಲು ಸಾಧ್ಯ” ಎಂಬ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡು ಸರಿಯಾದ ಹೇಳಿಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರಿಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಯಾದವ್ ಅವರ ಹಿಂದಿನ ಅಫಿಡವಿಟ್ ಬಗ್ಗೆ ದೂರುದಾರರು ಆಕ್ಷೇಪಣೆಯನ್ನು ವ್ಯಕ್ತಪಡಿಸಿದ ನಂತರ ಹೊಸ ಹೇಳಿಕೆಯನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಿದರು.

“ಸರಿಯಾದ ಹೇಳಿಕೆಯನ್ನು ಸಲ್ಲಿಸಲು ನಾವು ಅರ್ಜಿದಾರರಿಗೆ ಒಂದು ವಾರದ ಸಮಯವನ್ನು ನೀಡುತ್ತೇವೆ” ಎಂದು ಹೇಳಿದ ಪೀಠವು, ಮುಂದಿನ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ನಿಗದಿಗೊಳಿಸಿದೆ.

ತೇಜಸ್ವಿ ಯಾದವ್ ಅವರು ಜನವರಿ 19 ರಂದು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿ ತಮ್ಮ ಆಪಾದಿತ “ಗುಜರಾತಿ ಕೊಲೆಗಡುಕರು” ಹೇಳಿಕೆಯನ್ನು ಹಿಂತೆಗೆದುಕೊಂಡರು. “ಗುಜರಾತಿಗಳು ಮಾತ್ರ ದರೋಡೆಕೋರರು” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಜ್ಯದ ಹೊರಗಿನ ಸ್ಥಳಕ್ಕೆ ವರ್ಗಾಯಿಸುವಂತೆ ಕೋರಿ ತೇಜಸ್ವಿ ಯಾದವ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಆರ್‌ಜೆಡಿ ನಾಯಕನ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಈ ಹಿಂದೆ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಗೆ ತಡೆ ನೀಡಿತ್ತು. ಅರ್ಜಿ ಸಲ್ಲಿಸಿದ್ದ ಗುಜರಾತ್ ನಿವಾಸಿಗೆ ನೋಟಿಸ್ ಜಾರಿ ಮಾಡಿತ್ತು. ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಆರೋಪದಡಿಯಲ್ಲಿ ದೂರು ದಾಖಲಿಸಲಾಗಿದೆ.

ಗುಜರಾತ್ ನ್ಯಾಯಾಲಯವು ಯಾದವ್ ವಿರುದ್ಧ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ಆಗಸ್ಟ್‌ನಲ್ಲಿ ಪ್ರಾಥಮಿಕ ವಿಚಾರಣೆಯನ್ನು ನಡೆಸಿತು. ಸ್ಥಳೀಯ ಉದ್ಯಮಿ ಮತ್ತು ಕಾರ್ಯಕರ್ತ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಮೇರೆಗೆ ಅವರಿಗೆ ಸಮನ್ಸ್ ನೀಡಲು ಸಾಕಷ್ಟು ಆಧಾರಗಳನ್ನು ಕಂಡುಕೊಂಡಿದೆ.

ದೂರಿನ ಪ್ರಕಾರ, ಯಾದವ್ ಅವರು ಮಾರ್ಚ್ 2023 ರಲ್ಲಿ ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈಗಿನ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಕೊಲೆಗಡುಕರಾಗಬಹುದು ಮತ್ತು ಅವರ ವಂಚನೆಯನ್ನು ಕ್ಷಮಿಸಲಾಗುವುದು” ಎಂದು ಹೇಳಿದ್ದರು. ಎಲ್ಐಸಿ ಅಥವಾ ಬ್ಯಾಂಕ್‌ಗಳಿಗೆ ಸೇರಿದ ಹಣವನ್ನು ತೆಗೆದುಕೊಂಡು ಓಡಿಹೋದರೆ ಯಾರು ಹೊಣೆ? ಎಂದು ಆಗಿನ ಬಿಹಾರ ಉಪಮುಖ್ಯಮಂತ್ರಿ ಹೇಳಿದ್ದರು. ತೇಜಸ್ವಿ ಯಾದವ್ ಅವರ ಹೇಳಿಕೆಯು ಎಲ್ಲಾ ಗುಜರಾತಿಗಳನ್ನು ದೂಷಿಸಿದೆ ಎಂದು ಮೆಹ್ತಾ ಆರೋಪಿಸಿದ್ದಾರೆ.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...