Homeಮುಖಪುಟ‘ಗುಜರಾತಿಗಳ ಕುರಿತು ಹೇಳಿಕೆ ಹಿಂತೆಗೆದುಕೊಳ್ಳಿ…’; ತೇಜಸ್ವಿ ಯಾದವ್‌ಗೆ ಸುಪ್ರೀಂ ಸೂಚನೆ

‘ಗುಜರಾತಿಗಳ ಕುರಿತು ಹೇಳಿಕೆ ಹಿಂತೆಗೆದುಕೊಳ್ಳಿ…’; ತೇಜಸ್ವಿ ಯಾದವ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

“ಗುಜರಾತಿಗಳು ಮಾತ್ರ ದರೋಡೆಕೋರರಾಗಲು ಸಾಧ್ಯ” ಎಂಬ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡು ಸರಿಯಾದ ಹೇಳಿಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರಿಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಯಾದವ್ ಅವರ ಹಿಂದಿನ ಅಫಿಡವಿಟ್ ಬಗ್ಗೆ ದೂರುದಾರರು ಆಕ್ಷೇಪಣೆಯನ್ನು ವ್ಯಕ್ತಪಡಿಸಿದ ನಂತರ ಹೊಸ ಹೇಳಿಕೆಯನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಿದರು.

“ಸರಿಯಾದ ಹೇಳಿಕೆಯನ್ನು ಸಲ್ಲಿಸಲು ನಾವು ಅರ್ಜಿದಾರರಿಗೆ ಒಂದು ವಾರದ ಸಮಯವನ್ನು ನೀಡುತ್ತೇವೆ” ಎಂದು ಹೇಳಿದ ಪೀಠವು, ಮುಂದಿನ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ನಿಗದಿಗೊಳಿಸಿದೆ.

ತೇಜಸ್ವಿ ಯಾದವ್ ಅವರು ಜನವರಿ 19 ರಂದು ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿ ತಮ್ಮ ಆಪಾದಿತ “ಗುಜರಾತಿ ಕೊಲೆಗಡುಕರು” ಹೇಳಿಕೆಯನ್ನು ಹಿಂತೆಗೆದುಕೊಂಡರು. “ಗುಜರಾತಿಗಳು ಮಾತ್ರ ದರೋಡೆಕೋರರು” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಜ್ಯದ ಹೊರಗಿನ ಸ್ಥಳಕ್ಕೆ ವರ್ಗಾಯಿಸುವಂತೆ ಕೋರಿ ತೇಜಸ್ವಿ ಯಾದವ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಆರ್‌ಜೆಡಿ ನಾಯಕನ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಈ ಹಿಂದೆ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಗೆ ತಡೆ ನೀಡಿತ್ತು. ಅರ್ಜಿ ಸಲ್ಲಿಸಿದ್ದ ಗುಜರಾತ್ ನಿವಾಸಿಗೆ ನೋಟಿಸ್ ಜಾರಿ ಮಾಡಿತ್ತು. ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಆರೋಪದಡಿಯಲ್ಲಿ ದೂರು ದಾಖಲಿಸಲಾಗಿದೆ.

ಗುಜರಾತ್ ನ್ಯಾಯಾಲಯವು ಯಾದವ್ ವಿರುದ್ಧ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ಆಗಸ್ಟ್‌ನಲ್ಲಿ ಪ್ರಾಥಮಿಕ ವಿಚಾರಣೆಯನ್ನು ನಡೆಸಿತು. ಸ್ಥಳೀಯ ಉದ್ಯಮಿ ಮತ್ತು ಕಾರ್ಯಕರ್ತ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಮೇರೆಗೆ ಅವರಿಗೆ ಸಮನ್ಸ್ ನೀಡಲು ಸಾಕಷ್ಟು ಆಧಾರಗಳನ್ನು ಕಂಡುಕೊಂಡಿದೆ.

ದೂರಿನ ಪ್ರಕಾರ, ಯಾದವ್ ಅವರು ಮಾರ್ಚ್ 2023 ರಲ್ಲಿ ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈಗಿನ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಕೊಲೆಗಡುಕರಾಗಬಹುದು ಮತ್ತು ಅವರ ವಂಚನೆಯನ್ನು ಕ್ಷಮಿಸಲಾಗುವುದು” ಎಂದು ಹೇಳಿದ್ದರು. ಎಲ್ಐಸಿ ಅಥವಾ ಬ್ಯಾಂಕ್‌ಗಳಿಗೆ ಸೇರಿದ ಹಣವನ್ನು ತೆಗೆದುಕೊಂಡು ಓಡಿಹೋದರೆ ಯಾರು ಹೊಣೆ? ಎಂದು ಆಗಿನ ಬಿಹಾರ ಉಪಮುಖ್ಯಮಂತ್ರಿ ಹೇಳಿದ್ದರು. ತೇಜಸ್ವಿ ಯಾದವ್ ಅವರ ಹೇಳಿಕೆಯು ಎಲ್ಲಾ ಗುಜರಾತಿಗಳನ್ನು ದೂಷಿಸಿದೆ ಎಂದು ಮೆಹ್ತಾ ಆರೋಪಿಸಿದ್ದಾರೆ.

ಇದನ್ನೂ ಓದಿ; ಕೆರಗೋಡು ಧ್ವಜ ವಿವಾದ: ಬಿಜೆಪಿ-ಆರ್‌ಎಸ್‌ಎಸ್‌ ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...