Homeಮುಖಪುಟ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

- Advertisement -
- Advertisement -

₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳು ದಾಳಿ ನಡೆಸಿವೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನೋಟು ಅಮಾನ್ಯೀಕರಣ ಎಂಬುದು ಒಂದು ವಿಫಲ ಯೋಜನೆ ಎಂದು ನವು 2016ರಲ್ಲಿಯೇ ಹೇಳಿದ್ದೆವು. ಈಗ ಅದು ಸಾಬೀತಾಗಿದೆ ಎಂದಿದ್ದಾರೆ.

“500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಆದರೆ 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ಬದಲಿಗೆ 500 ಮತ್ತು 1000 ರೂಪಾಯಿ ನೋಟುಗಳು ಜನಪ್ರಿಯವಾಗಿದ್ದವು ಮತ್ತು ವ್ಯಾಪಕವಾಗಿ ವಿನಿಮಯಗೊಂಡ ಕರೆನ್ಸಿಗಳಾಗಿದ್ದವು. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಅದು ಸರಿ ಎಂದು ಸಾಬೀತುಪಡಿಸಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್‌ಬಿಐ 500 ರೂ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು. ಈಗ ಸರ್ಕಾರ/ಆರ್‌ಬಿಐ 1000 ರೂಪಾಯಿ ನೋಟನ್ನು ಪುನಃ ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ಏಕೆಂದರೆ ನೋಟು ಅಮಾನ್ಯೀಕರಣದ ಬಂಡವಾಳ ಬಯಲಾಗಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿಗೆ ಶಿಕ್ಷಣ ಬೇಕು – ಕೇಜ್ರಿವಾಲ್ ವ್ಯಂಗ್ಯ

ಭ್ರಷ್ಟಾಚಾರ ನಿರ್ಮೂಲನೆ ಮಾಡಲು 2000 ರೂ ನೋಟುಗಳನ್ನು ಪರಿಚಯಿಸಲಾಗಿತ್ತು. ಈಗ ಅವುಗಳನ್ನು ರದ್ದುಪಡಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಅದಕ್ಕೆ ಹೇಳುವುದು ಪ್ರಧಾನಿ ಶಿಕ್ಷಣ ಬೇಕೆಂದು. ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳುತ್ತಾರೆ. ಆದರೆ ಅವರಿಗೆ ಅರ್ಥವಾಗುತ್ತಿಲ್ಲ. ಅದರಿಂದ ಜನರು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಮೊದಲು ಕೆಲಸ – ನಂತರ ಯೋಚನೆ : ಜೈರಾಂ ರಮೇಶ್

ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

“2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು 2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು. ಅಲ್ಲದೇ ಈ ನಿರ್ಧಾರ ತಪ್ಪಾಗಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎದೆಯುಬ್ಬಿಸಿ ಹೇಳಿದ್ದರು. ಆದರೆ ಆ ಯೋಜನೆ ಸಂಪೂರ್ಣ ವಿಫಲವಾಗಿದೆ. ಅಲ್ಲದೇ ಭಾರತದ ಆರ್ಥಿಕತೆ ದೊಡ್ಡ ಹೊಡೆತ ನೀಡಿದೆ. ನೋಟು ಅಮಾನ್ಯೀಕರಣದಿಂದಾಗಿ ಬಡವರು ಬೀದಿಗೆ ಬಿದ್ದಿದ್ದಾರೆ. ನೂರಾರು ಜನರು ಸಾವನಪ್ಪಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರಿಗಳು ನೆಲ ಕಚ್ಚಿದ್ದಾರೆ. ಇಷ್ಟೆಲ್ಲ ಆದ ನಂತರ ಮೋದಿ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...