Homeಮುಖಪುಟ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

- Advertisement -
- Advertisement -

₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳು ದಾಳಿ ನಡೆಸಿವೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನೋಟು ಅಮಾನ್ಯೀಕರಣ ಎಂಬುದು ಒಂದು ವಿಫಲ ಯೋಜನೆ ಎಂದು ನವು 2016ರಲ್ಲಿಯೇ ಹೇಳಿದ್ದೆವು. ಈಗ ಅದು ಸಾಬೀತಾಗಿದೆ ಎಂದಿದ್ದಾರೆ.

“500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಆದರೆ 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ಬದಲಿಗೆ 500 ಮತ್ತು 1000 ರೂಪಾಯಿ ನೋಟುಗಳು ಜನಪ್ರಿಯವಾಗಿದ್ದವು ಮತ್ತು ವ್ಯಾಪಕವಾಗಿ ವಿನಿಮಯಗೊಂಡ ಕರೆನ್ಸಿಗಳಾಗಿದ್ದವು. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಅದು ಸರಿ ಎಂದು ಸಾಬೀತುಪಡಿಸಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್‌ಬಿಐ 500 ರೂ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು. ಈಗ ಸರ್ಕಾರ/ಆರ್‌ಬಿಐ 1000 ರೂಪಾಯಿ ನೋಟನ್ನು ಪುನಃ ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ಏಕೆಂದರೆ ನೋಟು ಅಮಾನ್ಯೀಕರಣದ ಬಂಡವಾಳ ಬಯಲಾಗಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿಗೆ ಶಿಕ್ಷಣ ಬೇಕು – ಕೇಜ್ರಿವಾಲ್ ವ್ಯಂಗ್ಯ

ಭ್ರಷ್ಟಾಚಾರ ನಿರ್ಮೂಲನೆ ಮಾಡಲು 2000 ರೂ ನೋಟುಗಳನ್ನು ಪರಿಚಯಿಸಲಾಗಿತ್ತು. ಈಗ ಅವುಗಳನ್ನು ರದ್ದುಪಡಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಅದಕ್ಕೆ ಹೇಳುವುದು ಪ್ರಧಾನಿ ಶಿಕ್ಷಣ ಬೇಕೆಂದು. ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳುತ್ತಾರೆ. ಆದರೆ ಅವರಿಗೆ ಅರ್ಥವಾಗುತ್ತಿಲ್ಲ. ಅದರಿಂದ ಜನರು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಮೊದಲು ಕೆಲಸ – ನಂತರ ಯೋಚನೆ : ಜೈರಾಂ ರಮೇಶ್

ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

“2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು 2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು. ಅಲ್ಲದೇ ಈ ನಿರ್ಧಾರ ತಪ್ಪಾಗಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎದೆಯುಬ್ಬಿಸಿ ಹೇಳಿದ್ದರು. ಆದರೆ ಆ ಯೋಜನೆ ಸಂಪೂರ್ಣ ವಿಫಲವಾಗಿದೆ. ಅಲ್ಲದೇ ಭಾರತದ ಆರ್ಥಿಕತೆ ದೊಡ್ಡ ಹೊಡೆತ ನೀಡಿದೆ. ನೋಟು ಅಮಾನ್ಯೀಕರಣದಿಂದಾಗಿ ಬಡವರು ಬೀದಿಗೆ ಬಿದ್ದಿದ್ದಾರೆ. ನೂರಾರು ಜನರು ಸಾವನಪ್ಪಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರಿಗಳು ನೆಲ ಕಚ್ಚಿದ್ದಾರೆ. ಇಷ್ಟೆಲ್ಲ ಆದ ನಂತರ ಮೋದಿ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...