Homeಮುಖಪುಟ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

- Advertisement -
- Advertisement -

₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳು ದಾಳಿ ನಡೆಸಿವೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನೋಟು ಅಮಾನ್ಯೀಕರಣ ಎಂಬುದು ಒಂದು ವಿಫಲ ಯೋಜನೆ ಎಂದು ನವು 2016ರಲ್ಲಿಯೇ ಹೇಳಿದ್ದೆವು. ಈಗ ಅದು ಸಾಬೀತಾಗಿದೆ ಎಂದಿದ್ದಾರೆ.

“500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಆದರೆ 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ಬದಲಿಗೆ 500 ಮತ್ತು 1000 ರೂಪಾಯಿ ನೋಟುಗಳು ಜನಪ್ರಿಯವಾಗಿದ್ದವು ಮತ್ತು ವ್ಯಾಪಕವಾಗಿ ವಿನಿಮಯಗೊಂಡ ಕರೆನ್ಸಿಗಳಾಗಿದ್ದವು. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಅದು ಸರಿ ಎಂದು ಸಾಬೀತುಪಡಿಸಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್‌ಬಿಐ 500 ರೂ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು. ಈಗ ಸರ್ಕಾರ/ಆರ್‌ಬಿಐ 1000 ರೂಪಾಯಿ ನೋಟನ್ನು ಪುನಃ ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ಏಕೆಂದರೆ ನೋಟು ಅಮಾನ್ಯೀಕರಣದ ಬಂಡವಾಳ ಬಯಲಾಗಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿಗೆ ಶಿಕ್ಷಣ ಬೇಕು – ಕೇಜ್ರಿವಾಲ್ ವ್ಯಂಗ್ಯ

ಭ್ರಷ್ಟಾಚಾರ ನಿರ್ಮೂಲನೆ ಮಾಡಲು 2000 ರೂ ನೋಟುಗಳನ್ನು ಪರಿಚಯಿಸಲಾಗಿತ್ತು. ಈಗ ಅವುಗಳನ್ನು ರದ್ದುಪಡಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಅದಕ್ಕೆ ಹೇಳುವುದು ಪ್ರಧಾನಿ ಶಿಕ್ಷಣ ಬೇಕೆಂದು. ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳುತ್ತಾರೆ. ಆದರೆ ಅವರಿಗೆ ಅರ್ಥವಾಗುತ್ತಿಲ್ಲ. ಅದರಿಂದ ಜನರು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಮೊದಲು ಕೆಲಸ – ನಂತರ ಯೋಚನೆ : ಜೈರಾಂ ರಮೇಶ್

ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

“2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು 2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು. ಅಲ್ಲದೇ ಈ ನಿರ್ಧಾರ ತಪ್ಪಾಗಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎದೆಯುಬ್ಬಿಸಿ ಹೇಳಿದ್ದರು. ಆದರೆ ಆ ಯೋಜನೆ ಸಂಪೂರ್ಣ ವಿಫಲವಾಗಿದೆ. ಅಲ್ಲದೇ ಭಾರತದ ಆರ್ಥಿಕತೆ ದೊಡ್ಡ ಹೊಡೆತ ನೀಡಿದೆ. ನೋಟು ಅಮಾನ್ಯೀಕರಣದಿಂದಾಗಿ ಬಡವರು ಬೀದಿಗೆ ಬಿದ್ದಿದ್ದಾರೆ. ನೂರಾರು ಜನರು ಸಾವನಪ್ಪಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರಿಗಳು ನೆಲ ಕಚ್ಚಿದ್ದಾರೆ. ಇಷ್ಟೆಲ್ಲ ಆದ ನಂತರ ಮೋದಿ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...