Homeಮುಖಪುಟ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

- Advertisement -
- Advertisement -

₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳು ದಾಳಿ ನಡೆಸಿವೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನೋಟು ಅಮಾನ್ಯೀಕರಣ ಎಂಬುದು ಒಂದು ವಿಫಲ ಯೋಜನೆ ಎಂದು ನವು 2016ರಲ್ಲಿಯೇ ಹೇಳಿದ್ದೆವು. ಈಗ ಅದು ಸಾಬೀತಾಗಿದೆ ಎಂದಿದ್ದಾರೆ.

“500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಆದರೆ 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ಬದಲಿಗೆ 500 ಮತ್ತು 1000 ರೂಪಾಯಿ ನೋಟುಗಳು ಜನಪ್ರಿಯವಾಗಿದ್ದವು ಮತ್ತು ವ್ಯಾಪಕವಾಗಿ ವಿನಿಮಯಗೊಂಡ ಕರೆನ್ಸಿಗಳಾಗಿದ್ದವು. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಅದು ಸರಿ ಎಂದು ಸಾಬೀತುಪಡಿಸಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್‌ಬಿಐ 500 ರೂ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು. ಈಗ ಸರ್ಕಾರ/ಆರ್‌ಬಿಐ 1000 ರೂಪಾಯಿ ನೋಟನ್ನು ಪುನಃ ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ಏಕೆಂದರೆ ನೋಟು ಅಮಾನ್ಯೀಕರಣದ ಬಂಡವಾಳ ಬಯಲಾಗಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿಗೆ ಶಿಕ್ಷಣ ಬೇಕು – ಕೇಜ್ರಿವಾಲ್ ವ್ಯಂಗ್ಯ

ಭ್ರಷ್ಟಾಚಾರ ನಿರ್ಮೂಲನೆ ಮಾಡಲು 2000 ರೂ ನೋಟುಗಳನ್ನು ಪರಿಚಯಿಸಲಾಗಿತ್ತು. ಈಗ ಅವುಗಳನ್ನು ರದ್ದುಪಡಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಅದಕ್ಕೆ ಹೇಳುವುದು ಪ್ರಧಾನಿ ಶಿಕ್ಷಣ ಬೇಕೆಂದು. ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳುತ್ತಾರೆ. ಆದರೆ ಅವರಿಗೆ ಅರ್ಥವಾಗುತ್ತಿಲ್ಲ. ಅದರಿಂದ ಜನರು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಮೊದಲು ಕೆಲಸ – ನಂತರ ಯೋಚನೆ : ಜೈರಾಂ ರಮೇಶ್

ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

“2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು 2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು. ಅಲ್ಲದೇ ಈ ನಿರ್ಧಾರ ತಪ್ಪಾಗಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎದೆಯುಬ್ಬಿಸಿ ಹೇಳಿದ್ದರು. ಆದರೆ ಆ ಯೋಜನೆ ಸಂಪೂರ್ಣ ವಿಫಲವಾಗಿದೆ. ಅಲ್ಲದೇ ಭಾರತದ ಆರ್ಥಿಕತೆ ದೊಡ್ಡ ಹೊಡೆತ ನೀಡಿದೆ. ನೋಟು ಅಮಾನ್ಯೀಕರಣದಿಂದಾಗಿ ಬಡವರು ಬೀದಿಗೆ ಬಿದ್ದಿದ್ದಾರೆ. ನೂರಾರು ಜನರು ಸಾವನಪ್ಪಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರಿಗಳು ನೆಲ ಕಚ್ಚಿದ್ದಾರೆ. ಇಷ್ಟೆಲ್ಲ ಆದ ನಂತರ ಮೋದಿ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...