Homeಮುಖಪುಟ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

- Advertisement -
- Advertisement -

₹ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳು ದಾಳಿ ನಡೆಸಿವೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನೋಟು ಅಮಾನ್ಯೀಕರಣ ಎಂಬುದು ಒಂದು ವಿಫಲ ಯೋಜನೆ ಎಂದು ನವು 2016ರಲ್ಲಿಯೇ ಹೇಳಿದ್ದೆವು. ಈಗ ಅದು ಸಾಬೀತಾಗಿದೆ ಎಂದಿದ್ದಾರೆ.

“500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಆದರೆ 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ಬದಲಿಗೆ 500 ಮತ್ತು 1000 ರೂಪಾಯಿ ನೋಟುಗಳು ಜನಪ್ರಿಯವಾಗಿದ್ದವು ಮತ್ತು ವ್ಯಾಪಕವಾಗಿ ವಿನಿಮಯಗೊಂಡ ಕರೆನ್ಸಿಗಳಾಗಿದ್ದವು. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ ಮತ್ತು ಅದು ಸರಿ ಎಂದು ಸಾಬೀತುಪಡಿಸಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್‌ಬಿಐ 500 ರೂ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು. ಈಗ ಸರ್ಕಾರ/ಆರ್‌ಬಿಐ 1000 ರೂಪಾಯಿ ನೋಟನ್ನು ಪುನಃ ಪರಿಚಯಿಸಿದರೆ ನನಗೆ ಆಶ್ಚರ್ಯವಾಗುವುದಿಲ್ಲ. ಏಕೆಂದರೆ ನೋಟು ಅಮಾನ್ಯೀಕರಣದ ಬಂಡವಾಳ ಬಯಲಾಗಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿಗೆ ಶಿಕ್ಷಣ ಬೇಕು – ಕೇಜ್ರಿವಾಲ್ ವ್ಯಂಗ್ಯ

ಭ್ರಷ್ಟಾಚಾರ ನಿರ್ಮೂಲನೆ ಮಾಡಲು 2000 ರೂ ನೋಟುಗಳನ್ನು ಪರಿಚಯಿಸಲಾಗಿತ್ತು. ಈಗ ಅವುಗಳನ್ನು ರದ್ದುಪಡಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎನ್ನುತ್ತಿದ್ದಾರೆ. ಅದಕ್ಕೆ ಹೇಳುವುದು ಪ್ರಧಾನಿ ಶಿಕ್ಷಣ ಬೇಕೆಂದು. ಅನಕ್ಷರಸ್ಥ ಪ್ರಧಾನಿಗೆ ಯಾರು ಏನು ಬೇಕಾದರೂ ಹೇಳುತ್ತಾರೆ. ಆದರೆ ಅವರಿಗೆ ಅರ್ಥವಾಗುತ್ತಿಲ್ಲ. ಅದರಿಂದ ಜನರು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಮೊದಲು ಕೆಲಸ – ನಂತರ ಯೋಚನೆ : ಜೈರಾಂ ರಮೇಶ್

ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ವ್ಯಂಗ್ಯವಾಡಿದ್ದಾರೆ.

“2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು 2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು. ಅಲ್ಲದೇ ಈ ನಿರ್ಧಾರ ತಪ್ಪಾಗಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎದೆಯುಬ್ಬಿಸಿ ಹೇಳಿದ್ದರು. ಆದರೆ ಆ ಯೋಜನೆ ಸಂಪೂರ್ಣ ವಿಫಲವಾಗಿದೆ. ಅಲ್ಲದೇ ಭಾರತದ ಆರ್ಥಿಕತೆ ದೊಡ್ಡ ಹೊಡೆತ ನೀಡಿದೆ. ನೋಟು ಅಮಾನ್ಯೀಕರಣದಿಂದಾಗಿ ಬಡವರು ಬೀದಿಗೆ ಬಿದ್ದಿದ್ದಾರೆ. ನೂರಾರು ಜನರು ಸಾವನಪ್ಪಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರಿಗಳು ನೆಲ ಕಚ್ಚಿದ್ದಾರೆ. ಇಷ್ಟೆಲ್ಲ ಆದ ನಂತರ ಮೋದಿ ಸರ್ಕಾರ ಈಗ ಎಚ್ಚೆತ್ತುಕೊಂಡಿದೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...