Homeಮುಖಪುಟಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ

ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ಯೋಜನೆ ಹಿಂತೆಗೆತ: 15 ಕೋಟಿ ಜನರ ಮೇಲೆ ಪರಿಣಾಮ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯ ಅಡಿಯಲ್ಲಿ ಉಚಿತವಾಗಿ ಅಕ್ಕಿ ಮತ್ತು ಗೋಧಿಯನ್ನು ವಿತರಿಸುವುದನ್ನು ನಿಲ್ಲಿಸಲು ತೀರ್ಮಾನಿಸಿದೆ. ಈ ಪಡಿತರ ಹಿಂತೆಗೆತದಿಂದ ಕನಿಷ್ಠ 3.6 ಕೋಟಿ ಪಡಿತರ ಚೀಟಿದಾರರು- 15 ಕೋಟಿ ಫಲಾನುಭವಿಗಳು- ಸಂಕಷ್ಠಕ್ಕಿಡಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಾರಂಭದಲ್ಲಿ ರಾಜ್ಯ ಸರ್ಕಾರವು ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, ಸುಮಾರು 15ಕೋಟಿ ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದರು. ಅವರು ತಿಂಗಳಿಗೆ ಎರಡು ಬಾರಿ ಉಚಿತ ಪಡಿತರವನ್ನು ಪಡೆಯುತ್ತಿದ್ದರು. ಅಲ್ಲದೆ ಈ ಯೋಜನೆಯು ರಾಜ್ಯ ಬಿಜೆಪಿ ಸರ್ಕಾರಕ್ಕೆ ಖ್ಯಾತಿಯನ್ನು ತಂದುಕೊಟ್ಟಿದ್ದಲ್ಲದೆ 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತ ಹಾಕುವಂತೆ ಕೆಲಸ ಮಾಡಿದೆ ಎಂದು ಹಲವರು ವಿಶ್ಲೇಷಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ (22 ಕೋಟಿ) ರಾಜ್ಯವಾಗಿದೆ.
ರಾಜ್ಯ ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯ ಪ್ರಕಾರ, ಪಡಿತರ ಚೀಟಿದಾರರು ಜುಲೈನಲ್ಲಿ ಪಡಿತರ ತೆಗೆದುಕೊಳ್ಳುವಾಗ ಒಂದು ಕೆಜಿ ಅಕ್ಕಿಗೆ 3ರೂ ಮತ್ತು ಒಂದು ಕೆಜಿ ಗೋಧಿಗೆ 2ರೂ ಪಾವತಿಸಬೇಕಿದೆ. ಆದರೆ ಜುಲೈ ತಿಂಗಳ ಪಡಿತರ ವಿತರಣೆ ಆಗಸ್ಟ್ 25ರಂದು ಪ್ರಾರಂಭವಾಗಿದೆ ಎನ್ನಲಾಗಿದೆ.

ಲಕ್ನೋದ ಜಿಲ್ಲಾ ವಿತರಣಾ ಅಧಿಕಾರಿ ಸುನೀಲ್ ಕುಮಾರ್ ಸಿಂಗ್ ಅವರನ್ನು ದಿವೈರ್ ಮಾತನಾಡಿಸಿದಾಗ, “ಪಡಿತರ ಚೀಟಿದಾರರು ಆಹಾರ ಧಾನ್ಯಗಳಿಗೆ ಹಣ ಪಾವತಿಸಬೇಕು (ಅಕ್ಕಿ & ಗೋಧಿ). ಆದಾಗ್ಯೂ, ಸರ್ಕಾರವು ಒಂದು ಲೀಟರ್ ಅಡುಗೆ ಎಣ್ಣೆ ಮತ್ತು 1ಕೆಜಿ ಉಪ್ಪು, 1ಕೆಜಿ ಕಡ್ಲೆ ಬೇಳೆಯನ್ನು ಉಚಿತವಾಗಿ ನೀಡುವುದನ್ನು ಮುಂದುವರೆಸುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ 3.6 ಕೋಟಿ ಪಡಿತರ ಚೀಟಿದಾರರಲ್ಲಿ ಸುಮಾರು 3.19 ಕೋಟಿ ಫಲಾನುಭವಿಗಳು ಹಕ್ಕುಪತ್ರ ಹೊಂದಿದ್ದ ಕುಟುಂಬದ (ಪಿಹೆಚ್‌ಹೆಚ್) ಕೆಟಗರಿಯ ಅಡಿಯಲ್ಲಿ ಬಂದರು, 40 ಲಕ್ಷ ಫಲಾನುಭವಿಗಳು ಅಂತ್ಯೋದಯ ಕೆಟಗರಿಯ ಅಡಿಯಲ್ಲಿ ಬರುತ್ತಾರೆ.

ಅಂತ್ಯೋದಯ ರೇಷನ್ ಕಾರ್ಡ್ಅನ್ನು ಉತ್ತಮ ಆದಾಯ ಹೊಂದಿರದ ವ್ಯಕ್ತಿಗಳಿಗೆ ಅಥವಾ ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಿಗೆ ನೀಡಲಾಗುತ್ತಿದೆ.

ಪಿಹೆಚ್‌ಹೆಚ್ ರೇಷನ್ ಕಾರ್ಡ್‌ಗಳನ್ನು ವಿಶೇಷವಾಗಿ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ನೀಡಲಾಗಿದೆ. ರಾಜ್ಯ ಸರ್ಕಾರ ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸಿರುವ ಗ್ರಾಮೀಣ ಪ್ರದೇಶದ ಕುಟುಂಬಗಳು ಇದರ ಫಲಾನುಭವಿಗಳಾಗಿವೆ.

ಕೃಪೆ: ದಿ ವೈರ್
ಅನುವಾದ: ಸಂಜಯ್, ಚಿಕ್ಕಬಳ್ಳಾಪುರ

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...