Homeಮುಖಪುಟಭೀಮಾ ಕೋರೆಗಾಂವ್ ಕಾರ್ಯಕರ್ತರ ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ತೀವ್ರ ಒತ್ತಡ

ಭೀಮಾ ಕೋರೆಗಾಂವ್ ಕಾರ್ಯಕರ್ತರ ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ತೀವ್ರ ಒತ್ತಡ

ಸಮಾಜದ ಅಂಚಿನಲ್ಲಿರುವ ವರ್ಗಗಳ ಪರವಾಗಿ ಹೋರಾಡುತ್ತಿರುವ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯವರನ್ನು ಹಲವು ನಾಯಕರು ಕೋರಿದ್ದಾರೆ.

- Advertisement -
- Advertisement -

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಆರೇ ಮತ್ತು ಭೀಮಾ ಕೋರೆಗಾಂವ್ ಪ್ರಕರಣಗಳನ್ನು ಪರಿಶೀಲಿಸಲು ನಿರ್ಧರಿಸಿದ ನಂತರ, ರಾಜ್ಯ ಎನ್‌ಸಿಪಿ ಮುಖಂಡ ಜಿತೇಂದ್ರ ಅವಾದ್ ಸೇರಿದಂತೆ ಇತರ ಮುಖಂಡರು ಭೀಮಾ ಕೊರೆಗಾಂವ್ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವನ್ನು ಕೋರಿದ್ದಾರೆ.

ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುಧಾ ಭಾರದ್ವಾಜ್, ವರವರ ರಾವ್, ಶೋಮಾ ಸೇನ್, ಸುರೇಂದ್ರ ಗ್ಯಾಡ್ಲಿಂಗ್, ರೋನಾ ವಿಲ್ಸನ್ ಮತ್ತು ಸುಧೀರ್ ಧವಾಲೆ ಮತ್ತು ಮಹೇಶ್ ರೌತ್, ಗೌತಮ್ ನವಲಖಾ ಈ ಪ್ರಕರಣದ ಆರೋಪಿಗಳಾಗಿದ್ದು ಇವರಲ್ಲಿ ಕೆಲವರು ವರ್ಷದಿಂದಲೂ ಜೈಲಿನಲ್ಲಿದ್ದಾರೆ.

ಈಗ ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಒಕ್ಕೂಟದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಎನ್‌ಸಿಪಿಯ ಜಿತೇಂದ್ರ ಅವದ್, ಸಮಾಜವಾದಿ ಪಕ್ಷದ ಅಬು ಅಜ್ಮಿ, ಸಿಪಿಐ ಮುಖಂಡ ಡಿ ರಾಜಾ, ಆರ್‌ಜೆಡಿಯ ಮನೋಜ್ ಜಾದು ಸೇರಿದಂತೆ ಹಲವು ಮುಖಂಡರು ಭೀಮಾ ಕೊರೆಗಾಂವ್ ಪ್ರಕರಣವನ್ನು ಮುಚ್ಚಿ, ಕಾರ್ಯಕರ್ತರಿಗೆ ನೆಮ್ಮದಿ ನೀಡುವಂತೆ ಹೊಸ ಸಿಎಂ ಉದ್ಧವ್ ಠಾಕ್ರೆಯವರಲ್ಲಿ ಮನವಿ ಮಾಡಿದ್ದಾರೆ.

ಸತ್ಯವನ್ನು ಬೆಳಕಿಗೆ ತರಲು ಸರ್ಕಾರ ಶರದ್ ಪವಾರ್ ಅವರೊಂದಿಗೆ ಸಮನ್ವಯ ಸಾಧಿಸಲಿದೆ ಎಂದು ಅಬು ಅಜ್ಮಿ ಹೇಳಿದ್ದಾರೆ. ಸಿಪಿಐ ನಾಯಕ ಡಿ ರಾಜಾ ಅವರು, ಅಂಚಿನಲ್ಲಿರುವ ಜನರು ಹಿತಾಸಕ್ತಿಗಾಗಿ ಹೋರಾಡುವ ಮೂಲಕ ತಮ್ಮ ಜೀವನವನ್ನು ಅಪಾಯದ ಸಾಲಿನಲ್ಲಿರಿಸಿಕೊಳ್ಳುವ ಕಾರ್ಯಕರ್ತರ ಹಿತಾಸಕ್ತಿಗಳನ್ನು ಕಾಪಾಡಲು ಈ ಕ್ರಮ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ದಲಿತ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಮಾಜ ಕಲ್ಯಾಣ ಸಂಸ್ಥೆಯಾದ ರಾಷ್ಟ್ರ ಸೇವಾ ದಳದ ಸತ್ಯ ಶೋಧನೆಗಳ ಪ್ರಕಾರ ಭೀಮಾ ಕೋರೆಂಗಾವ್‌ ವಿಷಯವು ಕೇಸರಿ ಪಕ್ಷದ ಪಿತೂರಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ತೀರಾ ಇತ್ತೀಚೆಗೆ ಮತ್ತೊಂದು ಆಘಾತಕಾರಿ ಸಂಗತಿ ಮುನ್ನೆಲೆಗೆ ಬಂದಿತು. ವಿಶ್ವಾದ್ಯಂತ ತನ್ನ ಬಳಕೆದಾರರನ್ನು ಬೆಚ್ಚಿಬೀಳಿಸಿದ ಕುಖ್ಯಾತ ವಾಟ್ಸಾಪ್ ಸ್ಪೈವೇರ್ ಸಹ ಭೀಮಾ ಕೋರೆಗಾಂವ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿರುವುದು ಕಂಡುಬಂದಿದೆ. ಕೇಂದ್ರ ಸರ್ಕಾರವು ಈ ಕಾರ್ಯಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲು ಪೆಗಾಸಸ್ ಸಾಫ್ಟ್‌ವೇರ್ ಅನ್ನು ಬಳಸಿದೆ. ಆ ಮೂಲಕ ನಿರಾಪರಾಧಿಗಳನ್ನು ಈ ಸಂಚಿನಲ್ಲಿ ಸಿಕ್ಕಿಸುವ ಹುನ್ನಾರ ನಡೆಸಿದೆ ಎಂದು ಸತ್ಯ ಶೋಧನ ವರದಿ ತಿಳಿಸಿದೆ.

ಒಂದು ವರ್ಷಕ್ಕೂ ಹೆಚ್ಚು ಕಾಲ ಈ ಕಾರ್ಯಕರ್ತರು ಜೈಲಿನಲ್ಲಿ ನರಳುತ್ತಿದ್ದಾರೆ. ಆದರೆ ನಿಜವಾದ ಹಿಂದೂತ್ವ ವಿಭಜನೆಯ ಅಪರಾಧಿಗಳು ಮುಕ್ತವಾಗಿ ವಿಹರಿಸುತ್ತಿದ್ದಾರೆ. ಹಾಗಾಗಿ ಅಘಾಡಿ ನಾಯಕರನ್ನು ಮನವೊಲಿಸಿ ಈ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಸಾಧ್ಯವೇ? ಆ ಮೂಲಕ ತನ್ನನ್ನು ಜಾತ್ಯತೀತ, ಉದಾರ ಮತ್ತು ಪ್ರಜಾಪ್ರಭುತ್ವ ಸರ್ಕಾರವಾಗಿ ಸ್ಥಾಪಿಸಲು ಉದ್ಧವ್‌ ಠಾಕ್ರೆ ಬಯಸುತ್ತಾರೆಯೇ? ಎಂಬ ಪ್ರಶ್ನೆಗಳು ಎದ್ದಿವೆ.

ಕೃಪೆ: ಸಬ್‌ರಂಗ್‌ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...