Homeಚಳವಳಿಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

"ಪ್ರತಿಭಟನೆ ಮೂಲಭೂತ ಹಕ್ಕು, ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಈ ವಿಷಯವನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. “ಕಾಯ್ದೆಗಳನ್ನು ನೀವು ತಡೆಹಿಡಿಯುತ್ತೀರಾ ಅಥವಾ ಈ ಕೆಲಸವನ್ನು ನಾವು ಮಾಡಬೇಕೆ? ಇದರಲ್ಲಿ ಅಹಂ ಯಾಕೆ?” ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ.

ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ, “ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಏನಾದರೂ ತೊಂದರೆಯಾದರೆ ಪ್ರತಿಯೊಬ್ಬರೂ ಜವಾಬ್ದಾರರಾಗುತ್ತೇವೆ” ಎಂದು ಎಸ್.ಎ.ಬೊಬಡೆ ತೀಕ್ಷ್ಣವಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ…

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸುವ ಸಮಿತಿಯು ವರದಿ ಸಲ್ಲಿಸುವವರೆಗೆ ಈ ಕಾಯ್ದೆಗಳನ್ನು ತಡೆಹಿಡಿಯಿರಿ.

ಮುಖ್ಯ ನ್ಯಾಯಮೂರ್ತಿಗಳಾದ ಬೋಬಡೆ ಮತ್ತು ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು, “ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವೃದ್ಧರು ಮತ್ತು ಮಹಿಳೆಯರು ಆಂದೋಲನದ ಭಾಗವಾಗಿದ್ದಾರೆ. ಏನಾಗುತ್ತಿದೆ? ಕೃಷಿ ಕಾನೂನುಗಳು ಉತ್ತಮವೆಂದು ಹೇಳುವ ಒಂದೇ ಒಂದು ಮನವಿಯನ್ನು ಸಹ ಸಲ್ಲಿಸಲಾಗಿಲ್ಲ” ಎಂದು ಹೇಳಿದೆ.

“ಕಾಯ್ದೆಗಳ ಅನುಷ್ಟಾನವನ್ನು ತಡೆದ ನಂತರವೂ ನೀವು ಪ್ರತಿಭಟನೆಯನ್ನು ಮುಂದುವರೆಸಬಹುದು. ಆದರೆ ಇಲ್ಲಿಯೇ ಪ್ರತಿಭಟನೆ ಮಾಡುತ್ತೀರಾ ಅಥವಾ ಬೇರೆಡೆಗೆ ಹೋಗುತ್ತೀರಾ” ಎಂದು ರೈತರನ್ನು ಪ್ರಶ್ನಿಸಿದೆ.

ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ವೇಣುಗೋಪಾಲ್, “ನೀವು ಸಮಿತಿಯನ್ನು ರಚಿಸಬಹುದು. ಆದರೆ ಕಾಯ್ದೆಗಳನ್ನು ತಡೆಹಿಡಿಯಬೇಡಿ” ಎಂದು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ಸುಪ್ರೀಂ ಗೆ ಹೇಳಿದ್ದಾರೆ.

“ಎರಡು-ಮೂರು ರಾಜ್ಯಗಳ ರೈತರು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಲ್ಲಿ ದಕ್ಷಿಣ ಭಾರತದ ಅಥವಾ ಪಶ್ಚಿಮ ಭಾರತದ ಯಾವುದೇ ರೈತರು ಭಾಗಿಯಾಗಿಲ್ಲ” ಎಂದು ಒತ್ತಿ ಹೇಳಿದರು.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...