Homeಮುಖಪುಟಕೊಲಿಜಿಯಂ ಶಿಫಾರಸ್ಸು ತಡೆಹಿಡಿಯುವುದು, ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕ: ನಿವೃತ್ತ ನ್ಯಾಯಮೂರ್ತಿ ಆರ್‌‌ಎಫ್‌‌ ನಾರಿಮನ್

ಕೊಲಿಜಿಯಂ ಶಿಫಾರಸ್ಸು ತಡೆಹಿಡಿಯುವುದು, ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕ: ನಿವೃತ್ತ ನ್ಯಾಯಮೂರ್ತಿ ಆರ್‌‌ಎಫ್‌‌ ನಾರಿಮನ್

ಕೊಲಿಜಿಯಂ ಪರ ಬ್ಯಾಟಿಂಗ್ ಮಾಡಿದ ಸುಪ್ರಿಂಕೋರ್ಟ್‌‌‌ ನಿವೃತ್ತ ನ್ಯಾಯಮೂರ್ತಿ

- Advertisement -
- Advertisement -

ಸುಪ್ರೀಂಕೋರ್ಟ್‌‌‌ ಕೊಲಿಜಿಯಂ ಶಿಫಾರಸ್ಸು ಮಾಡಿರುವ ನ್ಯಾಯಾಧೀಶರ ಹೆಸರುಗಳನ್ನು ತಡೆಹಿಡಿಯುವುದು, ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕ ಮತ್ತು ವಿರುದ್ಧವಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ರೋಹಿಂಟನ್ ಎಫ್. ನಾರಿಮನ್ ಅವರು ಹೇಳಿದ್ದು, “ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಕಟ್ಟುನಿಟ್ಟಾದ ಗಡುವನ್ನು ನಿಗದಿಪಡಿಸಬೇಕು” ಎಂದು ಅವರು ಹೇಳಿದ್ದಾರೆ.

7ನೇ ಎಂಸಿ ಚಾಗ್ಲಾ ಸ್ಮಾರಕ ಉಪನ್ಯಾಸದಲ್ಲಿ ‘‘ಎ ಟೇಲ್ ಆಫ್ ಟು ಕಾಂಸ್ಟಿಟ್ಯೂಷನ್- ಇಂಡಿಯಾ ಆಂಡ್‌ ದಿ ಯುನೈಟೆಡ್‌ ಸ್ಟೇಟ್ಸ್‌‌” ವಿಚಾರವಾಗಿ ಮಾತನಾಡಿದ ನ್ಯಾಯಮೂರ್ತಿ ನಾರಿಮನ್ ಅವರು,“ನ್ಯಾಯಾಧೀಶರ ನೇಮಕಾತಿಗಾಗಿ ಕಾರ್ಯವಿಧಾನದ ಎಲ್ಲಾ ಸಮಸ್ಯೆಗಳನ್ನು ಸರಿ ಪಡಿಸಲು ಐದು ನ್ಯಾಯಾಧೀಶರ ಸಂವಿಧಾನ ಪೀಠವನ್ನು ರಚಿಸಬೇಕು ಮತ್ತು ಕೊಲಿಜಿಯಂ ನಿರ್ಣಯಗಳಿಗೆ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಕಟ್ಟುನಿಟ್ಟಾದ ಗಡುವನ್ನು ನಿಗದಿಪಡಿಸಬೇಕು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ವೇಳೆ ಗಡುವು ಮೀರಿ ಸರ್ಕಾರ ಪ್ರತಿಕ್ರಿಯೆ ನೀಡದಿದ್ದರೆ, ಸರ್ಕಾರಕ್ಕೆ ಹೇಳಲು ಏನೂ ಇಲ್ಲ ಎಂದು ಭಾವಿಸಿ ನೇಮಕಾತಿಗಳನ್ನು ಮಾಡಬೇಕು” ಎಂದು ಅವರು ಹೇಳಿದರು.

ಸ್ವತಂತ್ರ ನ್ಯಾಯಾಂಗದ ಪರವಾಗಿ ಮಾತನಾಡಿದ ಅವರು, “ಅಂತಿಮವಾಗಿ, ನಾನು ನಿಮಗೆ ಮೊದಲೇ ಹೇಳಿದಂತೆ, ಸಂವಿಧಾನವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದರೆ, ನೀವು ಸ್ವತಂತ್ರ ಮತ್ತು ನಿರ್ಭೀತ ನ್ಯಾಯಾಧೀಶರನ್ನು ಹೊಂದಿಲ್ಲದಿದ್ದರೆ, ವಿದಾಯ ಹೇಳಿ. ಅಲ್ಲಿ ಏನೂ ಉಳಿದಿರುವುದಿಲ್ಲ” ಎಂದು ಹೇಳಿದ್ದಾರೆ

ಖ್ಯಾತ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರ ಕಾರ್ಟೂನ್‌ಗಳಲ್ಲಿನ ‘ಕಾಮನ್‌ ಮ್ಯಾನ್’ ಅನ್ನು ಉಲ್ಲೇಖಿಸಿದ ಅವರು, “ಈ ಭದ್ರಕೋಟೆ ಬಿದ್ದರೆ ಅಥವಾ ಬೀಳುವ ವೇಳೆ ಲಕ್ಷ್ಮಣ್ ಅವರ ‘ಕಾಮನ್ ಮ್ಯಾನ್’ ಒಂದೇ ಒಂದು ಪ್ರಶ್ನೆಯನ್ನು ಕೇಳುತ್ತದೆ – ಉಪ್ಪು ತನ್ನ ರುಚಿಯನ್ನು ಕಳೆದುಕೊಂಡಿದ್ದರೆ, ಅದಕ್ಕೆ ಎಲ್ಲಿಂದ ಉಪ್ಪು ಹಾಕಬೇಕು?. ನಾವು ಹೊಸ ಕರಾಳ ಯುಗದ ಪ್ರಪಾತವನ್ನು ಪ್ರವೇಶಿಸುತ್ತಿದ್ದೇವೆ” ಎಂದು ಹೇಳಿದರು.

ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಅವರ ‘ಕಟು ವಿಮರ್ಶೆ’ಯನ್ನು ಉಲ್ಲೇಖಿಸಿದ ನ್ಯಾಯಾಧೀಶರು, “ಅವರು ಕೊಲಿಜಿಯಂ ಮೇಲಿನ ಉನ್ನತ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಳ್ಳಲು ಬದ್ಧರಾಗಿರುತ್ತಾರೆ – ಅದು ಸರಿಯಾಗಿರಲಿ ಅಥವಾ ತಪ್ಪಾಗಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...