Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...