Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...