Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...