Homeಮುಖಪುಟತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ ತುಂಬಾ ನೋವುಂಟಾಗುತ್ತದೆ: ಡೇವಿಡ್‌ ವಾರ್ನರ್‌

- Advertisement -
- Advertisement -

“ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ತಂಡದಿಂದ ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ, ಅದು ತುಂಬಾ ನೋವುಂಟುಮಾಡುತ್ತದೆ” ಎಂದು ಸನ್‌ರೈಸರ್ಸ್ ಹೈದರಾಬಾದ್ ನಾಯಕರಾಗಿದ್ದ ಡೇವಿಡ್‌ ವಾರ್ನರ್‌ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಐಪಿಎಲ್ ಫ್ರಾಂಚೈಸಿಯಿಂದ ತಮ್ಮನ್ನು ಕೈಬಿಟ್ಟಾಗಿನಿಂದ ನವೆಂಬರ್‌ನಲ್ಲಿ ಟಿ-20 ವಿಶ್ವಕಪ್‌ನಲ್ಲಿ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆಲ್ಲುವವರೆಗೆ ಡೇವಿಡ್‌ ವಾರ್ನರ್‌ ಸಾಕಷ್ಟು ಏರುಪೇಟುಗಳನ್ನು ಕಂಡಿದ್ದಾರೆ. ಇದೆಲ್ಲದರ ನಡುವೆ, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್‌ ಗೆಲ್ಲಲು ಓಪನರ್‌ ಬ್ಯಾಟ್ಸ್‌ಮನ್‌ ಆಗಿರುವ ವಾರ್ನರ್‌ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಈ ಬಾರಿಯ IPL 2021ರ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದೇ ಸಮಯದಲ್ಲಿ ವಾರ್ನರ್‌ ಅವರನ್ನು ತಂಡದ ನಾಯಕತ್ವದಿಂದ ತೆಗೆದು ಹಾಕಲಾಯಿತು. ಮಾತ್ರವಲ್ಲದೆ, ತಂಡದಿಂದಲೂ ಕೈಬಿಡಲಾಗಿತ್ತು.

“ವರ್ಷಾನುಗಟ್ಟಲೆ ನೀವು ಅತ್ಯಂತ ಹೆಚ್ಚಾಗಿ ಪ್ರೀತಿಸಿದ ತಂಡದಿಂದ ನಿಮ್ಮ ತಪ್ಪಿಲ್ಲದೆಯೂ ನಿಮ್ಮನ್ನು ಕೈಬಿಟ್ಟಾಗ, ಕಾರಣ ನೀಡದೇ ನಾಯಕತ್ವದಿಂದ ಕಿತ್ತುಹಾಕಿದಾಗ ತುಂಬಾ ನೋವುಂಟು ಮಾಡುತ್ತದೆ. ಆದರೆ, ಭಾರತದಲ್ಲಿನ ಅಭಿಮಾನಿಗಳು ಯಾವಾಗಲೂ ನನ್ನ ಜೊತೆ ಇರುತ್ತಾರೆ. ಅಲ್ಲಿ ನನಗಾಗಿ ಮತ್ತು ಅವರಿಗಾಗಿ ನಾವು ಆಡುತ್ತೇವೆ. ನಾವು ಮನರಂಜನೆಗಾಗಿ, ಉತ್ತಮ ಪ್ರದರ್ಶನವನ್ನು ನೀಡಲು ಆಡುತ್ತೇವೆ” ಎಂದು ದಿ ಎಕನಾಮಿಕ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ವಾರ್ನರ್ ಹೇಳಿದ್ದಾರೆ.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಕೊಂಡೊಯ್ದ ಡೇವಿಡ್ ವಾರ್ನರ್, ಐಪಿಎಲ್ 2021ರ ಟೂರ್ನಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದಾಗ್ಯೂ, SRH ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ, ಅವರು ಕಠಿಣ ತರಬೇತಿ ಪಡೆಯುತ್ತಿದ್ದರು ಎಂದು ಹೇಳಿದ್ದರು.

“ನನಗೆ ಐಪಿಎಲ್ ತಂಡದಲ್ಲಿ ಸ್ಥಾನ ಸಿಗದಿರಲು ಕಾರಣವೇನಿರಬಹುದು ಎಂಬುದು ಗೊತ್ತಿಲ್ಲ. ನಾನು ಅತ್ಯಂತ ಕಠಿಣ ತರಬೇತಿಯನ್ನು ಪಡೆದುಕೊಳ್ಳುತ್ತಿದೆ. ನಾನು ಒಂದು ದಿನವೂ ಪ್ರಾಕ್ಟೀಸ್‌ಗೆ ತಪ್ಪಿಸಿಕೊಳ್ಳಲಿಲ್ಲ. ಎಲ್ಲವೂ ಕಾರ್ಯರೂಪಕ್ಕೆ ಬರುವ ವೇಳೆಗೆ ನನ್ನನ್ನು ಕೈಬಿಡಲಾಯಿತು. ಇದು ಕೇವಲ ಸಮಯದ ವಿಷಯವಾಗಿದೆ. ಆದ್ದರಿಂದ, ನನಗೆ ನೋವಾಗಿದೆ. ಆದರೂ, ನನಗೆ ಇನ್ನೊಂದು ಅವಕಾಶವಿದೆ ಎಂದು ತಿಳಿದಿತ್ತು” ವಾರ್ನರ್ ತಿಳಿಸಿದ್ದಾರೆ.

ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದಿದೆ. ಡೇವಿಡ್ ವಾರ್ನರ್ ಈ ಟೂರ್ನಿಯಲ್ಲಿ ವಾರ್ನರ್‌ 7 ಇನ್ನಿಂಗ್ಸ್‌ಗಳಲ್ಲಿ 289 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು..


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...