Homeಮುಖಪುಟ'ಯುದ್ಧವಿಲ್ಲದೆ ವಿಜಯವಿಲ್ಲ!' - 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

ಕಿಸಾನ್‌ ಮೋರ್ಚಾ ಕರೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 7 ತಿಂಗಳು ಪೂರೈಸಿದೆ. ದೆಹಲಿಯ ಗಡಿಯ ಸುತ್ತಲು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರೈತರ ಹೋರಾಟ ಎಂಟನೆ ತಿಂಗಳಿಗೆ ಕಾಲಿಡುತ್ತಿದ್ದರೂ ಒಕ್ಕೂಟ ಸರ್ಕಾರ ವಿವಾದಾತ್ಮಕ ಕಾಯ್ದೆಯ ಕುರಿತು ಯಾವುದೆ ಸಮರ್ಪಕವಾದ ನಿರ್ಧಾರವನ್ನು ಪ್ರಕಟಿಸಿಲ್ಲ. ಇದನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ದೇಶದಾದ್ಯಂತ “ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ” ಆಂದೋಲನಕ್ಕೆ ಕರೆ ನೀಡಿತ್ತು.

ಸಂಯುಕ್ತ ಕಿಸಾನ್‌ ಮೋರ್ಚಾದ ಕರೆಯನ್ನು ಬೆಂಬಲಿಸಿ ರಾಜ್ಯದ ರೈತ ಸಂಘಟನೆಗಳು ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಹೋರಾಟ ನಡೆಸಿವೆ. ನಗರದ ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿದ್ದ ಈ ಪ್ರತಿಭಟನೆಯನ್ನು ತಡೆದ ಪೊಲೀಸರು ಪ್ರತಿಭಟನಾ ನಿರತ ರೈತ ಹೋರಾಟಗಾರರನ್ನು ವಶಕ್ಕೆ ಪಡೆದು ಹೈಗ್ರೌಂಡ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆದರೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿ ಪ್ರತಿಭಟನಾ ಸಭೆಯನ್ನು ಅಲ್ಲಿಯೆ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 7 ತಿಂಗಳು: ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರತಿಭಟನೆಗೆ ರೈತರ ಕರೆ

ದೇಶದ ಇತರ ಕಡೆಗಳಲ್ಲಿ ಕೂಡಾ ಸಂಯುಕ್ತ ಕಿಸಾನ್ ಮೋರ್ಚಾದ ಕರೆಗೆ ಬೆಂಬಲ ವ್ಯಕ್ತವಾಗಿದೆ. ರೈತ ನಾಯಕ ರಾಕೇಶ್‌ ಟಿಕಾಯತ್‌ ಗಾಝಿಪುರ್‌ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಸ್ವತಃ ಅವರೆ ತನ್ನ ಬಂಧನ ನಡೆದಿಲ್ಲ ಎಂದು ವಿಡಿಯೊ ಸಂದೇಶ ನೀಡಿದ್ದಾರೆ.

“7 ತಿಂಗಳ ಮಹತ್ವದ ಹೋರಾಟ ಪೂರ್ಣಗೊಳ್ಳುತ್ತಿದ್ದಂತೆ, ದೃಢತೆಯ ಮನೋಭಾವದೊಂದಿಗೆ, ಕರಾಳ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವವರೆಗೆ ರೈತರೆಲ್ಲರೂ ದೀರ್ಘಕಾಲದ ಮತ್ತು ತೀವ್ರವಾದ ಪ್ರತಿಭಟನೆಗೆ ಸಿದ್ಧರಾಗಿದ್ದಾರೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಈ ನಡುವೆ ಚಂಡೀಗಡ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ರೈತ ಮುಖಂಡರಾದ ಬಲ್‌ಬೀರ್‌ ಸಿಂಗ್‌ ರಾಜೇವಾಲ, ಬಲ್‌ಜಿತ್‌ ಸಿಂಗ್‌, ರಾಜೀಂದರ್‌ ಸಿಂಗ್‌ ಮತ್ತು ಕುಲ್‌ದೀಪ್‌ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರೊಂದಿಗೆ ಇದ್ದ ಸಾವಿರಾರು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಟಿಚಾರ್ಜ್ ಮತ್ತು ನೀರಿನ ಫಿರಂಗಿಯಿಂದ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

‘ಯುದ್ಧವಿಲ್ಲದೆ ವಿಜಯವಿಲ್ಲ’ ಪೂರ್ಣ ಉತ್ಸಾಹ, ದೃಡ ನಿಶ್ಚಯ ಮತ್ತು ಶಕ್ತಿಯನ್ನು ಹೊಂದಿರುವ ರೈತರು ತಮ್ಮ ಹಕ್ಕುಗಳನ್ನು ಗೆಲ್ಲಲು, ತಮ್ಮ ಗೆಲುವಿನತ್ತ ಸಾಗಲು ಸಿದ್ಧರಾಗಿದ್ದಾರೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಉತ್ತರ ಪ್ರದೇಶದಲ್ಲಿ ರಾಜ್ಯಪಾಲರನ್ನು ಭೇಟಿಯಾದ ರೈತರ ನಿಯೋಗ ರಾಷ್ಟ್ರಪತಿಗೆ ಪತ್ರವನ್ನು ಕಳುಹಿಸಿದ್ದಾರೆ. ಪಶ್ಚಿಮ ಬಂಗಾಳದ ರಾಜಧಾನಿಯಾದ ಕೊಲ್ಕತ್ತಾದಲ್ಲೂ ರೈತರು ಸಂಯುಕ್ತ ಕಿಸಾನ್‌ ಮೋರ್ಚಾದ ಕರೆಗೆ ಓಗೊಟ್ಟು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...