Homeಮುಖಪುಟಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಎಂದು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿಯೇ ಎಂದು ಮಾಜಿ ಸಿಎಂ ಎಚ್‌.ಡಿ ಲೇವಡಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌‌ರವರು ಚಕ್ರವರ್ತಿ ಸೂಲಿಬೆಲೆ ನಂಬರ್‌ ಒನ್‌ ದೇಶಭಕ್ತ ಎಂದು ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಅವರು, ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ‌ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ… ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ ‘ಆತ’ ಕೊನೇ Rank ಎಂದು ಹೇಳಿದ್ದಾರೆ.

ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ‌ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ‌.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದಿದ್ದಾರೆ.

ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ‌. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದಿದ್ದಾರೆ.

ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ‌ ಎಂದಿದ್ದಾರೆ.

ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು…. ಎಂದು ಟೀಕಿಸಿದ್ದಾರೆ.

ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸೂಪರ್ ಕಾಮೆಂಟ್. “ಪಾಕಿಸ್ತಾನ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಸಾಧ್ಯವಿರಲಿಲ್ಲ” ಎಂಬುದು ಅಕ್ಷರಶಃ ಸತ್ಯ.

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....