Homeಮುಖಪುಟಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಎಂದು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿಯೇ ಎಂದು ಮಾಜಿ ಸಿಎಂ ಎಚ್‌.ಡಿ ಲೇವಡಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌‌ರವರು ಚಕ್ರವರ್ತಿ ಸೂಲಿಬೆಲೆ ನಂಬರ್‌ ಒನ್‌ ದೇಶಭಕ್ತ ಎಂದು ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಅವರು, ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ‌ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ… ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ ‘ಆತ’ ಕೊನೇ Rank ಎಂದು ಹೇಳಿದ್ದಾರೆ.

ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ‌ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ‌.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದಿದ್ದಾರೆ.

ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ‌. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದಿದ್ದಾರೆ.

ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ‌ ಎಂದಿದ್ದಾರೆ.

ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು…. ಎಂದು ಟೀಕಿಸಿದ್ದಾರೆ.

ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸೂಪರ್ ಕಾಮೆಂಟ್. “ಪಾಕಿಸ್ತಾನ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಸಾಧ್ಯವಿರಲಿಲ್ಲ” ಎಂಬುದು ಅಕ್ಷರಶಃ ಸತ್ಯ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...