Homeಮುಖಪುಟಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಪಾಕಿಸ್ತಾನವಿಲ್ಲದಿದ್ದರೆ ಬಿಜೆಪಿಗೆ ಒಂದೂ ಓಟು ಬೀಳುತ್ತಿರಲಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಎಂದು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿಯೇ ಎಂದು ಮಾಜಿ ಸಿಎಂ ಎಚ್‌.ಡಿ ಲೇವಡಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌‌ರವರು ಚಕ್ರವರ್ತಿ ಸೂಲಿಬೆಲೆ ನಂಬರ್‌ ಒನ್‌ ದೇಶಭಕ್ತ ಎಂದು ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಅವರು, ದೇಶಪ್ರೇಮಕ್ಕೆ Rank ಕೊಡುತ್ತಾರೆ ಸುರೇಶ್ ಕುಮಾರ್. ತಾಯಿ ಮೇಲಿನ ಪ್ರೀತಿಗೆ Rank ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ‌ ಮೇಲಿನ ನನ್ನ ಅಭಿಮಾನಕ್ಕೇ ಕುಂದುಂಟಾಗಿದೆ… ದೇಶಪ್ರೇಮದ ವಿಚಾರದಲ್ಲಿ Rank ಕೊಟ್ಟರೆ ‘ಆತ’ ಕೊನೇ Rank ಎಂದು ಹೇಳಿದ್ದಾರೆ.

ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ‌ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಆತ’ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ‌.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದಿದ್ದಾರೆ.

ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ‌. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದಿದ್ದಾರೆ.

ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ‌ ಎಂದಿದ್ದಾರೆ.

ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು…. ಎಂದು ಟೀಕಿಸಿದ್ದಾರೆ.

ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸೂಪರ್ ಕಾಮೆಂಟ್. “ಪಾಕಿಸ್ತಾನ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಸಾಧ್ಯವಿರಲಿಲ್ಲ” ಎಂಬುದು ಅಕ್ಷರಶಃ ಸತ್ಯ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...