Homeಕರ್ನಾಟಕಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ.

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿ ಬೀದಿಪಾಲು ಮಾಡಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಧ್ಯಕ್ಷರಾದ ಕೆ. ಮರಿಯಪ್ಪನವರು ಆರೋಪಿಸಿದ್ದಾರೆ.

ಇಂದಿರಾ ನಗರದ NGEF ಫ್ಯಾಕ್ಟರಿ ಹತ್ತಿರ ಕಳೆದ 30 ವರ್ಷಗಳಿಂದಲೂ ಕೂಲಿ ಮಾಡುವ 450 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದರು. ಇತ್ತೀಚೆಗೆ ಅವರಲ್ಲಿ 303 ಕುಟುಂಬಗಳಿಗೆ ಮಾರತ್ತಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಮನೆ ವ್ಯವಸ್ಥೆ ಮಾಡಲಾಗಿದೆ. ಉಳಿದ 86 ಕುಟುಂಬಗಳು ಸಹ ಅಲ್ಲಿಯೇ ವಾಸಿಸುತ್ತಿದ್ದು, ಅವರ ಬಳಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಒಳಗೊಂಡಂತೆ ಎಲ್ಲಾ ದಾಖಲಾತಿಗಿಳಿದ್ದರೂ ಸಹ ಅವರಿಗೆ ಮನೆ ವ್ಯವಸ್ಥೆ ಮಾಡಿಕೊಡಬೇಕೆಂದು ಕಳೆದ 2 ವರ್ಷಗಳಿಂದ ಹೋರಾಡುತ್ತಿದ್ದೇವೆ. ಸ್ಲಂ ಬೋರ್ಡ್, ಕಂದಾಯ ಅಧಿಕಾರಿಗಳಿಗೆ ಹತ್ತಾರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

ನಿನ್ನೆ ತಾನೇ ವಿಶೇ‍ಷ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಬಡ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದೆವು. ಪುನರ್ವಸತಿ ವ್ಯವಸ್ಥೇ ಮಾಡಬೇಕೆಂದು ಅವರು ತಹಶೀಲ್ದಾರ್‌ರವರಿಗೆ ಸೂಚಿಸಿದರೂ ಸಹ ತಹಶೀಲ್ದಾರ್‌ರವರು ಅದಕ್ಕೆ ಸಿದ್ದರಿಲ್ಲ. ಹಾಗಾಗಿ ಇಂದು ಏಕಾಏಕಿ ಆ 86 ಕುಟುಂಬಗಳನ್ನು ಸಹ ಒಕ್ಕಲೆಬ್ಬಿಸಲಾಗಿದೆ. ಮನೆ ಕಳೆದುಕೊಂಡ ಆ ಕುಟುಂಬಗಳು ಪರ್ಯಾಯ ವ್ಯವಸ್ಥೆ ಇಲ್ಲದೆ ಬೀದಿಗೆ ಬಿದ್ದಿದ್ದಾರೆ. ಚಳಿಗಾಳಿಯಲ್ಲಿ ನಲುಗಿತ್ತಿದ್ದಾರೆ, ಕೂಡಲೇ ಪುನರ್ವಸತಿ ವ್ಯವಸ್ಥೆ ಮಾಡಬೇಕೆಂದು ಮರಿಯಪ್ಪ ಒತ್ತಾಯಿಸಿದ್ದಾರೆ.

ನಾವು 30 ವರ್ಷಗಳಿಂದ ಒಟ್ಟಿಗೆ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದೇವೆ. ಕಳೆದ ಚುನಾವಣೆಯಲ್ಲಿ ಓಟು ಕೂಡ ಹಾಕಿದ್ದೇವೆ. ಆದರೆ ಅರ್ಧ ಜನಕ್ಕೆ ಮಾತ್ರ ಮನೆ ಕೊಟ್ಟು ಇನ್ನರ್ಧ ಜನಕ್ಕೆ ಮೋಸ ಮಾಡಲಾಗಿದೆ. ಇಂದು ಬೆಳಿಗ್ಗೆ ಪೊಲೀಸರು ಬಂದು ನಮ್ಮ ಮನೆಗಳನ್ನು ಒಡೆದುಹಾಕಿದ್ದಾರೆ. ನಮಗೆ ಬೇರೆ ಯಾವುದೇ ಮನೆ ಇಲ್ಲ, ಅಲ್ಲಿ ಇರಲು ಪೊಲೀಸರು ಬಿಡುತ್ತಿಲ್ಲ ನಾವೇನು ಮಾಡಬೇಕು ಎಂದು ಅಲ್ಲಿನ ನಿವಾಸಿಗಳು ತಮ್ಮ ಗೋಳು ಹೊರಹಾಕಿದ್ದಾರೆ.

ಲಂಚ ಕೊಟ್ಟವರಿಗೆ ಮನೆ ಕೊಡಲಾಗಿದೆ. ಆದರೆ ನಾವು ಬಡವರು ಲಂಚ ಕೊಡುವಷ್ಟು ಶಕ್ತಿ ಇಲ್ಲ. ಹಾಗಾಗಿ ಮನೆ ಕಳೆದುಕೊಂಡು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿ ಬಳಿ ನ್ಯಾಯ ಕೇಳಿಕೊಂಡು ಬಂದಿದ್ದೇವೆ. ತಹಶೀಲ್ದಾರ್ ನಮಗೆ ನ್ಯಾಯ ಕೊಡಿಸುವವರೆಗೂ ನಾವು ಇಲ್ಲೇ ಇರುತ್ತೇವೆ, ಇಲ್ಲೇ ಮಲಗುತ್ತೇವೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...