Homeಕರ್ನಾಟಕಬೆಂಗಳೂರಿನಲ್ಲಿ 86 ಕುಟುಂಬಗಳನ್ನು ಒಕ್ಕಲೆಬ್ಬಿಸಿದ ಅಧಿಕಾರಿಗಳು: ನಾಳೆ ಸ್ಲಂ ಬೋರ್ಡ್ ಮುತ್ತಿಗೆಗೆ ನಿರ್ಧಾರ

ಬೆಂಗಳೂರಿನಲ್ಲಿ 86 ಕುಟುಂಬಗಳನ್ನು ಒಕ್ಕಲೆಬ್ಬಿಸಿದ ಅಧಿಕಾರಿಗಳು: ನಾಳೆ ಸ್ಲಂ ಬೋರ್ಡ್ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿದ್ದನ್ನು ಖಂಡಿಸಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸ್ಲಂ ಬೋರ್ಡ್‌ಗೆ ಮುತ್ತಿಗೆ ಹಾಕಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಿರ್ಧರಿಸಿದೆ.

ಹಲವಾರು ವರ್ಷಗಳಿಂದ ಕೃಷ್ಣಪ್ಪ ಗಾರ್ಡನ್‌ನಲ್ಲಿ ವಾಸವಿದ್ದ 86 ಕುಟುಂಬಗಳ 300 ಕ್ಕೂ ಹೆಚ್ಚು ಜನರನ್ನು ಒಕ್ಕಲೆಬ್ಬಿಸಲಾಗಿದೆ. ತಮ್ಮ ಮನೆಗಳನ್ನು ಉಳಿಸಿಕೊಳ್ಳಲು ಮುಂದಾದ ಬಡಜನರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ, ಕಾಲಿನಿಂದ ಒದ್ದು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಜನರಿಗಾಗಿಯೇ ಮಾರತ್ತಹಳ್ಳಿಯಲ್ಲಿ 313 ಮನೆಗಳನ್ನು ಸ್ಲಂ ಬೋರ್ಡ್ ನಿರ್ಮಿಸಿದೆ. ಅವುಗಳನ್ನು 303 ಮನಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ ಅಧಿಕಾರಿಗಳು ಲಂಚ ಕೊಟ್ಟವರಿಗೆ, ಹಣ ಕೊಟ್ಟವರಿಗೆ ಎರೆಡೆರಡು ಮನೆ ನೀಡಿದ್ದಾರೆ. ಈ 86 ಕುಟುಂಬಗಳ ಬಡಜನರನ್ನು ನಿರ್ಲಕ್ಷಿಸಲಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸದೇ ಇಂದು ಏಕಾಏಕಿ ಬೀದಿಪಾಲು ಮಾಡಿರುವುದನ್ನು ಖಂಡಿಸಿ ಹೋರಾಟ ನಡೆಸುತ್ತೇವೆ ಎಂದು ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷರಾದ ಕೆ.ಮರಿಯಪ್ಪನವರು ತಿಳಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಅವರು, “ನಾವು ಹಲವು ವರ್ಷಗಳಿಂದ ಈ ಜನರಿಗೆ ಮನೆ ನೀಡಬೇಕೆಂದು ಹೋರಾಟ ನಡೆಸುತ್ತಿದ್ದೇವೆ. ಕನಿಷ್ಠ ತಾತ್ಕಾಲಿಕವಾಗಿ 2 ಎಕರೆ ಜಮೀನು ಕೊಟ್ಟರೆ ಹೇಗೆ ಗುಡಿಸಲು ಹಾಕಿಕೊಂಡು ಜೀವನ ಮಾಡುತ್ತಾರೆ ಎಂದು ಒತ್ತಾಯಿಸಿದ್ದೇವೆ. ಈ ಜನರು ಇದೇ ಸ್ಥಳದ ವಿಳಾಸ ನೀಡಿ ಮತದಾರರು ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ರೇ‍ಷನ್ ಕಾರ್ಡ್ ಪಡೆದಿದ್ದಾರೆ. ಈಗ ಅವರನ್ನು ಒಕ್ಕಲೆಬ್ಬಿಸಿರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಕ್ಕಲೆಬ್ಬಿಸಿದ್ದನ್ನು ವಿರೋಧಿಸಿ ಸಂತ್ರಸ್ತರು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಅಜಿತ್ ರಾಯ್ ಮಾತನಾಡಿ “ಇದು ಸ್ಲಂ ಬೋರ್ಡ್ ಕಡೆಯಿಂದ ನಡೆದಿರುವ ಕೃತ್ಯ. ನಾನು ಇದಕ್ಕೆ ಹೊಣೆಯಲ್ಲ. ಇವತ್ತು ಈ ಜನರಿಗೆ ಉಳಿಯಲು ಮತ್ತು ಊಟದ ವ್ಯವಸ್ಥೆ ಮಾಡುತ್ತೇನೆ” ಎಂದು ಹೇಳಿ ಕೈತೊಳೆದುಕೊಂಡಿದ್ದಾರೆ. ಬಡಜನರು ನಾಳೆ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಸಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...