Homeಕರ್ನಾಟಕಬೆಂಗಳೂರಿನಲ್ಲಿ 86 ಕುಟುಂಬಗಳನ್ನು ಒಕ್ಕಲೆಬ್ಬಿಸಿದ ಅಧಿಕಾರಿಗಳು: ನಾಳೆ ಸ್ಲಂ ಬೋರ್ಡ್ ಮುತ್ತಿಗೆಗೆ ನಿರ್ಧಾರ

ಬೆಂಗಳೂರಿನಲ್ಲಿ 86 ಕುಟುಂಬಗಳನ್ನು ಒಕ್ಕಲೆಬ್ಬಿಸಿದ ಅಧಿಕಾರಿಗಳು: ನಾಳೆ ಸ್ಲಂ ಬೋರ್ಡ್ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಬೆಂಗಳೂರಿನ ಸಿ.ವಿ ರಾಮನ್‌ನಗರ ವಿಧಾನಸಭಾದ ಕ್ಷೇತ್ರದ ನ್ಯೂ ತಿಪ್ಪಸಂದ್ರ ವಾರ್ಡ್‌ನ ಕೃಷ್ಣಪ್ಪ ಗಾರ್ಡನ್‌ನ ಸ್ಲಂನಲ್ಲಿರುವ 86 ಕುಟುಂಬಗಳಿಗೆ ಯಾವುದೇ ಪರ್ಯಾಯ ಪುನರ್ವಸತಿ ವ್ಯವಸ್ಥೇ ಮಾಡದೆ ಏಕಾಏಕಿ ಒಕ್ಕಲೆಬ್ಬಿಸಿದ್ದನ್ನು ಖಂಡಿಸಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸ್ಲಂ ಬೋರ್ಡ್‌ಗೆ ಮುತ್ತಿಗೆ ಹಾಕಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನಿರ್ಧರಿಸಿದೆ.

ಹಲವಾರು ವರ್ಷಗಳಿಂದ ಕೃಷ್ಣಪ್ಪ ಗಾರ್ಡನ್‌ನಲ್ಲಿ ವಾಸವಿದ್ದ 86 ಕುಟುಂಬಗಳ 300 ಕ್ಕೂ ಹೆಚ್ಚು ಜನರನ್ನು ಒಕ್ಕಲೆಬ್ಬಿಸಲಾಗಿದೆ. ತಮ್ಮ ಮನೆಗಳನ್ನು ಉಳಿಸಿಕೊಳ್ಳಲು ಮುಂದಾದ ಬಡಜನರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ, ಕಾಲಿನಿಂದ ಒದ್ದು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಜನರಿಗಾಗಿಯೇ ಮಾರತ್ತಹಳ್ಳಿಯಲ್ಲಿ 313 ಮನೆಗಳನ್ನು ಸ್ಲಂ ಬೋರ್ಡ್ ನಿರ್ಮಿಸಿದೆ. ಅವುಗಳನ್ನು 303 ಮನಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ ಅಧಿಕಾರಿಗಳು ಲಂಚ ಕೊಟ್ಟವರಿಗೆ, ಹಣ ಕೊಟ್ಟವರಿಗೆ ಎರೆಡೆರಡು ಮನೆ ನೀಡಿದ್ದಾರೆ. ಈ 86 ಕುಟುಂಬಗಳ ಬಡಜನರನ್ನು ನಿರ್ಲಕ್ಷಿಸಲಾಗಿದೆ. ಅವರಿಗೆ ಪುನರ್ವಸತಿ ಕಲ್ಪಿಸದೇ ಇಂದು ಏಕಾಏಕಿ ಬೀದಿಪಾಲು ಮಾಡಿರುವುದನ್ನು ಖಂಡಿಸಿ ಹೋರಾಟ ನಡೆಸುತ್ತೇವೆ ಎಂದು ಕರ್ನಾಟಕ ಜನಾಂದೋಲನ ಸಂಘಟನೆಯ ಅಧ್ಯಕ್ಷರಾದ ಕೆ.ಮರಿಯಪ್ಪನವರು ತಿಳಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಅವರು, “ನಾವು ಹಲವು ವರ್ಷಗಳಿಂದ ಈ ಜನರಿಗೆ ಮನೆ ನೀಡಬೇಕೆಂದು ಹೋರಾಟ ನಡೆಸುತ್ತಿದ್ದೇವೆ. ಕನಿಷ್ಠ ತಾತ್ಕಾಲಿಕವಾಗಿ 2 ಎಕರೆ ಜಮೀನು ಕೊಟ್ಟರೆ ಹೇಗೆ ಗುಡಿಸಲು ಹಾಕಿಕೊಂಡು ಜೀವನ ಮಾಡುತ್ತಾರೆ ಎಂದು ಒತ್ತಾಯಿಸಿದ್ದೇವೆ. ಈ ಜನರು ಇದೇ ಸ್ಥಳದ ವಿಳಾಸ ನೀಡಿ ಮತದಾರರು ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ರೇ‍ಷನ್ ಕಾರ್ಡ್ ಪಡೆದಿದ್ದಾರೆ. ಈಗ ಅವರನ್ನು ಒಕ್ಕಲೆಬ್ಬಿಸಿರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಕ್ಕಲೆಬ್ಬಿಸಿದ್ದನ್ನು ವಿರೋಧಿಸಿ ಸಂತ್ರಸ್ತರು ಕೆ.ಆರ್ ಪುರಂ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಅಜಿತ್ ರಾಯ್ ಮಾತನಾಡಿ “ಇದು ಸ್ಲಂ ಬೋರ್ಡ್ ಕಡೆಯಿಂದ ನಡೆದಿರುವ ಕೃತ್ಯ. ನಾನು ಇದಕ್ಕೆ ಹೊಣೆಯಲ್ಲ. ಇವತ್ತು ಈ ಜನರಿಗೆ ಉಳಿಯಲು ಮತ್ತು ಊಟದ ವ್ಯವಸ್ಥೆ ಮಾಡುತ್ತೇನೆ” ಎಂದು ಹೇಳಿ ಕೈತೊಳೆದುಕೊಂಡಿದ್ದಾರೆ. ಬಡಜನರು ನಾಳೆ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಸಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಬೀದಿಗೆ ಬಿದ್ದ ಬಡವರ ಬದುಕು: ಪುನರ್ವಸತಿಯಿಲ್ಲದೆ 86 ಕುಟುಂಬಗಳ ಒಕ್ಕಲೆಬ್ಬಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...