Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...