Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...