Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...