Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...