Homeಮುಖಪುಟಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

"ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ"

- Advertisement -
- Advertisement -

ಬಿಹಾರದ ಭಾಗಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಗಂಡನಿಗೆ ಕೊರೊನಾ ಚಿಕಿತ್ಸೆಗಾಗಿ ದಾಖಲಿಸಿದ್ದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ವಿರುದ್ಧ ನಿರ್ಲಕ್ಷ್ಯದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ದೂಷಿಸಿದ್ದಾರೆ.

ಮಹಿಳೆ ಆರೋಪಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಮಾಯಗಂಜ್ ಮತ್ತು ಪಾಟ್ನಾದಲ್ಲಿ ವೈದ್ಯರ ನಿರ್ಲಕ್ಷ್ಯ ತನ್ನ ಪತಿಯ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯ  12 ನಿಮಿಷಗಳ ವಿಡಿಯೋ ಮನವಿಯಲ್ಲಿ, ಮೂರು ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ತನ್ನ ಪತಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರು, ಅವರ ಕೊಳಕು ಹಾಸಿಗೆಯನ್ನು ಬದಲಾಯಿಸಲು ಸಹ ಸಿಬ್ಬಂದಿ ಸಹಕರಿಸಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ತನ್ನ ಗಂಡನನ್ನು ಮೊದಲು ದಾಖಲಿಸಿದ ಭಾಗಲ್ಪುರದ ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿ ರೆಮ್‌ಡೆಸಿವಿರ್‌ ಅರ್ಧ ಬಾಟಲಿಯನ್ನು ವ್ಯರ್ಥ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

“ನಾವು ಆರ್‌ಟಿ-ಪಿಸಿಆರ್ ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯುತ್ತಿರುವಾಗ, ನೋಯ್ಡಾ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಲು ಹೇಳಿದರು. ನಾವು ಒಪ್ಪಿಕೊಂಡೆವು. ನನ್ನ ತಾಯಿ ಕೂಡ ಅಸ್ವಸ್ಥರಾಗಿದ್ದರು, ಆಸ್ಪತ್ರೆಯಲ್ಲಿ ತುಂಬಾ ನಿರ್ಲಕ್ಷ್ಯವಿತ್ತು. ವೈದ್ಯರು ಹಾಗೆ ಬಂದು ಹೋಗುತ್ತಿದ್ದರು. ಸಿಬ್ಬಂದಿ ಇರುತ್ತಿರಲಿಲ್ಲ. ಔಷಧಿಗಳನ್ನು ನೀಡಲು ನಿರಾಕರಿಸುತ್ತಿದ್ದರು. ನನ್ನ ತಾಯಿ ಸ್ಥಿತಿ ಪರವಾಗಿರಲಿಲ್ಲ. ಆದರೆ ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ” ಎಂದು ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ.

“ಗ್ಲೋಕಲ್ ಆಸ್ಪತ್ರೆಯಲ್ಲಿ ಅಟೆಂಡೆಂಟ್ ಆಗಿದ್ದ ಜ್ಯೋತಿ ಕುಮಾರ್ ಎಂಬ ವ್ಯಕ್ತಿಯ ಬಳಿ ನನ್ನ ಪತಿಗೆ ಕ್ಲೀನ್ ಬೆಡ್‌ಶೀಟ್‌ಗಳನ್ನು ನೀಡಲು ಸಹಾಯ ಮಾಡಬೇಕೆಂದು ವಿನಂತಿಸಿದೆ. ಸಹಾಯ ಮಾಡುತ್ತೇನೆಂದು ಹೇಳಿದ ಆ ವ್ಯಕ್ತಿ ನನ್ನ ದುಪ್ಪಟ್ಟಾ ಎಳೆದು, ಸೊಂಟಕ್ಕೆ ಕೈ ಹಾಕಿ ನಗುತ್ತಿದ್ದರು. ನಾನು ಯಾರಿಗೂ ಹೇಳುವ ಸ್ಥಿತಿಯಲ್ಲಿ ಇರಲಿಲ್ಲ. ಏಕೆಂದರೆ, ನನ್ನ ಪತಿ, ನನ್ನ ತಾಯಿ ಇಲ್ಲಿ ದಾಖಲಾಗಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಮಹಿಳೆ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಗ್ಲೋಕಲ್ ಆಸ್ಪತ್ರೆ ಆರೋಪಿ ನೌಕರನನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ಸಮಿತಿಯನ್ನು ರಚಿಸಲಾಗಿದೆ.

ಮಾಯಾಗಂಜ್‌ನ ಭಾಗಲ್ಪುರ್ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ತನ್ನ ಮತ್ತು ತನ್ನ ಸಹೋದರಿ ಹಲವು ಬಾರಿ ಮನವಿ ಮಾಡಿದರು ನನ್ನ ಗಂಡನಿಗೆ ಆಮ್ಲಜನಕವನ್ನು ನೀಡಲು ನಿರಾಕರಿಸಿದರು ಎಂದಿದ್ದಾರೆ.

ಪಾಟ್ನಾದಲ್ಲಿ (ನಗರದ ರಾಜೇಶ್ವರ ಆಸ್ಪತ್ರೆಯಲ್ಲಿ), ಆಕ್ಸಿಜನ್ ಮಟ್ಟವು ಅಪಾಯಕಾರಿಯಾಗಿ ಕಡಿಮೆಯಾಗಿದ್ದರೂ ಸಹ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಮ್ಲಜನಕ ಸ್ಥಿರವಾದ ನಂತರ, ಸಿಬ್ಬಂದಿ ಅವರಿಗೆ ಆಮ್ಲಜನಕ ಸರಬರಾಜನ್ನು ಕಡಿತಗೊಳಿಸಿ, ಬ್ಲಾಕ್ ಮಾರ್ಕೆಟ್‌ಯಿಂದ ಆಕ್ಸಿಜನ್ ಸಿಲಿಂಡರ್‌ ಖರೀದಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದರು ಎಂದು ಹೇಳಿದ್ದಾರೆ.

“ಪ್ರಾಥಮಿಕ ವಿಚಾರಣೆಯಲ್ಲಿ ಮಹಿಳೆಯ ಆರೋಪವನ್ನು ಬೆಂಬಲಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಆದರೆ ಆರೋಪಗಳು ನಿಜವೆಂದು ಸಾಬೀತಾದರೆ, ಖಂಡಿತವಾಗಿಯೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಆಸ್ಪತ್ರೆ ತಿಳಿಸಿದೆ.


ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...