Homeಮುಖಪುಟಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

"ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ"

- Advertisement -
- Advertisement -

ಬಿಹಾರದ ಭಾಗಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಗಂಡನಿಗೆ ಕೊರೊನಾ ಚಿಕಿತ್ಸೆಗಾಗಿ ದಾಖಲಿಸಿದ್ದ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ವಿರುದ್ಧ ನಿರ್ಲಕ್ಷ್ಯದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ದೂಷಿಸಿದ್ದಾರೆ.

ಮಹಿಳೆ ಆರೋಪಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೊತೆಗೆ ಮಾಯಗಂಜ್ ಮತ್ತು ಪಾಟ್ನಾದಲ್ಲಿ ವೈದ್ಯರ ನಿರ್ಲಕ್ಷ್ಯ ತನ್ನ ಪತಿಯ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯ  12 ನಿಮಿಷಗಳ ವಿಡಿಯೋ ಮನವಿಯಲ್ಲಿ, ಮೂರು ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ತನ್ನ ಪತಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರು, ಅವರ ಕೊಳಕು ಹಾಸಿಗೆಯನ್ನು ಬದಲಾಯಿಸಲು ಸಹ ಸಿಬ್ಬಂದಿ ಸಹಕರಿಸಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ತನ್ನ ಗಂಡನನ್ನು ಮೊದಲು ದಾಖಲಿಸಿದ ಭಾಗಲ್ಪುರದ ಗ್ಲೋಕಲ್ ಆಸ್ಪತ್ರೆಯ ಸಿಬ್ಬಂದಿ ರೆಮ್‌ಡೆಸಿವಿರ್‌ ಅರ್ಧ ಬಾಟಲಿಯನ್ನು ವ್ಯರ್ಥ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

“ನಾವು ಆರ್‌ಟಿ-ಪಿಸಿಆರ್ ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯುತ್ತಿರುವಾಗ, ನೋಯ್ಡಾ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಲು ಹೇಳಿದರು. ನಾವು ಒಪ್ಪಿಕೊಂಡೆವು. ನನ್ನ ತಾಯಿ ಕೂಡ ಅಸ್ವಸ್ಥರಾಗಿದ್ದರು, ಆಸ್ಪತ್ರೆಯಲ್ಲಿ ತುಂಬಾ ನಿರ್ಲಕ್ಷ್ಯವಿತ್ತು. ವೈದ್ಯರು ಹಾಗೆ ಬಂದು ಹೋಗುತ್ತಿದ್ದರು. ಸಿಬ್ಬಂದಿ ಇರುತ್ತಿರಲಿಲ್ಲ. ಔಷಧಿಗಳನ್ನು ನೀಡಲು ನಿರಾಕರಿಸುತ್ತಿದ್ದರು. ನನ್ನ ತಾಯಿ ಸ್ಥಿತಿ ಪರವಾಗಿರಲಿಲ್ಲ. ಆದರೆ ನನ್ನ ಪತಿಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಅವರು ನೀರಿಗಾಗಿ ಕೈ ಸನ್ನೆ ಮಾಡುತ್ತಿದ್ದರು, ಆದರೆ ಯಾರೂ ಅವರಿಗೆ ನೀರನ್ನೂ ನೀಡಲಿಲ್ಲ” ಎಂದು ಸಂತ್ರಸ್ತೆ ವಿಡಿಯೋದಲ್ಲಿ ಹೇಳಿದ್ದಾರೆ.

“ಗ್ಲೋಕಲ್ ಆಸ್ಪತ್ರೆಯಲ್ಲಿ ಅಟೆಂಡೆಂಟ್ ಆಗಿದ್ದ ಜ್ಯೋತಿ ಕುಮಾರ್ ಎಂಬ ವ್ಯಕ್ತಿಯ ಬಳಿ ನನ್ನ ಪತಿಗೆ ಕ್ಲೀನ್ ಬೆಡ್‌ಶೀಟ್‌ಗಳನ್ನು ನೀಡಲು ಸಹಾಯ ಮಾಡಬೇಕೆಂದು ವಿನಂತಿಸಿದೆ. ಸಹಾಯ ಮಾಡುತ್ತೇನೆಂದು ಹೇಳಿದ ಆ ವ್ಯಕ್ತಿ ನನ್ನ ದುಪ್ಪಟ್ಟಾ ಎಳೆದು, ಸೊಂಟಕ್ಕೆ ಕೈ ಹಾಕಿ ನಗುತ್ತಿದ್ದರು. ನಾನು ಯಾರಿಗೂ ಹೇಳುವ ಸ್ಥಿತಿಯಲ್ಲಿ ಇರಲಿಲ್ಲ. ಏಕೆಂದರೆ, ನನ್ನ ಪತಿ, ನನ್ನ ತಾಯಿ ಇಲ್ಲಿ ದಾಖಲಾಗಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಮಹಿಳೆ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಸರ್ಕಾರಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ ನಂತರ, ಗ್ಲೋಕಲ್ ಆಸ್ಪತ್ರೆ ಆರೋಪಿ ನೌಕರನನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ಸಮಿತಿಯನ್ನು ರಚಿಸಲಾಗಿದೆ.

ಮಾಯಾಗಂಜ್‌ನ ಭಾಗಲ್ಪುರ್ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ತನ್ನ ಮತ್ತು ತನ್ನ ಸಹೋದರಿ ಹಲವು ಬಾರಿ ಮನವಿ ಮಾಡಿದರು ನನ್ನ ಗಂಡನಿಗೆ ಆಮ್ಲಜನಕವನ್ನು ನೀಡಲು ನಿರಾಕರಿಸಿದರು ಎಂದಿದ್ದಾರೆ.

ಪಾಟ್ನಾದಲ್ಲಿ (ನಗರದ ರಾಜೇಶ್ವರ ಆಸ್ಪತ್ರೆಯಲ್ಲಿ), ಆಕ್ಸಿಜನ್ ಮಟ್ಟವು ಅಪಾಯಕಾರಿಯಾಗಿ ಕಡಿಮೆಯಾಗಿದ್ದರೂ ಸಹ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಮ್ಲಜನಕ ಸ್ಥಿರವಾದ ನಂತರ, ಸಿಬ್ಬಂದಿ ಅವರಿಗೆ ಆಮ್ಲಜನಕ ಸರಬರಾಜನ್ನು ಕಡಿತಗೊಳಿಸಿ, ಬ್ಲಾಕ್ ಮಾರ್ಕೆಟ್‌ಯಿಂದ ಆಕ್ಸಿಜನ್ ಸಿಲಿಂಡರ್‌ ಖರೀದಿಸಲು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದರು ಎಂದು ಹೇಳಿದ್ದಾರೆ.

“ಪ್ರಾಥಮಿಕ ವಿಚಾರಣೆಯಲ್ಲಿ ಮಹಿಳೆಯ ಆರೋಪವನ್ನು ಬೆಂಬಲಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಆದರೆ ಆರೋಪಗಳು ನಿಜವೆಂದು ಸಾಬೀತಾದರೆ, ಖಂಡಿತವಾಗಿಯೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಆಸ್ಪತ್ರೆ ತಿಳಿಸಿದೆ.


ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...